ಮೈಸೂರು ಡಿಸಿ ರೋಹಿಣಿ ಸಿಂಧೂರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮೇಯರ್
ಮೈಸೂರು, ಅಕ್ಟೋಬರ್ 21: "ಜಿಲ್ಲಾಧಿಕಾರಿ ರೋಹಿಣಿ ಅವರು ಶಿಷ್ಟಾಚಾರ ಉಲ್ಲಂಘನೆ ಮಾಡುತ್ತಿದ್ದಾರೆ. ಅವರಿಗೆ ಪ್ರೋಟೊಕಾಲ್ ತಿಳಿದಿಲ್ಲ" ಎಂದು ಜಿಲ್ಲಾಧಿಕಾರಿ ವಿರುದ್ಧ ಮೇಯರ್ ತಸ್ನೀಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಶಿಷ್ಟಾಚಾರ ಪಾಲನೆ ಮಾಡುತ್ತಿಲ್ಲ, ಪ್ರೋಟೊಕಾಲ್ ಫಾಲೋ ಮಾಡುತ್ತಿಲ್ಲ. ದಸರಾ ಉದ್ಘಾಟನೆ ಸಂದರ್ಭ ಸಿಎಂಗೆ ಸ್ವಾಗತ ನೀಡುವಾಗ ಮೈಸೂರಿನ ಪ್ರಥಮ ಪ್ರಜೆಗೆ ಅವಕಾಶ ನೀಡಬೇಕು. ಆದರೆ ನಾವು ಸಿಎಂ ಅನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಹೋಗಿದ್ದಾಗ, ಮೇಯರ್ ಅವರನ್ನು ಒಳಗೆ ಬಿಡಬೇಡಿ ಎಂದು ಪೊಲೀಸರಿಗೆ ಹೇಳಿದ್ದಾರೆ. ದಸರಾ ಉದ್ಘಾಟನೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪಕ್ಕದಲ್ಲಿ ನಮ್ಮ ಆಸನ ಇಡಬೇಕು. ಆದರೆ ಕೊನೆಯಲ್ಲಿ ನಮಗೆ ನೀಡಿದ್ದಾರೆ. ಎರಡೂ ಸಂದರ್ಭ ಅವಮಾನ ಮಾಡಿದ್ದಾರೆ" ಎಂದು ದೂರಿದ್ದಾರೆ.
ಸ್ವಾಗತ ಮಾಡುವಾಗಲೂ ಉಪಮಹಾಪೌರರ ಹಾಗೂ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಿಗೆ ಸ್ವಾಗತ ಕೋರುವುದಿಲ್ಲ. ಯಾಕೆ ಹೀಗೆ ? ಯಾರ ಮನವೊಲಿಸಲು ಈ ಕೆಲಸ ಮಾಡುತ್ತಿದ್ದೀರಿ? ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಅವರಿಗೆ ಮೇಯರ್ ತಸ್ನಿಂ ಪ್ರಶ್ನಿಸಿದ್ದಾರೆ.