ದಸರಾ ವಸ್ತು ಪ್ರದರ್ಶನ: ಈ ಬಾರಿ ಪ್ರಾಧಿಕಾರವೇ ನಿರ್ವಹಿಸಲಿದೆಯಾ?
ಮೈಸೂರು, ಸೆಪ್ಟೆಂಬರ್.23 : ದಸರಾ ವಸ್ತು ಪದರ್ಶನದಲ್ಲಿ ಗುತ್ತಿಗೆ ತೆಗೆದುಕೊಳ್ಳುವುದಕ್ಕೆ ಟೆಂಡರ್ ದಾರರು ಮುಂದಾಗದಿದ್ದಲ್ಲಿ ಎಲ್ಲ ವ್ಯವಸ್ಥೆಗಳನ್ನೂ ವಸ್ತು ಪ್ರದರ್ಶನ ಪ್ರಾಧಿಕಾರವೇ ನಿರ್ವಹಿಸಲಿದೆ. ಇದರಿಂದ ಕಡಿಮೆ ಹಣದಲ್ಲಿ ವ್ಯಾಪಾರಸ್ಥರಿಗೆ ಮಳಿಗೆಗಳನ್ನು ನೀಡಬಹುದು. ಲಾಭ, ನಷ್ಟಕ್ಕಿಂತ ಹೆಚ್ಚಾಗಿ ವಸ್ತು ಪ್ರದರ್ಶನ ಎಲ್ಲರಿಗೂ ತಲುಪಬೇಕು ಎಂಬುದು ನಮ್ಮ ಉದ್ದೇಶ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ತಿಳಿಸಿದ್ದಾರೆ.
ಟೆಂಡರ್ ಎಂಬ ಮಾಯಾಂಗನೆಯಿಂದಾಗಿ ಪ್ರಾಧಿಕಾರವು ಹಲ್ಲು ಕಿತ್ತ ಹಾವಾಗಿತ್ತು. ಬಡವರು, ಹಿಂದುಳಿದ ವರ್ಗದವರು, ಮಹಿಳಾ ಉದ್ಯಮಿಗಳಿಗೆ ವಸ್ತು ಪ್ರದರ್ಶನ ಎಂಬುದು ಅಕ್ಷರಶಃ ಮುಚ್ಚಿದ ಬಾಗಿಲಿನಂತಾಗಿತ್ತು.
ಇದೀಗ ಸಚಿವ ಸಾ.ರಾ.ಮಹೇಶ್ ಅವರ ಹೇಳಿಕೆಯಿಂದಾಗಿ ಬಡ ವ್ಯಾಪಾರಸ್ಥರು ತಮ್ಮ ವಸ್ತುಗಳ ಮಾರಾಟಕ್ಕಾಗಿ ಮತ್ತೆ ಪ್ರಾಧಿಕಾರದತ್ತ ಮುಖ ಮಾಡಬಹುದಾಗಿದೆ. ಕಳೆದ ಬಾರಿ ಬೆಂಗಳೂರಿನ ಫನ್ ವರ್ಲ್ಡ್ ರೆಸಾರ್ಟ್ ಇಂಡಿಯಾ ಸಂಸ್ಥೆ ಟೆಂಡರ್ ಪಡೆದುಕೊಂಡಿತ್ತು.
ಆದರೆ, ಆಗ ಸುರಿದ ಧಾರಾಕಾರ ಮಳೆಯಿಂದಾಗಿ ಟೆಂಡರ್ ದಾರರು ಅಪಾರ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದರು ಎಂಬುದು ಕೆಲವರ ವಾದ. ಹೀಗಾಗಿ ಈ ಬಾರಿ ಟೆಂಡರ್ ವಹಿಸಿಕೊಳ್ಳಲು ಯಾರೂ ಮುಂದಾಗಿಲ್ಲ. ಆದ್ದರಿಂದ ಮರು ಟೆಂಡರ್ ಗೆ ಅರ್ಜಿ ಕರೆಯಲಾಗಿದೆ.
ಇದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರಿಗೆ ಬೇಸರತರಿಸಿದೆ. ವಸ್ತು ಪ್ರದರ್ಶನದಲ್ಲಿ ಈ ಹಿಂದೆ ಪ್ರವೇಶ ಶುಲ್ಕ ಸೇರಿದಂತೆ ಎಲ್ಲವನ್ನೂ ಪಾಧಿಕಾರವೇ ನಿರ್ವಹಿಸುತ್ತಿತ್ತು. ಆಗ ಕೂಡ ಯಾವುದೇ ನಷ್ಟವಾಗಿರಲಿಲ್ಲ.
ವಸ್ತು ಪ್ರದರ್ಶನದ ಆವರಣದಲ್ಲಿ ನ್ಯಾಯಯುತವಾಗಿ ಜನರಿಗೆ ಸಾಮಾನ್ಯ ದರದಲ್ಲಿ ವಸ್ತುಗಳು ಸಿಗಬೇಕು. ಹೀಗಾಗಿ ಟೆಂಡರ್ ವಹಿಸಿಕೊಳ್ಳಲು ಯಾರೂ ಮುಂದಾಗದಿದ್ದಲ್ಲಿ ಪ್ರಾಧಿಕಾರದಿಂದಲೇ ಎಲ್ಲವನ್ನೂ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುವುದು.

ಟೆಂಡರ್ ಪ್ರಕ್ರಿಯೆ ಆರಂಭವಾದದ್ದು ಹೀಗೆ ...
ಕಳೆದ 14 ವರ್ಷಗಳ ಹಿಂದಿನ ಮಾತು. ವಸ್ತು ಪ್ರದರ್ಶನ ಆವರಣದಲ್ಲಿ ದೇಶದ ವಿವಿಧ ಭಾಗಗಳ ಬಟ್ಟೆ, ಗೃಹೋಪಯೋಗಿ ವಸ್ತುಗಳು, ಆಹಾರ, ಹೀಗೆ ತರಹೇವಾರಿ ವಸ್ತುಗಳು ಜನರಿಗೆ ಕಡಿಮೆ ಬೆಲೆಯಲ್ಲಿ ದೊರಕುತ್ತಿದ್ದವು. ಕಾರಣ, ಪ್ರಾಧಿಕಾರದ ಆವರಣದಲ್ಲಿನ ಮಳಿಗೆಗಳು ವ್ಯಾಪಾರಸ್ಥರಿಗೆ ಕಡಿಮೆ ಬಾಡಿಗೆ ದರದಲ್ಲಿ ದೊರಕುತ್ತಿದ್ದವು.
ಹೀಗಾಗಿ ವಸ್ತುಗಳ ಬೆಲೆ ಕೂಡ ಕೈಗೆಟಕುವಂತಿತ್ತು. ನಂತರದ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಆರಂಭವಾಯಿತು. ಹೀಗಾಗಿ ಪ್ರಾಧಿಕಾರದ ವತಿಯಿಂದ ಯಾರೊಬ್ಬರಿಗೂ ಕಡಿಮೆ ದರದಲ್ಲಿ ಮಳಿಗೆಗಳು ಸಿಗದಂತಾದವು.
ವಸ್ತುಪ್ರದರ್ಶನದಲ್ಲಿ ದೊರಕುವ ವಸ್ತುಗಳು, ಅದೇ ದರದಲ್ಲಿ ನಗರದ ವ್ಯಾಪಾರಸ್ಥರಿಂದಲೂ ದೊರಕಲಾರಂಭಿಸಿದವು. ವಿಶೇಷವೆಂದರೆ, ಕೆಲವೊಂದು ವಸ್ತುಗಳು ಹೊರಗಿನ ವ್ಯಾಪಾರಸ್ಥರಲ್ಲೇ ಕಡಿಮೆ ಬೆಲೆಗೆ ದೊರಕುತ್ತಿದ್ದವು. ಇದರಿಂದ ಹೊರ ರಾಜ್ಯಗಳಿಂದ ಬಂದ ವ್ಯಾಪಾರಸ್ಥರು ಹೆಚ್ಚಿನ ಲಾಭವಿಲ್ಲದೆ, ಬೇಸರದಿಂದಲೇ ತೆರಳುವಂತಾಗುತ್ತಿತ್ತು.

ಉಚಿತ ಮಳಿಗೆಗಳು
ಸರ್ಕಾರಗಳು ಉದ್ಯಮಿಗಳಿಗೆ ಸಬ್ಸಿಡಿ ದರದಲ್ಲಿ ಸಾಲ ಸೌಲಭ್ಯಗಳನ್ನು ನೀಡಬಹುದು. ಆದರೆ, ವಸ್ತು ಪ್ರದರ್ಶನ ಆವರಣದ ಮೂಲಕ ಅವುಗಳಿಗೆ ಮಾರುಕಟ್ಟೆಯ ಸೌಲಭ್ಯವನ್ನು ದೊರಕಿಸಿಕೊಡಬೇಕು ಎಂಬ ಉದ್ದೇಶದಿಂದ ಅಂದು ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಆರ್.ರಘು ಅವರು, ಪ್ರಾಧಿಕಾರದ ಆವರಣದಲ್ಲಿ ಉಚಿತವಾಗಿ ಮಳಿಗೆಗಳನ್ನು ನೀಡುವ ಮೂಲಕ ಮೈಸೂರು ಭಾಗದಲ್ಲಿ ತಯಾರಾಗುವ ವಸ್ತುಗಳನ್ನು ಜನರಿಗೆ ಪರಿಚಯವಾಗುವಂತೆ ಮಾಡಿದ್ದರು.

ಮಹಿಳೆಯರಿಗೂ ಆಸರೆಯಾಗಿತ್ತು
ವಸ್ತು ಪ್ರದರ್ಶನದ ಮೂಲಕ ಮಹಿಳೆಯರೂ ಕೂಡ ತಾವು ತಯಾರಿಸಿದ ವಸ್ತುಗಳನ್ನು ಜನರಿಗೆ ತಲುಪಿಸಲಿ ಎಂಬ ಉದ್ದೇಶದಿಂದ ಅವರಿಗೆ ಅತ್ಯಂತ ಕಡಿಮೆ ದರದಲ್ಲಿ, ಕೆಲವೊಮ್ಮೆ ಉಚಿತವಾಗಿ ಮಳಿಗೆಗಳನ್ನು ನೀಡುವ ಮೂಲಕ ಆಸರೆಯಾಗಿದ್ದರು. ಟೆಂಡರ್ ಪ್ರಕ್ರಿಯೆ ಆರಂಭವಾದ ನಂತರ ಅದಕ್ಕೆ ಕೂಡ ತಿಲಾಂಜಲಿ ಇಡಲಾಯಿತು.

ಕಡಿಮೆ ಬೆಲೆಯಲ್ಲಿ ದೊರಕಬಹುದೇ?
ಇದೀಗ ಸಾ.ರಾ.ಮಹೇಶ್ ಅವರ ಹೇಳಿಕೆಯಿಂದಾಗಿ ವಸ್ತು ಪ್ರದರ್ಶನ ಆವರಣ ಮತ್ತೆ ತನ್ನ ಗತ ವೈಭವವನ್ನು ಜನರ ಮುಂದೆ ಅನಾವರಣಗೊಳಿಸಿಕೊಳ್ಳಲಿದೆಯೇ ಎಂದು ಕಾದು ನೋಡಬೇಕಿದೆ. ವಸ್ತು ಪ್ರದರ್ಶನದಲ್ಲಿ ನಾನಾ ರಾಜ್ಯಗಳ ವಸ್ತುಗಳು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರಕಬಹುದೇ ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications