ಅದ್ದೂರಿಯಾಗಿ ಮೈಸೂರು ದಸರಾ ಆಚರಣೆ ಇಲ್ಲ
ಮೈಸೂರು, ಸೆಪ್ಟೆಂಬರ್ 19 : ಕಾವೇರಿ ನದಿ ನೀರು ಹಂಚಿಕೆ ವಿವಾದದ ಪ್ರತಿಭಟನೆ, ರಾಜ್ಯದಲ್ಲಿನ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಈ ಬಾರಿಯ ದಸರಾವನ್ನು ಮಿತ ಖರ್ಚಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಆದರೆ, ಮೈಸೂರು ದಸರಾ ಅಂಗವಾಗಿ ನಡೆಯುವ ಯಾವ ಕಾರ್ಯಕ್ರಮಗಳನ್ನೂ ರದ್ದುಗೊಳಿಸುವುದಿಲ್ಲ.
ಭಾನುವಾರ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಈ ಕುರಿತು ಮಾಹಿತಿ ನೀಡಿದರು. '2016ನೇ ಸಾಲಿನ ದಸರಾವನ್ನು ಅದ್ದೂರಿಯಾಗಿ ಆಚರಣೆ ಮಾಡದೆ, ಮಿತ ಖರ್ಚಿನಲ್ಲಿ ಆಚರಿಸಲಾವುದು' ಎಂದು ಹೇಳಿದರು.[ಚನ್ನವೀರ ಕಣವಿರವರಿಗೆ ಮೈಸೂರು ದಸರಾಗೆ ಆಹ್ವಾನ]

'ಸುಮಾರು 10 ರಿಂದ 11 ಕೋಟಿ ವೆಚ್ಚದಲ್ಲಿ ದಸರಾ ಆಚರಣೆ ಮಾಡಲಾಗುತ್ತದೆ. ಖರ್ಚು ವೆಚ್ಚಗಳ ನಿಯಂತ್ರಣಕ್ಕೆ ಆಡಿಟರ್ ನೇಮಕ ಮಾಡಲಾಗುತ್ತದೆ. ಉಪ ಸಮಿತಿಗಳ ಕಾರ್ಯಕ್ರಮವನ್ನು ಈ ಬಾರಿ ಜಿಲ್ಲಾಧಿಕಾರಿ ಕಚೇರಿಯಿಂದಲೇ ನಿರ್ವಹಣೆ ಮಾಡಲಾಗುತ್ತದೆ' ಎಂದರು.[ಸಂಗೀತಗಾರರ ಗಾಡಿ ಎಳೆಯುವ ಅಭಿಮನ್ಯು!]
'ದಸರಾ ಕ್ರೀಡಾಕೂಟ ಉದ್ಘಾಟನೆಗೆ ರಿಯೋ ಒಲಂಪಿಕ್ಸ್ ವಿಜೇತರನ್ನು ಆಹ್ವಾನಿಸುವ ಆಲೋಚನೆ ಕೈ ಬಿಡಲಾಗಿದೆ. ಅಶ್ವಿನಿ ಪೊನ್ನಪ್ಪ, ದೀಪಾ ಮಲ್ಲಿಕ್ ಅವರಿಂದ ಉದ್ಘಾಟಿಸಲಾಗುತ್ತದೆ. ಯುವ ದಸರಾ ಕಾರ್ಯಕ್ರಮದ ಖರ್ಚನ್ನು 1.50 ಕೋಟಿಗೆ ಮಿತಿಗೊಳಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಕೋಟಿ ಮೀಸಲಿಡಲಾಗಿದೆ' ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.[ದಸರಾ ನಿರೀಕ್ಷೆಯಲ್ಲಿ ಸಿಂಗಾರ-ಬಂಗಾರ ಮೈಸೂರು ಅರಮನೆ]
ಅಕ್ಟೋಬರ್ 1ರಂದು ದಸರಾ ಉದ್ಘಾಟನೆ ನಡೆಯಲಿದ್ದು, ಅಂದೇ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಅಕ್ಟೋಬರ್ 11ರಂದು ಜಂಬೂ ಸವಾರಿ ನಡೆಯಲಿದೆ. ದಸರಾ ಪ್ರಚಾರಕ್ಕಾಗಿ ಮ್ಯಾರಾಥಾನ್ ಹಮ್ಮಿಕೊಂಡಿದ್ದು, ಸರ್ಕಾರಿ ಅಧಿಕಾರಿಗಳು ಅದರಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications