ದಸರಾ ಆಹಾರ ಮೇಳ: ರುಚಿಕಟ್ಟಾದ ಬಗೆ ಬಗೆಯ ಖಾದ್ಯ ತಿನ್ನಲು ರೆಡಿಯಾಗಿ...
ಮೈಸೂರು, ಸೆಪ್ಟೆಂಬರ್.26 : ದಸರೆ ಎಂದರೆ ಮತ್ತೊಂದು ಆಕರ್ಷಣೆ ಆಹಾರ ಮೇಳ. ಇದೇ ಅಕ್ಟೋಬರ್ 10 ರಿಂದ 19ರವರೆಗೆ ನಡೆಯಲಿರುವ ದಸರಾ ಆಹಾರ ಮೇಳದಲ್ಲಿ ಈ ಬಾರಿ ಹೊಸ ಟಚ್ ನೀಡಲು ದಸರಾ ಆಹಾರ ಸಮಿತಿ ಸಜ್ಜಾಗಿದೆ.
ಕಳೆದ ವರ್ಷದಂತೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನ ಮತ್ತು ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್ ಸಮೀಪದ ಮುಡಾ ಮೈದಾನದಲ್ಲಿ ಆಹಾರ ಮೇಳ ಆಯೋಜಿಸಲಾಗಿದೆ. ಬಾಯಲ್ಲಿ ನೀರೂರಿಸುವ ಆಹಾರ ಮೇಳದಲ್ಲಿ ಈ ಬಾರಿ ಜನರ ಅಭಿರುಚಿಗೆ ತಕ್ಕಂತೆ ವೈವಿಧ್ಯಮಯ ಖಾದ್ಯಗಳನ್ನು ಪರಿಚಯಿಸಲು ಜಿಲ್ಲಾಡಳಿತ ಸಹ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪ್ರತಿವರ್ಷದಂತೆ ಈ ವರುಷವೂ ಸಹ ಆಹಾರ ಮೇಳದ ಜನಪ್ರಿಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಬೊಂಬಾಟ್ ಭೋಜನ ಕಾರ್ಯಕ್ರಮ ಖ್ಯಾತಿಯ ಸಿಹಿ ಕಹಿ ಚಂದ್ರು, ಭಾನುವಾರದ ಬಾಡೂಟ ಖ್ಯಾತಿಯ ರಾಜೇಶ್ ಗೌಡ, ಒಗ್ಗರಣೆ ಡಬ್ಬಿ ಖ್ಯಾತಿಯ ಮುರಳಿ ಭಾಗವಹಿಸಲಿದ್ದಾರೆ.

ಹಾಗೆಯೇ ಫುಡ್ ಕ್ರಾಫ್ಟ್ ಸಂಸ್ಥೆ, ಸಿಎಫ್ ಟಿಆರ್ ಐ, ಮೈಮುಲ್, ಸ್ತ್ರೀಶಕ್ತಿ ಸಂಘಗಳು ಸೇರಿದಂತೆ ವಿವಿಧ ಇಲಾಖೆಗಳಿಂದ ಅಡುಗೆ ತಯಾರಿಕೆಯ ನೇರ ಪ್ರಾತ್ಯಕ್ಷಿಕೆಯನ್ನು ನಡೆಸಲಾಗುವುದು.
ಪ್ರತಿದಿನ ಸಂಜೆ ಸಾಂಸ್ಕೃತಿಕ ಕಲಾ ತಂಡಗಳಿಂದ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ಅಡುಗೆ ತಯಾರಿಸುವ ಮತ್ತು ತಿನ್ನುವ ಸ್ಪರ್ಧೆಗಳನ್ನು ನಡೆಸಲಾಗುವುದು. ಈ ಬಾರಿ ಸಿರಿ ಧಾನ್ಯಗಳ ಬಗ್ಗೆ ಮಾಹಿತಿಯನ್ನು ನೀಡಲು ಡಾ. ಖಾದರ್ ಅವರನ್ನು ಕರೆಸಲಾಗಿದೆ. ಅಂತೆಯೇ ಆಹಾರ ಪದಾರ್ಥಗಳ ಬಗ್ಗೆ ಸಂವಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಪಿ.ಶಿವಣ್ಣ ಹೇಳಿದರು.
ಪ್ರತಿವರುಷದಂತೆ ಈ ವರುಷವೂ ಸಹ ಅತ್ತೆ - ಸೊಸೆ, ಯುವಕರು, ಹಿರಿಯ ನಾಯಕರು ಸೇರಿದಂತೆ ವಿವಿಧ ವಿಭಾಗಗಳಲ್ಲಿ ತಿನ್ನುವ ಸ್ಫರ್ಧೆ ಹಾಗೂ ಅಡುಗೆ ತಯಾರಿ ಮಾಡುವ ಸ್ಫರ್ಧೆಯನ್ನು ಸಹ ಆಯೋಜಿಸಿದ್ದು, ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿಯಪಡಿಸಲಾಗುವುದು ಎಂದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications