ದಸರಾ ಛಾಯಾಚಿತ್ರ ಸ್ಪರ್ಧೆ; ಅತ್ಯುತ್ತಮ ಚಿತ್ರಕ್ಕೆ ಸಿಗಲಿದೆ ಒಂದು ಲಕ್ಷ ರೂಪಾಯಿ
ಮೈಸೂರು,ಅಕ್ಟೋಬರ್ 5: ಈ ಬಾರಿ ದಸರಾದಲ್ಲಿನ ವಿಶೇಷ ಆಕರ್ಷಣೆಯಾಗಿ ದಸರಾ ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ ನೀಡಿದ್ದಾರೆ.
ದಸರಾಕ್ಕೆ ಸಂಬಂಧಿಸಿದ ಅತ್ಯುತ್ತಮ ಛಾಯಾಚಿತ್ರವೊಂದಕ್ಕೆ ಪ್ರವಾಸೋದ್ಯಮ ಇಲಾಖೆ 1 ಲಕ್ಷ ರೂ.ಗಳ ಬಹುಮಾನ ನೀಡಲಿದೆ. ಯಾರು ಬೇಕಾದರೂ ದಸರಾಕ್ಕೆ ಸಂಬಂಧಿಸಿದ ಆಕರ್ಷಣೀಯ ಫೋಟೋವನ್ನು ಕಳುಹಿಸಬಹುದು. ಒಬ್ಬರು ಗರಿಷ್ಠ ಮೂರು ಫೋಟೋಗಳನ್ನು ನೀಡಬಹುದು. ತಾವೇ ತೆಗೆದ ಛಾಯಾಚಿತ್ರಗಳನ್ನು ಅ. 14ರ ಸಂಜೆ 4 ಗಂಟೆ ಒಳಗೆ ಮೈಸೂರು ಜೆಎಲ್ ಬಿ ರಸ್ತೆ, ಹೋಟೆಲ್ ಮಯೂರ ಹೊಯ್ಸಳದಲ್ಲಿನ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ತಲುಪಿಸಬೇಕು ಎಂದು ತಿಳಿಸಿದ್ದಾರೆ.
ಉತ್ತಮ ಛಾಯಾಚಿತ್ರದ ಆಯ್ಕೆಗೆ ಸಮಿತಿಯೊಂದನ್ನು ನೇಮಿಸಲಾಗುತ್ತಿದ್ದು, ಇದರಲ್ಲಿ ಬೆಂಗಳೂರಿನ ತಜ್ಞರು ಇರಲಿದ್ದಾರೆ. ಒಂದು ಉತ್ತಮ ಫೋಟೋಗೆ ಒಂದು ಲಕ್ಷ ರೂ. ಬಹುಮಾನ ನೀಡಿದರೆ, ಉಳಿದ ಉತ್ತಮ ಚಿತ್ರಗಳನ್ನು ಪ್ರವಾಸೋದ್ಯಮ ಇಲಾಖೆ ಬಳಸಿಕೊಂಡು ಅದಕ್ಕೆ ವಿಶ್ವವ್ಯಾಪಿ ಪ್ರಚಾರ ಸಿಗುವಂತೆ ಮಾಡಲಿದೆ ಎಂದು ಅವರು ವಿವರಿಸಿದರು.

ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯನ್ನು ಸಂಪರ್ಕಿಸಬಹುದು. ಅಲ್ಲದೆ, ಅರ್ಜಿ ನಮೂನೆಯನ್ನು ಮೈಸೂರು ದಸರಾ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಛಾಯಾಚಿತ್ರದ ಕೆಳಗೆ ಶೀರ್ಷಿಕೆ ಸಹಿತ ಗರಿಷ್ಠ 50 ಪದಗಳ ವಿವರಣೆ ನೀಡಬೇಕು. ಸಿಡಿ, ಡಿವಿಡಿ ಇಲ್ಲವೇ ಪೆನ್ಡ್ರೈವ್ ನಲ್ಲಿ ನೀಡಬೇಕು. ಜೆಪಿಜಿ ಇಲ್ಲವೇ ಜೆಪಿಇಜಿ ಫಾರ್ಮೆಟ್ ನಲ್ಲಿರಬೇಕು ಎಂದು ತಿಳಿಸಿದ್ದಾರೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications