ದಸರಾ ಛಾಯಾಚಿತ್ರ ಸ್ಪರ್ಧೆ; ಅತ್ಯುತ್ತಮ ಚಿತ್ರಕ್ಕೆ ಸಿಗಲಿದೆ ಒಂದು ಲಕ್ಷ ರೂಪಾಯಿ
ಮೈಸೂರು,ಅಕ್ಟೋಬರ್ 5: ಈ ಬಾರಿ ದಸರಾದಲ್ಲಿನ ವಿಶೇಷ ಆಕರ್ಷಣೆಯಾಗಿ ದಸರಾ ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ ನೀಡಿದ್ದಾರೆ.
ದಸರಾಕ್ಕೆ ಸಂಬಂಧಿಸಿದ ಅತ್ಯುತ್ತಮ ಛಾಯಾಚಿತ್ರವೊಂದಕ್ಕೆ ಪ್ರವಾಸೋದ್ಯಮ ಇಲಾಖೆ 1 ಲಕ್ಷ ರೂ.ಗಳ ಬಹುಮಾನ ನೀಡಲಿದೆ. ಯಾರು ಬೇಕಾದರೂ ದಸರಾಕ್ಕೆ ಸಂಬಂಧಿಸಿದ ಆಕರ್ಷಣೀಯ ಫೋಟೋವನ್ನು ಕಳುಹಿಸಬಹುದು. ಒಬ್ಬರು ಗರಿಷ್ಠ ಮೂರು ಫೋಟೋಗಳನ್ನು ನೀಡಬಹುದು. ತಾವೇ ತೆಗೆದ ಛಾಯಾಚಿತ್ರಗಳನ್ನು ಅ. 14ರ ಸಂಜೆ 4 ಗಂಟೆ ಒಳಗೆ ಮೈಸೂರು ಜೆಎಲ್ ಬಿ ರಸ್ತೆ, ಹೋಟೆಲ್ ಮಯೂರ ಹೊಯ್ಸಳದಲ್ಲಿನ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ತಲುಪಿಸಬೇಕು ಎಂದು ತಿಳಿಸಿದ್ದಾರೆ.
ಉತ್ತಮ ಛಾಯಾಚಿತ್ರದ ಆಯ್ಕೆಗೆ ಸಮಿತಿಯೊಂದನ್ನು ನೇಮಿಸಲಾಗುತ್ತಿದ್ದು, ಇದರಲ್ಲಿ ಬೆಂಗಳೂರಿನ ತಜ್ಞರು ಇರಲಿದ್ದಾರೆ. ಒಂದು ಉತ್ತಮ ಫೋಟೋಗೆ ಒಂದು ಲಕ್ಷ ರೂ. ಬಹುಮಾನ ನೀಡಿದರೆ, ಉಳಿದ ಉತ್ತಮ ಚಿತ್ರಗಳನ್ನು ಪ್ರವಾಸೋದ್ಯಮ ಇಲಾಖೆ ಬಳಸಿಕೊಂಡು ಅದಕ್ಕೆ ವಿಶ್ವವ್ಯಾಪಿ ಪ್ರಚಾರ ಸಿಗುವಂತೆ ಮಾಡಲಿದೆ ಎಂದು ಅವರು ವಿವರಿಸಿದರು.

ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯನ್ನು ಸಂಪರ್ಕಿಸಬಹುದು. ಅಲ್ಲದೆ, ಅರ್ಜಿ ನಮೂನೆಯನ್ನು ಮೈಸೂರು ದಸರಾ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಛಾಯಾಚಿತ್ರದ ಕೆಳಗೆ ಶೀರ್ಷಿಕೆ ಸಹಿತ ಗರಿಷ್ಠ 50 ಪದಗಳ ವಿವರಣೆ ನೀಡಬೇಕು. ಸಿಡಿ, ಡಿವಿಡಿ ಇಲ್ಲವೇ ಪೆನ್ಡ್ರೈವ್ ನಲ್ಲಿ ನೀಡಬೇಕು. ಜೆಪಿಜಿ ಇಲ್ಲವೇ ಜೆಪಿಇಜಿ ಫಾರ್ಮೆಟ್ ನಲ್ಲಿರಬೇಕು ಎಂದು ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications