ದಸರಾ ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ
ಮೈಸೂರು, ಅ.17 : ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ತೆರೆ ಬಿದ್ದಿದೆ. ದಸರಾದ ಪ್ರಮುಖ ಆಕರ್ಷಣೆಯಾಗಿದ್ದ ಗಜಪಡೆಗಳಿಗೆ ಮೈಸೂರಿನಲ್ಲಿ ಗುರುವಾರ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು. ಪೂಜೆ ಸಲ್ಲಿಸಿ ಎಲ್ಲಾ ಆನೆಗಳನ್ನು ಅವುಗಳ ಶಿಬಿರಕ್ಕೆ ಮರಳಿ ಕಳಿಸಲಾಯಿತು.
ಅರಮನೆ ಆವರಣದಲ್ಲಿ ಗುರುವಾರ ಅರ್ಜುನ, ಬಲರಾಮ, ಗಜೇಂದ್ರ, ಅಭಿಮನ್ಯು, ಸರಳಾ, ವರಲಕ್ಷ್ಮೀ, ವಿಜಯಾ, ವಿಕ್ರಮ, ಗೋಪಾಲಸ್ವಾಮಿ, ಪ್ರಶಾಂತ್, ಶ್ರೀರಾಮ, ದುರ್ಗಪರಮೇಶ್ವರಿ, ಹರ್ಷ ಮತ್ತು ಗೋಪಿ ಆನೆಗಳಿಗೆ ಪೂಜೆ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿಗಳಾದ ಶಿಖಾ, ವಲಯ ಅರಣ್ಯಾಧಿಕಾರಿ ದೇವರಾಜ್, ಮೈಸೂರು ಮೇಯರ್ ರಾಜೇಶ್ವರಿ ಆನೆಗಳಿಗೆ ಪೂಜೆ ಸಲ್ಲಿಸಿ ಕಬ್ಬು, ಬೆಲ್ಲ ನೀಡಿ ಅವುಗಳಿಗೆ ಬೀಳ್ಕೊಡುಗೆ ನೀಡಿದರು. ನಂತರ ಆನೆಗಳನ್ನು ಲಾರಿಗಳ ಮೂಲಕ ಬಳ್ಳೆ, ದುಬಾರೆ, ತಿಥಿಮತಿ, ಕೆ.ಗುಡಿ ಶಿಬಿರಗಳಿಗೆ ಕಳುಹಿಸಿಕೊಡಲಾಯಿತು.
ಆನೆಗಳೊಂದಿಗೆ ಆಗಮಿಸಿದ 28 ಮಾವುತರು ಮತ್ತು ಕಾವಾಡಿಗರು ಮತ್ತು ಅವರ ಕುಟುಂಬದ ಸುಮಾರು 200 ಮಂದಿಯೂ ಸಹ ಗುರುವಾರ ಮೈಸೂರು ತೊರೆಯುತ್ತಿದ್ದಾರೆ. ಮುಂದಿನ ದಸರಾ ವೇಳೆಗೆ ಮತ್ತೆ ನಗರಕ್ಕೆ ಆಗಮಿಸುತ್ತಾರೆ. (ಮೈಸೂರು ದಸರಾದ ಚಿತ್ರಗಳು)
ಆನೆಗಳು ಆರೋಗ್ಯವಾಗಿವೆ : ದಸರಾದಲ್ಲಿ ಪಾಲ್ಗೊಂಡು ಕಾಡಿಗೆ ಮರಳುತ್ತಿರುವ ಎಲ್ಲಾ ಆನೆಗಳು ಆರೋಗ್ಯಕರವಾಗಿವೆ ಎಂದು ವಲಯ ಅರಣ್ಯಾಧಿಕಾರಿ ದೇವರಾಜ್ ಹೇಳಿದ್ದಾರೆ. ಎಲ್ಲಾ 14 ಆನೆಗಳು ಆರೋಗ್ಯಕರವಾಗಿದ್ದು, ನಗರಕ್ಕೆ ಬಂದ ನಂತೆ 200ರಿಂದ 600 ಕೆಜಿಯಷ್ಟು ತೂಕ ಹೆಚ್ಚಿಸಿಕೊಂಡಿವೆ ಎಂದರು.
ದುರ್ಗಪರಮೇಶ್ವರಿ ಆನೆಯನ್ನು ದಸರಾಗೆ ಮೊದಲ ಬಾರಿಗೆ ಕರೆಸಲಾಗಿತ್ತು. ಅದಕ್ಕೆ ಅಗತ್ಯ ತಾಲೀಮು ನೀಡಿದ್ದೆವು. ಆದರೆ, ಜಂಬೂ ಸವಾರಿಯಲ್ಲಿ ಅದು ಪಾಲ್ಗೊಳ್ಳಲಿಲ್ಲ. ಮುಂದಿನ ಬಾರಿ ಅದನ್ನು ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.
ಬಲರಾಮ ಮತ್ತೆ ಬರ್ತಾನೆ : ಜಂಬೂ ಸವಾರಿಗೆ ಎರಡು ದಿನ ಮೊದಲು ತಾಲೀಮಿನ ವೇಳೆ ಅರ್ಧಕ್ಕೆ ಹಿಂದಿರುಗಿದ್ದ ಬಲರಾಮ ಆನೆ ಆರೋಗ್ಯಕರವಾಗಿದೆ. ಮುಂದಿನ ದಸರಾ ಉತ್ಸವದಲ್ಲೂ ಬಲರಾಮ ಪಾಲ್ಗೊಳ್ಳುತ್ತಾನೆ ಎಂದು ಭರವಸೆ ವ್ಯಕ್ತಪಡಿಸಿದರು. (ಮೈಸೂರಿನಲ್ಲಿ ಅ.18ರಿಂದ ವೈನ್ ಮೇಳ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications