ಮೈಸೂರು ದಸರಾ: ಗಜಪಡೆಗೆ ಭಾರ ಹೊರಿಸುವ ತಾಲೀಮು ಶುರು
ಮೈಸೂರು, ಆಗಸ್ಟ್, 18: 2022ನೇ ಸಾಲಿನ ಮೈಸೂರು ದಸರಾಕ್ಕೆ ಭರದ ಸಿದ್ಧತೆ ನಡೆದಿದ್ದು, ಗಜಪಡೆಗೆ ಇಂದಿನಿಂದ ಭಾರ ಹೊರಿಸುವ ತಾಲೀಮಿಗೆ ಚಾಲನೆ ನೀಡಲಾಗಿದೆ. ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆ ಅರಮನೆಗೆ ಆಗಮಿಸಿದ್ದವು. ಇದೀಗ ಅರಮನೆ ಆವರಣದಲ್ಲಿ ಗಜಪಡೆಯ ವಾಸ್ತವ್ಯ ಹೂಡಿದ್ದು, ನಾಯಕ ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಭಾರ ಹೊತ್ತು ಸಾಗಿದೆ.
ದಿನಕ್ಕೆ ಎರಡು ಬಾರಿ 5 ಕಿಲೋ ಮೀಟರ್ ನಡೆಸಲು ತೀರ್ಮಾನಿಸಲಾಗಿದೆ. ಗಜಪಡೆಗೆ 300 ಕೆ.ಜಿ ಮರಳಿನ ಮೂಟೆ ಹೊರಿಸುವ ಮುಖಾಂತರ ತಾಲೀಮು ನಡೆಸಲಾಗಿದೆ. ಜಂಬೂ ಸವಾರಿ ಸಾಗುವ ರಾಜ ಬೀದಿಗಳಲ್ಲಿ ಅಭಿಮನ್ಯು ನೇತೃತ್ವದ ಗಜಪಡೆ ಭಾರ ಹೊತ್ತು ಸಾಗಿದೆ. ಆನೆಗಳ ಮೇಲಿಡುವ ಗಾದಿ ಮತ್ತು ನಮ್ದಾಗೆ ಪೂಜೆ ಸಲ್ಲಿಸಿ ತಾಲೀಮಿಗೆ ಚಾಲನೆ ನೀಡಲಾಯಿತು. ಆನೆಗಳಿಗೆ ಅರಮನೆ ಆವರಣದಲ್ಲಿರುವ ಶ್ರೀ ಕೋಡಿ ಸೋಮೇಶ್ವರ ದೇವಾಲಯದ ಮುಂಭಾಗ ಪೂಜೆ ಸಲ್ಲಿಸಲಾಯಿತು. ಆನೆಗಳ ಮೇಲೆ ಗಾದಿ, ನಮ್ದಾ ಇಟ್ಟು ತಾಲೀಮು ಆರಂಭಿಸಿದ್ದಾರೆ.
ಗಜಪಡೆಗೆ ಹೊರಿಸಲಾದ ಮೂಟೆಯ ಭಾರ?
ಈ ಬಗ್ಗೆ ಡಿಸಿಎಫ್ ಡಾ.ವಿ.ಕರಿಕಾಳನ್ ಮಾತನಾಡಿ ಇಂದು ತಾಲೀಮು ನಡೆಸಲಾಗುತ್ತಿದೆ. ಮೊದಲು 300 ಕೆ.ಜಿ ಮರಳಿನ ಮೂಟೆ ಇಟ್ಟು ತಾಲೀಮು ನಡೆಸಲಾಗುತ್ತಿದೆ. ಅರ್ಜುನನನ್ನು ಬಿಟ್ಟು 5 ಗಂಡು ಆನೆಗಳಿಗೆ ಭಾರ ಹೊರಿಸುವ ತಾಲೀಮನ್ನು ಐದು ದಿನ ನಡೆಸಲಾಗುತ್ತದೆ. 300 ಕೆ.ಜಿ.ಆದ ನಂತರ ಮತ್ತೆ ಹೆಚ್ಚಿಸುತ್ತೇವೆ. 750 ಕೆ.ಜಿ ಬರುವ ತನಕ ತಾಲೀಮು ನಡೆಸುತ್ತೇವೆ. ಇಲ್ಲಿಂದ ಬನ್ನಿಮಂಟಪ 5 ಕಿಲೋ ಮಿಟರ್ ಇದ್ದು, ನಾವು ಈಗಾಗಲೇ ಎರಡು ಬರಿ ಅವುಗಳನ್ನು ನಡೆಸಿದ್ದೇವೆ.

ಅಲ್ಲಿಗೆ ತಲುಪಲು ಒಂದು ಗಂಟೆಗೂ ಹೆಚ್ಚು ಸಮಯ ಬೇಕಾಯಿತು. ಇವತ್ತು ಕೂಡ ಭಾರ ಹೊತ್ತು ಆನೆಗಳು ಸಾಗಲಿವೆ. ಸೆಪ್ಟೆಂಬರ್ ಮೊದಲ ವಾರ ಎರಡನೇ ಹಂತದ ಆನೆಯನ್ನು ಕರೆತರಲಾಗುತ್ತದೆ. ಮರಳು ಮೂಟೆ 300 ಕೆ.ಜಿ, ನಮ್ದಾ, ಗಾದಿ, ಹಗ್ಗ ಸೇರಿ 500ರಿಂದ 550ಕೆ.ಜಿ ತೂಕ ಹೊತ್ತು ಆನೆಗಳು ಸಾಗುತ್ತಿವೆ. ಹಂತ ಹಂತವಾಗಿ ಭಾರ ಹೆಚ್ಚಿಸುವ ಮೂಲಕ ಮರದ ಅಂಬಾರಿ ಕಟ್ಟಿ ತಾಲೀಮು ನಡೆಸಲಾಗುತ್ತದೆ ಎಂದು ಡಿಸಿಎಫ್ ಡಾ.ವಿ.ಕರಿಕಾಳನ್ ತಿಳಿಸಿದರು.

ಮೊದಲು 300 ಕೆ.ಜಿ ತೂಕದ ಮರಳು ಮೂಟೆಯನ್ನು ಇಟ್ಟು ತಾಲೀಮು ನಡೆಸಲಾಗುತ್ತಿದೆ. ಹಂತ ಹಂತವಾಗಿ ತೂಕವನ್ನು ಹೆಚ್ಚಿಸಿ ಜಂಬೂ ಸವಾರಿ ವೇಳೆಗೆ 750 ಕೆ.ಜಿ. ಭಾರ ಹೋರಲು ಗಜಪಡೆಯನ್ನು ಸಜ್ಜುಗೊಳಿಸಲಾಗುತ್ತದೆ. ಅದಕ್ಕಾಗಿ ಈಗಾಗಲೇ ವಿಶೇಷ ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದೆ. ಗಜಪಡೆಯ ಭುಜದ ಬಲವನ್ನು ಹೆಚ್ಚಿಸಲು ಅರಣ್ಯ ಇಲಾಖೆ ಈಗಾಗಲೇ ಕ್ರಮ ಕೈಗೊಂಡಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications