ಮೈಸೂರಿನಲ್ಲಿ ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ; ಕೈಗಾರಿಕೆಗಳಿಗೆ ಡಿಸಿ ಸೂಚನೆ
ಮೈಸೂರು, ಅಕ್ಟೋಬರ್ 30: ಮೈಸೂರಿನ ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರೆಲ್ಲರಿಗೂ ಕೊರೊನಾ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ಕೈಗಾರಿಕೆಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೈಸೂರು ಜಿಲ್ಲೆಯ ಕೈಗಾರಿಕೆಗಳ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಮಿಕರಿಗೆ ಆಗಾಗ್ಗೆ ಪರೀಕ್ಷೆಯನ್ನು ನಡೆಸುತ್ತಿರಬೇಕು. ಪರೀಕ್ಷೆ ಮಾಡಿಸುವಲ್ಲಿ ಕೈಗಾರಿಕೋದ್ಯಮಿಗಳು ಕೂಡ ಸಹಕರಿಸಬೇಕು ಎಂದು ತಿಳಿಸಿದರು.
ಕೈಗಾರಿಕಾ ಸಂಘದವರು ಕಾರ್ಮಿಕರಿಗೆ ಈ ಪರೀಕ್ಷೆಯನ್ನು ನಡೆಸಲು ನಿಗದಿತ ಜಾಗವನ್ನು ಗುರುತಿಸಬೇಕು. ಆ ನಂತರ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೆ ಉಚಿತವಾಗಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಕುರಿತು ಶ್ರೀಘ್ರವೇ ಕೆಲಸ ನಡೆಯಬೇಕು ಎಂದರು. ಇನ್ನು ಜಿಲ್ಲೆಯ ಹಲವು ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ 50 ವರ್ಷ ಮೇಲ್ಪಟ್ಟಿರುವ ಕಾರ್ಮಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆಯೂ ಇದೆ ಎಂದರು. ಅಂಥವರಿಗೆ ಸೋಂಕಿನ ಲಕ್ಷಣ ಕಂಡುಬಂದರೆ ತಡ ಮಾಡದೇ ಪರೀಕ್ಷೆ ಮಾಡಿಸಲು ಮುಂದಾಗಬೇಕು ಎಂದು ನಿರ್ದೇಶಿಸಿದರು.

ಜ್ಯುಬಿಲಿಯಂಟ್ ಕಾರ್ಖಾನೆ ನೆನಪು: ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದ ದಿನಗಳಲ್ಲಿ ಜಿಲ್ಲೆಯ ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯ ಕಾರ್ಮಿಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಕಾರ್ಖಾನೆಯ ಔಷಧ ತಯಾರಿಕಾ ಘಟಕದಲ್ಲಿ ಓರ್ವ ವ್ಯಕ್ತಿಯಿಂದ ಹಲವು ವ್ಯಕ್ತಿಗಳಿಗೆ ಕೊರೊನಾ ವೈರಸ್ ಸೋಂಕು ಹರಡಿದ ಕಾರಣ, ಕೊರೊನಾ ಹಾಟ್ ಸ್ಪಾಟ್ ಆಗಿತ್ತು. ಅದಕ್ಕಾಗಿ ಕಾರ್ಖಾನೆಗೆ ಬೀಗ ಹಾಕಿ ವೈರಸ್ ಮೂಲ ಪತ್ತೆಗೆ ಸರ್ಕಾರ ತನಿಖೆ ನಡೆಸಿತಾದರೂ ಕೊನೆಗೂ ಅದರ ಮೂಲ ಮಾತ್ರ ಕಂಡು ಹಿಡಿಯಲು ಸಾಧ್ಯವಾಗಿಲ್ಲ ಎಂದು ವರದಿ ಸಲ್ಲಿಸಿ ಪ್ರಕರಣ ಮುಕ್ತಾಯಗೊಳಿಸಲಾಯಿತು. ಇದೀಗ ಎಲ್ಲಾ ಕಾರ್ಖಾನೆಗಳಲ್ಲಿನ ಕಾರ್ಮಿಕರಿಗೂ ಕೊರೊನಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.
ಮೈಸೂರಿನ ಪ್ರಸ್ತುತ ಕೊರೊನಾ ಸೋಂಕಿನ ಪ್ರಕರಣ: ಮೈಸೂರಿನಲ್ಲಿ ಅ.30ರ ವರದಿಯಂತೆ ಒಟ್ಟು 47,523 ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಇದುವರೆಗೂ 44,786 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ 1,781 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 956 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
Recommended Video
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications