Dasara Rangotsava : ದಸರಾ ರಂಗೋತ್ಸವ : ಮೈಸೂರಿನ ರಂಗಾಯಣದಲ್ಲಿ 10 ದಿನ ನಾಟಕ ಪ್ರದರ್ಶನ
ಮೈಸೂರು, ಸೆಪ್ಟೆಂಬರ್ 15: ರಂಗಾಯಣದಿಂದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮರಣಾರ್ಥ'ದಸರಾ ರಂಗೋತ್ಸವ-2022' ನ್ನು ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 4ರವರೆಗೆ ಆಯೋಜಿಸಲಾಗಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದರು.
ಸೆಪ್ಟೆಂಬರ್ 25ರಂದು ಕೆ.ಪಿ. ಪೂರ್ಣಚಂದ್ರ ತೇಜಸ್ವಿ ರಚನೆಯ 'ಕೃಷ್ಣೇಗೌಡನ ಆನೆ' ನಾಟಕ ಪ್ರದರ್ಶನಗೊಳ್ಳಲಿದೆ. ಆರ್. ನಾಗೇಶ್ ನಿರ್ದೇಶನದಲ್ಲಿ ಮೈಸೂರು ರಂಗಾಯಣ ರೆಪರ್ಟರಿ ತಂಡ ಪ್ರಸ್ತುತ ಪಡಿಸಲಿದೆ. 26ರಂದು ಜಿ.ಕೆ.ನಂದಕುಮಾರ ರಚನೆ, ನಿರ್ದೇಶನದಲ್ಲಿ ಭಾರತೀಯ ರಂಗವಿದ್ಯಾಲಯ ತಂಡ 'ಸಮರಕಥಾ' ನಾಟಕ ಪ್ರಸ್ತುತ ಪಡಿಸಲಿದೆ. ದಸರಾ ರಂಗೋತ್ಸವ ಪ್ರಯುಕ್ತ ರಂಗಾಯಣ ಭೂಮಿಗೀತ ರಂಗವೇದಿಕೆಯಲ್ಲಿ ನಿತ್ಯ ಸಂಜೆ 6.30ಕ್ಕೆ ನಾಟಕ ಪ್ರದರ್ಶನ ನಡೆಯಲಿದೆ. ಎಲ್ಲ ನಾಟಕಗಳಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
"ಸೆ.27 ರಂದು ಪಿ. ಲಂಕೇಶ್ ರಚನೆಯ 'ಪೊಲೀಸರಿದ್ದಾರೆ ಎಚ್ಚರಿಕೆ' ನಾಟಕವನ್ನು ನಾಗಾರ್ಜುನ ಆರಾಧ್ಯ ನಿರ್ದೇಶನದಲ್ಲಿ ಆಯಾಮ ರಂಗತಂಡ ಪ್ರಸ್ತುತ ಪಡಿಸಲಿದೆ. ಸೆ.28 ರಂದು ಸುಧಾ ಆಡುಕಳ ರಚನೆಯ 'ಮಾಧವಿ' ನಾಟಕವನ್ನು ಶ್ರೀಪಾದಭಟ್ ನಿರ್ದೇಶನದಲ್ಲಿ ಕೈವಲ್ಯ ಕಲಾಕೇಂದ್ರ ತಂಡ ಪ್ರಸ್ತುತ ಪಡಿಸಲಿದೆ. 29 ರಂದು ಶಶಿರಾಜ್ ಕಾವೂರ್ ರಚಿಸಿ ನಿರ್ದೇಶಿಸಿರುವ 'ದಟ್ಸ್ ಆಲ್ ಯುವರ್ ಆನರ್' ನಾಟಕವನ್ನು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ತಂಡ ಪ್ರಸ್ತುತ ಪಡಿಸಲಿದೆ.

ಸೆ.30 ರಂದು ಮಾಕ್ಸಿಂ ಗಾರ್ಕಿ ರಚನೆಯ 'ಈ ಕೆಳಗಿನವರು' ನಾಟಕವನ್ನು ವೀಣಾ ಶರ್ಮ ಭೂಸನೂರಮಠ ನಿರ್ದೇಶನದಲ್ಲಿ ಎನ್.ಎಸ್.ಡಿ ಬೆಂಗಳೂರು ತಂಡ ಪ್ರಸ್ತುತ ಪಡಿಸಲಿದೆ. ಅಕ್ಟೋಬರ್ 1 ರಂದು ಅರುಣ್ ಮಹೋಪಾಧ್ಯಾಯ ಅವರ 'ಮಾರೀಚನ ಬಂಧುಗಳು' ನಾಟಕವನ್ನು ವಾಲ್ಟರ್ ಡಿಸೋಜ ನಿರ್ದೇಶನದಲ್ಲಿ ಸ್ನೇಹರಂಗ ತಂಡ ಪ್ರಸ್ತುತ ಪಡಿಸಲಿದೆ.
ಅಕ್ಟೋಬರ್ 2 ರಂದು ಅಡ್ಡಂಡ ಸಿ. ಕಾರ್ಯಪ್ಪ ರಚಿಸಿ ನಿರ್ದೇಶಿಸಿರುವ 'ಹಲಗಲಿ ಸಮರ' ನಾಟಕವನ್ನು ರಂಗಾಯಣ ರೆಪರ್ಟರಿ ತಂಡ ಪ್ರಸ್ತುತ ಪಡಿಸಲಿದೆ. ಅಕ್ಟೋಬರ್ 3ರಂದು ವೌನೇಶ್ ಬಡಿಗೇರ ರಚನೆಯ 'ವಿಶಾಂಕೇ' ನಾಟಕವನ್ನು ಮಂಜುನಾಥ ಎಲ್.ಬಡಿಗೇರ ನಿರ್ದೇಶನದಲ್ಲಿ ಉಡುಪಿ ರಂಗಭೂಮಿ ತಂಡ ಪ್ರಸ್ತುತ ಪಡಿಸಲಿದೆ. ಅಕ್ಟೋಬರ್ 4 ರಂದು ಕುವೆಂಪು ಅವರ ಶ್ರೀರಾಮಾಯಣ ದರ್ಶನಂನ ಆಯ್ದಭಾಗ 'ಮಮತೆಯ ಸುಳಿ' ನಾಟಕವನ್ನು ಗಣೇಶ್ ಮಂದಾರ್ತಿ ನಿರ್ದೇಶನದಲ್ಲಿ ಮಂಗಳೂರಿನ ಕಲಾಭಿ ಥಿಯೇಟರ್ ಪ್ರಸ್ತುತ ಪಡಿಸಲಿದೆ ಎಂದು ಕಾರ್ಯಪ್ಪ ಮಾಹಿತಿ ನೀಡಿದ್ದಾರೆ.
ಡಾ.ನ.ರತ್ನಗೆ 'ದಸರಾ ರಂಗಗೌರವ ಪುರಸ್ಕಾರ'
ಅಕ್ಟೋಬರ್ 4ರಂದು ಸಮಾರೋಪ ನಡೆಯಲಿದ್ದು, ಅಂದು ನಾಟಕಕಾರ ಡಾ.ನ.ರತ್ನ ಅವರಿಗೆ 'ದಸರಾ ರಂಗಗೌರವ ಪುರಸ್ಕಾರ' ನೀಡಲಾಗುತ್ತದೆ. ರತ್ನ ಅವರು ಮೈಸೂರಿನ ಹವ್ಯಾಸಿ ರಂಗಸಂಸ್ಥೆ 'ಸಮತೆಂತೋ' ಮೂಲಕ ಹವ್ಯಾಸಿ ರಂಗಭೂಮಿಯ ಮೂಲಕ ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲಿಗೆ, ಬೊಂತೆ, ಗೋಡೆ ಬೇಕೆ ಗೋಡೆ ಮತ್ತಿತರ ನಾಟಕಗಳನ್ನು ರಚಿಸಿದ್ದಾರೆ. ರೇಡಿಯೋ ನಾಟಕಗಳನ್ನು ರಚಿಸಿದ್ದಾರೆ, ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ಕುಮಾರ್, ಶಾಸಕ ಎಲ್.ನಾಗೇಂದ್ರ ಭಾಗವಹಿಸಲಿದ್ದಾರೆ" ಎಂದು ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications