ಮೈಸೂರಿನಲ್ಲಿ ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ; ಕೈಗಾರಿಕೆಗಳಿಗೆ ಡಿಸಿ ಸೂಚನೆ
ಮೈಸೂರು, ಅಕ್ಟೋಬರ್ 30: ಮೈಸೂರಿನ ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರೆಲ್ಲರಿಗೂ ಕೊರೊನಾ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ಕೈಗಾರಿಕೆಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೈಸೂರು ಜಿಲ್ಲೆಯ ಕೈಗಾರಿಕೆಗಳ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಮಿಕರಿಗೆ ಆಗಾಗ್ಗೆ ಪರೀಕ್ಷೆಯನ್ನು ನಡೆಸುತ್ತಿರಬೇಕು. ಪರೀಕ್ಷೆ ಮಾಡಿಸುವಲ್ಲಿ ಕೈಗಾರಿಕೋದ್ಯಮಿಗಳು ಕೂಡ ಸಹಕರಿಸಬೇಕು ಎಂದು ತಿಳಿಸಿದರು.
ಕೈಗಾರಿಕಾ ಸಂಘದವರು ಕಾರ್ಮಿಕರಿಗೆ ಈ ಪರೀಕ್ಷೆಯನ್ನು ನಡೆಸಲು ನಿಗದಿತ ಜಾಗವನ್ನು ಗುರುತಿಸಬೇಕು. ಆ ನಂತರ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೆ ಉಚಿತವಾಗಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಕುರಿತು ಶ್ರೀಘ್ರವೇ ಕೆಲಸ ನಡೆಯಬೇಕು ಎಂದರು. ಇನ್ನು ಜಿಲ್ಲೆಯ ಹಲವು ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ 50 ವರ್ಷ ಮೇಲ್ಪಟ್ಟಿರುವ ಕಾರ್ಮಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆಯೂ ಇದೆ ಎಂದರು. ಅಂಥವರಿಗೆ ಸೋಂಕಿನ ಲಕ್ಷಣ ಕಂಡುಬಂದರೆ ತಡ ಮಾಡದೇ ಪರೀಕ್ಷೆ ಮಾಡಿಸಲು ಮುಂದಾಗಬೇಕು ಎಂದು ನಿರ್ದೇಶಿಸಿದರು.

ಜ್ಯುಬಿಲಿಯಂಟ್ ಕಾರ್ಖಾನೆ ನೆನಪು: ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದ ದಿನಗಳಲ್ಲಿ ಜಿಲ್ಲೆಯ ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯ ಕಾರ್ಮಿಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಕಾರ್ಖಾನೆಯ ಔಷಧ ತಯಾರಿಕಾ ಘಟಕದಲ್ಲಿ ಓರ್ವ ವ್ಯಕ್ತಿಯಿಂದ ಹಲವು ವ್ಯಕ್ತಿಗಳಿಗೆ ಕೊರೊನಾ ವೈರಸ್ ಸೋಂಕು ಹರಡಿದ ಕಾರಣ, ಕೊರೊನಾ ಹಾಟ್ ಸ್ಪಾಟ್ ಆಗಿತ್ತು. ಅದಕ್ಕಾಗಿ ಕಾರ್ಖಾನೆಗೆ ಬೀಗ ಹಾಕಿ ವೈರಸ್ ಮೂಲ ಪತ್ತೆಗೆ ಸರ್ಕಾರ ತನಿಖೆ ನಡೆಸಿತಾದರೂ ಕೊನೆಗೂ ಅದರ ಮೂಲ ಮಾತ್ರ ಕಂಡು ಹಿಡಿಯಲು ಸಾಧ್ಯವಾಗಿಲ್ಲ ಎಂದು ವರದಿ ಸಲ್ಲಿಸಿ ಪ್ರಕರಣ ಮುಕ್ತಾಯಗೊಳಿಸಲಾಯಿತು. ಇದೀಗ ಎಲ್ಲಾ ಕಾರ್ಖಾನೆಗಳಲ್ಲಿನ ಕಾರ್ಮಿಕರಿಗೂ ಕೊರೊನಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.
ಮೈಸೂರಿನ ಪ್ರಸ್ತುತ ಕೊರೊನಾ ಸೋಂಕಿನ ಪ್ರಕರಣ: ಮೈಸೂರಿನಲ್ಲಿ ಅ.30ರ ವರದಿಯಂತೆ ಒಟ್ಟು 47,523 ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಇದುವರೆಗೂ 44,786 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ 1,781 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 956 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
Recommended Video
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications