ಮೈಸೂರು ದಸರಾ: ರೋಮಾಂಚನಕಾರಿ ಜಟ್ಟಿ ಕಾಳಗದಲ್ಲಿ ಗೆಲುವು ಯಾರಿಗೆ?
ಮೈಸೂರು, ಅಕ್ಟೋಬರ್, 05: ಮೈಸೂರು ಅರಮನೆ ಕರಿಕಲ್ಲು ತೊಟ್ಟಿಯಲ್ಲಿ ಎರಡು ಜೊತೆ ಜಟ್ಟಿಗಳ ನಡುವೆ ರಕ್ತ ಚಿಮ್ಮಿಸುವ ರೋಮಾಂಚನಕಾರಿ ವಜ್ರಮುಷ್ಠಿ ಕಾಳಗ ಇಂದು ಜಂಬೂ ಸವಾರಿಗೂ ಮುನ್ನ ನಡೆಯಿತು.
ಅರಮನೆಯ ಕಲ್ಯಾಣ ಮಂಟಪದ ಮುಂಭಾಗದ ಕನ್ನಡಿ ತೊಟ್ಟಿ ಆವರಣದಲ್ಲಿ ಕೃತಕವಾಗಿ ಮಟ್ಟಿ ಅಖಾಡವನ್ನು ನಿರ್ಮಿಸಲಾಗಿತ್ತು. ಅಕಾಡದಲ್ಲಿ ಆನೆ ದಂತದಿಂದ ತಯಾರಿಸಿದ 'ವಜ್ರನಖ ಎಂಬ ಆಯುಧವನ್ನು ಕೈಗಳಲ್ಲಿ ಹಿಡಿದ ಜೆಟ್ಟಿಗಳು ಪರಸ್ಪರ ಕದಾಟಕ್ಕಿಳಿದರು. ಎದುರಾಳಿ ಜಟ್ಟಿಯ ತಲೆಯಿಂದ ರಕ್ತ ಬಂದ ಕೂಡಲೇ ಕಾಳಗ ಕೊನೆಗೊಂಡಿತು. ರಕ್ತ ಬಂದವರು ಸೋತರೆ ಅದಕ್ಕೆ ಕಾರಣರಾದವರು ಮೇಲುಗೈ ಸಾಧಿಸಿದರು. ಬಳಿಕ ಸೋತು ಗೆದ್ದವರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕೈಮುಗಿದು ನಿಂತು ಸ್ವಾಮಿ ನಿಷ್ಠೆ ಪ್ರದರ್ಶಿಸಿದರು.
ಚೆನ್ನಪಟ್ಟಣದ ಮನೋಜ್ ಜೆಟ್ಟಿ, ಚಾಮರಾಜ ನಗರದ ಅಚ್ಯುತ್ ಜೆಟ್ಟಿ ನಡುವೆ ಹಾಗೂ ಮೈಸೂರಿನ ವಿಷ್ಣು ಬಾಲಾಜಿ ಜೆಟ್ಟಿ ಬೆಂಗಳೂರಿನ ತಾರಾನಾಥ ಜೆಟ್ಟಿ ನಡುವೆ ಜಟ್ಟಿ ಕಾಳಗ ನಡೆಯಿತು. ಬೆಳಗ್ಗೆ 11 ಗಂಟೆಗೆ ಅಖಾಡದಲ್ಲಿ ಎರಡು ಜೋಡಿಗಳು ರಾಜ ವಂಶಸ್ಥರ ಅನುಮತಿಗಾಗಿ ಕೈ ಮುಗಿದು ಕಾಯುತ್ತಿದ್ದರು. 11:10ರ ಸುಮಾರಿಗೆ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಒಡೆಯರ್ ಅರಮನೆಯ ಕಲ್ಯಾಣ ತೊಟ್ಟಿಯಿಂದ ಕೂಸ್ಮಾಂಡ ಹಾಗೂ ಉತ್ತರ ಪೂಜೆ ನೆರವೇರಿಸಿದ ಬಳಿಕ ಹೊರ ಬಂದು ಕಾಳಗ ನಡೆಸುವಂತೆ ಸೂಚನೆ ನೀಡಿದ್ದರು. ಅದನ್ನು ಗಮನಿಸಿದ ಜಟ್ಟಿಗಳು ಕಾಳಗ ಆರಂಭಿಸಿದ್ದರು. ಇದಕ್ಕೂ ಮುನ್ನ ಕುಲದೇವತೆ ನಿಂಬುಜಾಂಬೆ ದೇವಿಗೆ ಪೂಜೆ ಸಲ್ಲಿಸಿ ಜಟ್ಟಿಗಳು ಅರಮನೆಗೆ ಆಗಮಿಸಿದ್ದರು. ಕೇಶಮುಂಡನ ಮಾಡಿಸಿಕೊಂಡು ಬಂದಿದ್ದ ಅವರು ಮೈ ತುಂಬಾ ಕೆಂಪು ಮಣ್ಣು ಬಳಿದುಕೊಂಡಿದ್ದರು.

ಕಾಳಗ ಚಾಲನೆಗೆ ಯದುವೀರ್ ಸೂಚನೆ
ಮೈಸೂರಿನ ಮಾಧವ ಜೆಟ್ಟಿ, ಚಾಮರಾಜನಗರದ ಚೆನ್ನಕುಟ್ಟಿ ಜೆಟ್ಟಿ, ಬಾಲಾಜಿ, ಚೆನ್ನಪಟ್ಟಣದ ಪುರುಷೋತ್ತಮ್, ಬೆಂಗಳೂರಿನ ಕೃಷ್ಣ ಜೆಟ್ಟಿ ಸೇರಿದಂತೆ ಐದು ಜನ ವಸ್ತಾರ್ಗಳಾಗಿ ಕಾರ್ಯನಿರ್ವಹಿಸಿದರು. ಒಂದೇ ಮಟ್ಟಿಯಲ್ಲಿ ಎರಡು ಜೊತೆ ಕುಸ್ತಿ ನಡೆಯುವುದನ್ನು ಗಮನಿಸಲಾಗಿತ್ತು. ಜಗಜಟ್ಟಿಗಳ ನಡುವಿನ ಕುಸ್ತಿ ರೋಚಕತೆಯನ್ನು ಸವಿಯುತ್ತಿದ್ದಂತೆ ಕೇವಲ 30 ಸೆಕೆಂಡುಗಳಲ್ಲಿ ಕುಸ್ತಿ ಪೂರ್ಣಗೊಂಡಿತು.

ಜಟ್ಟಿ ಕಾಳಗ ಮುಕ್ತಾಯ ಆಗಿದ್ದು ಹೇಗೆ?
ಬಳಿಕ ಜಗ ಜಟ್ಟಿಗಳಂತೆ ಕಾದಾಡಿದ ಜಟ್ಟಿಗಳು ರಾಜರ ಆಗಮನವನ್ನು ನಿರೀಕ್ಷಿಸುತ್ತಾ ಮಟ್ಟಿಯೊಳಗೆ ಕೈ ಮುಗಿದು ನಿಂತರು. ನಂತರ ಕಲ್ಯಾಣಿ ತೊಟ್ಟಿಯಿಂದ ಹೊರಬಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜಿಟ್ಟಿಗಳಿಗೆ ಶುಭಕೋರಿ ವಿಜಯ ಯಾತ್ರೆಗೆ ಹೊರಟರು. ಅಲ್ಲಿಗೆ ಜಟ್ಟಿಕಾಳಗ ಮುಕ್ತಾಯವಾಯಿತು.

ಗಮನ ಸೆಳೆದ ಕೆಲವು ಸ್ತಬ್ಧಚಿತ್ರಗಳು
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಜಯ ದಶಮಿಯ ಜಂಬೂ ಸವಾರಿಗೂ ಮುನ್ನ ರಾಜ್ಯದ ಎಲ್ಲಾ ಜಿಲ್ಲೆಗಳ ಸ್ತಬ್ಧ ಚಿತ್ರ ಪ್ರದರ್ಶನ ನಡೆಯಿತು. ನೆಲದ ಸಂಸ್ಕೃತಿಯನ್ನು ಬಿಂಬಿಸುವ ದಕ್ಷಿಣ ಕನ್ನಡ ಜಿಲ್ಲೆಯ ಸ್ತಬ್ಧ ಚಿತ್ರ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ಕಂಬಳ, ಹುಲಿ ಕುಣಿತ, ಭೂತಾರಾಧನೆಯ್ನು ಬಿಂಬಿಸುವ ಸ್ತಬ್ಧ ಗಮನ ಸೆಳೆಯಿತು. ಇನ್ನು ಚಾಮರಾಜನಗರದಿಂದ ಏರ್ಪಡಿಸಿದ್ದ ಪುನೀತ್ ರಾಜ್ಕುಮಾರ್ ಅವರ ಸ್ತಬ್ದಚಿತ್ರ ಗಮನ ಸೆಳೆಯಿತು. ಸ್ತಬ್ಧ ಚಿತ್ರದ ಮುಂಭಾಗದಲ್ಲಿ ಆನೆಗಳ ಹಾಗೂ ಹುಲಿಯ ಬೃಹತ್ ಚಿತ್ರ ಅಳವಡಿಸಲಾಗಿತ್ತು. ಹಿಂಭಾಗದಲ್ಲಿ ಪುನೀತ್ ಅವರ ಭಾವಚಿತ್ರ ಗಮನ ಸೆಳೆಯಿತು.

ಜಂಬೂ ಸವಾರಿ ವೀಕ್ಷಣೆಗೆ ನೆರೆದಿದ್ದ ಜನಸಾಗರ
ನಾಡಹಬ್ಬ ದಸರಾ ಜಂಬೂ ಸವಾರಿ ಮೆರವಣಿಗೆ ಈಗಾಗಲೇ ರಾಜಬೀದಿಯಲ್ಲಿ ಸಾಗಿದ್ದು, ಇದನ್ನು ನೋಡಲು ಜನಸಾಗರವೇ ನೆರೆದಿತ್ತು. ಈ ಬಾರಿ ಜಂಬೂಸವಾರಿ ಮೆರವಣಿಗೆಯಲ್ಲಿ 47 ಸ್ತಬ್ಧಚಿತ್ರಗಳು ಭಾಗಿ ಆಗಿದ್ದು, ಕೆಲವೊಂದು ಸ್ತಬ್ಧಚಿತ್ರಗಳು ಗಮನ ಸೆಳೆದಿವೆ. 31 ಜಿಲ್ಲೆಗಳ ಸ್ತಬ್ಧಚಿತ್ರಗಳ ಜೊತಗೆ ಸ್ತಬ್ಧಚಿತ್ರ ಉಪ ಸಮಿತಿಯ 3 ಸ್ತಬ್ದ ಚಿತ್ರಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳು, ನಿಗಮಗಳ ಸ್ತಬ್ದ ಚಿತ್ರಗಳು ಮೆರವಣಿಗೆಯಲ್ಲಿ ಸಾಗಿದವು.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications