ಜಂಬೂಸವಾರಿ ಮೆರವಣಿಗೆಯಲ್ಲಿ ಕೇವಲ ಎರಡು ಸ್ತಬ್ಧಚಿತ್ರಗಳಿಗೆ ಮಾತ್ರ ಅವಕಾಶ
ಮೈಸೂರು, ಅಕ್ಟೋಬರ್ 26: ನಾಡಹಬ್ಬ ದಸರಾ ಉತ್ಸವದ ಜಂಬೂಸವಾರಿಗೆ ಕ್ಷಣಗಣನೆ ಆರಂಭಗೊಂಡಿದ್ದು, ಸೋಮವಾರ ಮೈಸೂರಿನ ಅಂಬಾವಿಲಾಸ ಅರಮನೆ ಅಂಗಳದಲ್ಲಿ ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳು ಪ್ರಮುಖ ಆಕರ್ಷಣೆಯಾಗಿವೆ.
ಕೊರೊನಾ ಭೀತಿಯ ಹಿನ್ನೆಲೆ ಈ ವರ್ಷ ಕೇವಲ ಎರಡು ಸ್ತಬ್ಧ ಚಿತ್ರಗಳಿಗೆ ಮಾತ್ರ ಸೀಮಿತಗೊಂಡಿದೆ. ಪ್ರತೀ ವರ್ಷವೂ ನಡೆಯುತ್ತಿದ್ದ ವೈಭವದ ದಸರಾದಲ್ಲಿ 30ಕ್ಕೂ ಅಧಿಕ ಸ್ತಬ್ಧ ಚಿತ್ರಗಳಿಗೆ ಅವಕಾಶ ನೀಡಲಾಗುತ್ತಿತ್ತು.
ಮೈಸೂರು ದಸರಾ: ವಿಜಯದಶಮಿ ದಿನದಂದು ಅರಮನೆ ಆವರಣದಲ್ಲಿ ಸರಳ ಜಂಬೂಸವಾರಿ
ಮೈಸೂರು ಜಿಲ್ಲಾ ಪಂಚಾಯತಿ ವತಿಯಿಂದ ಕೊರೊನಾ ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ರೂಪುಗೊಂಡಿದೆ. ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಕೊರೊನಾ ಯೋಧರ ಸೇವೆ ಸ್ಮರಣೆಗಾಗಿ ಈ ಸ್ತಬ್ಧಚಿತ್ರವನ್ನು ರೂಪಿಸಲಾಗಿದೆ.
ಆನೆ ಬಂಡಿ ಸ್ತಬ್ಧಚಿತ್ರ ಮತ್ತೊಂದು ವಿಶೇಷವಾಗಿದ್ದು, ಅರಮನೆ ವಾದ್ಯಗೋಷ್ಠಿ ಕುರಿತಾದ ಚಿತ್ರವೇ ಆನೆ ಬಂಡಿ. ಈ ಎರಡು ಸ್ತಬ್ಧಚಿತ್ರಗಳು ಮಾತ್ರ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.
ಸರಳ ದಸರಾ ಹಿನ್ನೆಲೆಯಲ್ಲಿ ಅಂಬಾವಿಲಾಸ ಅರಮನೆ ಆವರಣಕ್ಕೆ ಜಂಬೂಸವಾರಿ ಮೆರವಣಿಗೆ ಸೀಮಿತಗೊಂಡಿದ್ದು, 30-40 ನಿಮಿಷಗಳ ಅವಧಿಯಲ್ಲಿ ಮೆರವಣಿಗೆ ಮುಕ್ತಾಯಗೊಳ್ಳಲಿದೆ.