ದಸರಾ ಗಜರಾಜರಿಗೆ ಬೆಣ್ಣೆಯಲ್ಲಿ ಬೇಯಿಸಿದ ಘಮಘಮಿಸುವ ತರಹೇವಾರಿ ಖಾದ್ಯ
ಮೈಸೂರು, ಸೆಪ್ಟೆಂಬರ್. 28 : ಕಾಡಿನಲ್ಲಿ ಪೌಷ್ಠಿಕ ಆಹಾರ ದೊರೆಯದೆ ಕೆಲವು ಆನೆಗಳು ಸೊರಗಿರುತ್ತವೆ. ಮತ್ತೆ ಕೆಲವು ತೂಕ ಕಳೆದುಕೊಂಡಿರುತ್ತವೆ. ಅದರಲ್ಲೂ ಕಳೆದ ಮೂರು ವರ್ಷದಿಂದ ತೀವ್ರ ಬರ, ಹಸಿರು ನಾಶ, ನೀರು, ಬಿದಿರು ಆಹಾರ ಸಿಗದೆ ಆನೆಗಳು ಪರದಾಡಿವೆ.
ಕಳೆದ ದಸರಾ ಸಂದರ್ಭದಲ್ಲಿ ತಮ್ಮ ತೂಕ ಹೆಚ್ಚಿಸಿಕೊಂಡು ಹೋಗಿದ್ದ ಆನೆಗಳು ಈಗ ಸರಾಸರಿ 200ರಿಂದ 300 ಕೆಜಿ ತೂಕ ಕಳೆದುಕೊಂಡಿವೆ. ಅದರಲ್ಲೂ ಅರ್ಜುನ 350 ಕೆಜಿ ತೂಕ ಕಳೆದುಕೊಂಡಿದ್ದಾನೆ. ಈ ಆನೆಗಳನ್ನು ದಸರಾಗೆ ಸಜ್ಜುಗೊಳಿಸುವ ಹೊಣೆ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಜವಾಬ್ದಾರಿಯಾಗಿದೆ.
ಈಗ ಅವುಗಳನ್ನು ಸಲಹುವ, ಪೋಷಿಸುವ ಕೆಲಸ ಆರಂಭವಾಗಿದೆ. ಒಂದೆಡೆ ಪ್ರತಿನಿತ್ಯ ತಾಲೀಮು ನಡೆಯುತ್ತಿದ್ದರೆ, ಮತ್ತೊಂದೆಡೆ ಗಜಪಡೆಗಳಿಗೆ ರಾಜಾತಿಥ್ಯ ಜೋರಾಗಿಯೇ ಸಾಗುತ್ತಿದೆ. ಅರಮನೆಗೆ ಪ್ರವೇಶ ಪಡೆದ ಮರುದಿನದಿಂದಲೇ ಅಂದರೆ ಸೆ.6ರಿಂದಲೇ ಗಜ ಪಾಕಶಾಲೆ ಆರಂಭವಾಗಿದೆ.

ಗಜಪಡೆಗೆ ಸಮಯಕ್ಕೆ ಸರಿಯಾಗಿ ಶಕ್ತಿಯುತ, ಸ್ವಾದಿಷ್ಟ ಆಹಾರಗಳನ್ನು ನೀಡುವ ಮೂಲಕ ಅವುಗಳನ್ನು ದೈಹಿಕವಾಗಿ ಬಲಿಷ್ಠಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಅವುಗಳಿಗೆ ವಿಶೇಷ ಆಹಾರ ನೀಡಿ ಉಪಚಾರ ಮಾಡಿದರೆ ಮಾತ್ರ ಜಂಬೂ ಸವಾರಿಯಲ್ಲಿ ಆನೆಗಳು ರಾಜಗಾಂಭೀರ್ಯದಲ್ಲಿ ನಡೆಯಲು ಸಾಧ್ಯ.
ಹೀಗಾಗಿ ಆನೆಗಳ ಶಕ್ತಿ ಮತ್ತು ಗಾತ್ರಕ್ಕೆ ಅನುಸಾರವಾಗಿ ಬೆಳಗ್ಗೆ ಮತ್ತು ಸಂಜೆ ವಿಶೇಷ ಆಹಾರ ಕೊಡಲಾಗುತ್ತದೆ. ಬೆಳಗ್ಗೆ ತಾಲೀಮು ಆರಂಭಿಸುವ ಮುನ್ನ 15ರಿಂದ 20 ಕೆಜಿ ಕಾಳುಗಳ ಉಂಡೆ, ಅಲ್ಲಿಂದ ಬಂದ ಮೇಲೆ ತರಕಾರಿಗಳ ಉಂಡೆ, ಮಧ್ಯಾಹ್ನದಿಂದ ಸಂಜೆಯವರೆಗೆ ಹಸಿರು ಸೊಪ್ಪು ತಿನ್ನುತ್ತಿರುತ್ತವೆ.
ಅಂಬಾರಿ ಹೊರುವ ದಿನ ವಿಶೇಷ ಆಹಾರ ನೀಡಲಾಗುತ್ತದೆ. ಜೊತೆಗೆ ಹಸಿ ಹುಲ್ಲು ನೀಡಿ ಜಂಬೂ ಸವಾರಿ ಸಂದರ್ಭ ಮಾರ್ಗ ಮಧ್ಯೆ ನೀರಡಿಕೆಯಾಗುವುದನ್ನು ತಪ್ಪಿಸಲಾಗುತ್ತದೆ.
ಹೀಗಿದೆ ಮೆನು
ಬೆಳಗ್ಗೆ 15-20 ಕೆಜಿ ಕುಸುರೆ ಎಂದು ಕರೆಯುವ ಹೆಸರು ಕಾಳು, ಹುರುಳಿ ಕಾಳು, ಗೋಧಿ, ಕುಸುಲಕ್ಕಿ ಇವೆಲ್ಲವನ್ನು ಬೇಯಿಸಿದ ಉಂಡೆ. ಮಧ್ಯಾಹ್ನ 15 ಕೆಜಿ (ಅರ್ಧ ಕೆಜಿ ಬೆಣ್ಣೆ) ಬೇಯಿಸಿದ ತರಕಾರಿ ಉಂಡೆ. ನಂತರ ಸಂಜೆಯವರೆಗೆ ಹಸಿರು ಸೊಪ್ಪು. ಸಂಜೆ 12+12 ಕೆಜಿ ಭತ್ತದ ಹುಲ್ಲಿನಲ್ಲಿ ಕುಸುರೆಯ ಸುತ್ತಿ ಭತ್ತವನ್ನು ಬೇಯಿಸಿ ಹಾಕಿ, ಬೆಲ್ಲ ಹಿಂಡಿ, ತೆಂಗಿನ ಕಾಯಿ, ಈರುಳ್ಳಿ, ಬೇಯಿಸಿ ಒಟ್ಟಿಗೆ ಕೊಡಲಾಗುತ್ತದೆ.
ಕನಿಷ್ಠ ಪ್ರತಿ ಆನೆಗೆ 12 ಕೆಜಿ ಭತ್ತ, 12 ಕೆಜಿ ಹುಲ್ಲು, 250 ಗ್ರಾಂ ಬೆಲ್ಲ, 2 ತೆಂಗಿನ ಕಾಯಿ, ಅರ್ಧ ಕೆಜಿ ಬೆಣ್ಣೆ ಕೊಡಲಾಗುತ್ತದೆ. ಇದರ ಜತೆಗೆ ಜೋಳದ ಕಡ್ಡಿ, ಸೊಪ್ಪು ನೀಡಲಾಗುತ್ತದೆ.
ಆಯುಧ ಪೂಜೆಯ ದಿನ ಸ್ಪೆಷಲ್ ಕುಸುರೆ 15 ಕೆಜಿ ಅವಲಕ್ಕಿ, ಗ್ಲುಕೋಸ್, ಬೆಣ್ಣೆ, ಬೆಲ್ಲ, ತೆಂಗಿನಕಾಯಿ ಎಲ್ಲವನ್ನು ಹಸಿ ಹುಲ್ಲಿನಲ್ಲಿ ಸುತ್ತಿ ಸ್ಪೆಷಲ್ ಕುಸುರೆ ಮಾಡಿ ತಿನ್ನಿಸಲಾಗುತ್ತದೆ. ಜತೆಗೆ ಹಸಿ ಹುಲ್ಲು ಸಹ ನೀಡಲಾಗುತ್ತದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications