ಮೈಸೂರು ದಸರಾ: ಗಜಪಡೆಗೆ ಭಾರ ಹೊರಿಸುವ ತಾಲೀಮು ಶುರು
ಮೈಸೂರು, ಆಗಸ್ಟ್, 18: 2022ನೇ ಸಾಲಿನ ಮೈಸೂರು ದಸರಾಕ್ಕೆ ಭರದ ಸಿದ್ಧತೆ ನಡೆದಿದ್ದು, ಗಜಪಡೆಗೆ ಇಂದಿನಿಂದ ಭಾರ ಹೊರಿಸುವ ತಾಲೀಮಿಗೆ ಚಾಲನೆ ನೀಡಲಾಗಿದೆ. ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆ ಅರಮನೆಗೆ ಆಗಮಿಸಿದ್ದವು. ಇದೀಗ ಅರಮನೆ ಆವರಣದಲ್ಲಿ ಗಜಪಡೆಯ ವಾಸ್ತವ್ಯ ಹೂಡಿದ್ದು, ನಾಯಕ ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಭಾರ ಹೊತ್ತು ಸಾಗಿದೆ.
ದಿನಕ್ಕೆ ಎರಡು ಬಾರಿ 5 ಕಿಲೋ ಮೀಟರ್ ನಡೆಸಲು ತೀರ್ಮಾನಿಸಲಾಗಿದೆ. ಗಜಪಡೆಗೆ 300 ಕೆ.ಜಿ ಮರಳಿನ ಮೂಟೆ ಹೊರಿಸುವ ಮುಖಾಂತರ ತಾಲೀಮು ನಡೆಸಲಾಗಿದೆ. ಜಂಬೂ ಸವಾರಿ ಸಾಗುವ ರಾಜ ಬೀದಿಗಳಲ್ಲಿ ಅಭಿಮನ್ಯು ನೇತೃತ್ವದ ಗಜಪಡೆ ಭಾರ ಹೊತ್ತು ಸಾಗಿದೆ. ಆನೆಗಳ ಮೇಲಿಡುವ ಗಾದಿ ಮತ್ತು ನಮ್ದಾಗೆ ಪೂಜೆ ಸಲ್ಲಿಸಿ ತಾಲೀಮಿಗೆ ಚಾಲನೆ ನೀಡಲಾಯಿತು. ಆನೆಗಳಿಗೆ ಅರಮನೆ ಆವರಣದಲ್ಲಿರುವ ಶ್ರೀ ಕೋಡಿ ಸೋಮೇಶ್ವರ ದೇವಾಲಯದ ಮುಂಭಾಗ ಪೂಜೆ ಸಲ್ಲಿಸಲಾಯಿತು. ಆನೆಗಳ ಮೇಲೆ ಗಾದಿ, ನಮ್ದಾ ಇಟ್ಟು ತಾಲೀಮು ಆರಂಭಿಸಿದ್ದಾರೆ.
ಗಜಪಡೆಗೆ ಹೊರಿಸಲಾದ ಮೂಟೆಯ ಭಾರ?
ಈ ಬಗ್ಗೆ ಡಿಸಿಎಫ್ ಡಾ.ವಿ.ಕರಿಕಾಳನ್ ಮಾತನಾಡಿ ಇಂದು ತಾಲೀಮು ನಡೆಸಲಾಗುತ್ತಿದೆ. ಮೊದಲು 300 ಕೆ.ಜಿ ಮರಳಿನ ಮೂಟೆ ಇಟ್ಟು ತಾಲೀಮು ನಡೆಸಲಾಗುತ್ತಿದೆ. ಅರ್ಜುನನನ್ನು ಬಿಟ್ಟು 5 ಗಂಡು ಆನೆಗಳಿಗೆ ಭಾರ ಹೊರಿಸುವ ತಾಲೀಮನ್ನು ಐದು ದಿನ ನಡೆಸಲಾಗುತ್ತದೆ. 300 ಕೆ.ಜಿ.ಆದ ನಂತರ ಮತ್ತೆ ಹೆಚ್ಚಿಸುತ್ತೇವೆ. 750 ಕೆ.ಜಿ ಬರುವ ತನಕ ತಾಲೀಮು ನಡೆಸುತ್ತೇವೆ. ಇಲ್ಲಿಂದ ಬನ್ನಿಮಂಟಪ 5 ಕಿಲೋ ಮಿಟರ್ ಇದ್ದು, ನಾವು ಈಗಾಗಲೇ ಎರಡು ಬರಿ ಅವುಗಳನ್ನು ನಡೆಸಿದ್ದೇವೆ.

ಅಲ್ಲಿಗೆ ತಲುಪಲು ಒಂದು ಗಂಟೆಗೂ ಹೆಚ್ಚು ಸಮಯ ಬೇಕಾಯಿತು. ಇವತ್ತು ಕೂಡ ಭಾರ ಹೊತ್ತು ಆನೆಗಳು ಸಾಗಲಿವೆ. ಸೆಪ್ಟೆಂಬರ್ ಮೊದಲ ವಾರ ಎರಡನೇ ಹಂತದ ಆನೆಯನ್ನು ಕರೆತರಲಾಗುತ್ತದೆ. ಮರಳು ಮೂಟೆ 300 ಕೆ.ಜಿ, ನಮ್ದಾ, ಗಾದಿ, ಹಗ್ಗ ಸೇರಿ 500ರಿಂದ 550ಕೆ.ಜಿ ತೂಕ ಹೊತ್ತು ಆನೆಗಳು ಸಾಗುತ್ತಿವೆ. ಹಂತ ಹಂತವಾಗಿ ಭಾರ ಹೆಚ್ಚಿಸುವ ಮೂಲಕ ಮರದ ಅಂಬಾರಿ ಕಟ್ಟಿ ತಾಲೀಮು ನಡೆಸಲಾಗುತ್ತದೆ ಎಂದು ಡಿಸಿಎಫ್ ಡಾ.ವಿ.ಕರಿಕಾಳನ್ ತಿಳಿಸಿದರು.

ಮೊದಲು 300 ಕೆ.ಜಿ ತೂಕದ ಮರಳು ಮೂಟೆಯನ್ನು ಇಟ್ಟು ತಾಲೀಮು ನಡೆಸಲಾಗುತ್ತಿದೆ. ಹಂತ ಹಂತವಾಗಿ ತೂಕವನ್ನು ಹೆಚ್ಚಿಸಿ ಜಂಬೂ ಸವಾರಿ ವೇಳೆಗೆ 750 ಕೆ.ಜಿ. ಭಾರ ಹೋರಲು ಗಜಪಡೆಯನ್ನು ಸಜ್ಜುಗೊಳಿಸಲಾಗುತ್ತದೆ. ಅದಕ್ಕಾಗಿ ಈಗಾಗಲೇ ವಿಶೇಷ ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದೆ. ಗಜಪಡೆಯ ಭುಜದ ಬಲವನ್ನು ಹೆಚ್ಚಿಸಲು ಅರಣ್ಯ ಇಲಾಖೆ ಈಗಾಗಲೇ ಕ್ರಮ ಕೈಗೊಂಡಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications