ಕೊರೊನಾ ಪರೀಕ್ಷೆಗೆ ಸುಳ್ಳು ಮಾಹಿತಿ ನೀಡಿದರೆ FIR; ಮೈಸೂರು ಡಿಸಿ
ಮೈಸೂರು, ಆಗಸ್ಟ್ 01: ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲಾಡಳಿತ ಸೋಂಕು ಪತ್ತೆ ಪರೀಕ್ಷೆಯನ್ನು ಹೆಚ್ಚಿಸಿದೆ. ಆದರೆ ಅನೇಕರು ಕ್ವಾರಂಟೈನ್ ಮತ್ತು ಆಸ್ಪತ್ರೆಗೆ ದಾಖಲಿಸುತ್ತಾರೆ, ಮನೆಗೆ ಪೋಸ್ಟರ್ ಹಚ್ಚುತ್ತಾರೆ ಎಂಬ ಕಾರಣಕ್ಕೆ ಸುಳ್ಳು ವಿಳಾಸ, ಸುಳ್ಳು ಮೊಬೈಲ್ ನಂಬರ್ ನೀಡುತ್ತಿದ್ದಾರೆ. ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸುತ್ತೇವೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣ ಹಾಗೂ ಸಾವಿನ ಸಂಖ್ಯೆಗಳು ಹೆಚ್ಚಾಗುತ್ತಿವೆ. ಸುಳ್ಳು ಮಾಹಿತಿ ನೀಡಿ ಕೆಲವರು ಚಿಕಿತ್ಸೆ ಪಡೆಯದೆ ನಾಪತ್ತೆಯಾಗುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲಾಡಳಿತ ತಪ್ಪು ಮಾಹಿತಿ ನೀಡುವವರ ವಿರುದ್ಧ ಎಫ್ಐಆರ್ ದಾಖಲಿಸಲು ಮುಂದಾಗಿರುವುದಾಗಿ ತಿಳಿಸಿದರು.
ತಪಾಸಣೆ ವೇಳೆ 30ಕ್ಕೂ ಹೆಚ್ಚಿನ ಸೋಂಕಿತರು ತಪ್ಪು ವಿಳಾಸ ನೀಡಿದ್ದು, ಜಿಲ್ಲಾಡಳಿತದ ಸಂಪರ್ಕಕ್ಕೆ ಸಿಕ್ಕಿಲ್ಲ. ಪರೀಕ್ಷೆ ವರದಿ ಪಾಸಿಟಿವ್ ಬಂದಾಗ ಆರೋಗ್ಯಾಧಿಕಾರಿಗಳು ಕರೆ ಮಾಡಿದರೆ ಬೇರೆ ಯಾರೋ ಕರೆ ಸ್ವೀಕರಿಸುತ್ತಾರೆ ಅಥವಾ ನಂಬರ್ ತಪ್ಪಾಗಿರುತ್ತದೆ. ವಿಳಾಸ ಹುಡುಕಿ ಹೋದರೆ ಅಲ್ಲಿಯೂ ಸೋಂಕಿತರು ಸಿಗುವುದಿಲ್ಲ. ಹೀಗೆ ಆರೋಗ್ಯಾಧಿಕಾರಿಗಳನ್ನು ಕೊರೊನಾ ಟೆಸ್ಟಿಂಗ್ ವೇಳೆ ತಪ್ಪು ಮಾಹಿತಿ ನೀಡಿ ಯಾಮಾರಿಸುತ್ತಿದ್ದಾರೆ ಎಂದರು.

ಸಾಮಾನ್ಯವಾಗಿ ಗಂಟಲು ದ್ರವ ಪರೀಕ್ಷೆಯಲ್ಲಿ ನೀಡುವ ವಿವರವನ್ನು ಸರಿಯಾಗಿ ಪರಿಶೀಲಿಸಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ಇದನ್ನು ಬಂಡವಾಳವನ್ನಾಗಿ ಮಾಡಿಕೊಂಡಿರುವ ಕೆಲವರು ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದರು.
ಪರೀಕ್ಷೆ ಸಂದರ್ಭದಲ್ಲಿ ಆಧಾರ್, ರೇಷನ್ ಕಾರ್ಡ್ ಕಡ್ಡಾಯ: ಪರೀಕ್ಷೆ ವೇಳೆ ತಪ್ಪು ಮಾಹಿತಿ ನೀಡುತ್ತಿರುವ ಹಿನ್ನೆಲೆ ಇನ್ನು ಮುಂದೆ ಪರೀಕ್ಷೆ ವೇಳೆ ಆಧಾರ್ ಕಾರ್ಡ್ ನಂಬರ್, ಮತದಾರರ ಗುರುತಿನ ಚೀಟಿ ಮತ್ತು ರೇಷನ್ ಕಾರ್ಡ್ ಯಾವುದಾದ್ರೂ ಒಂದು ದಾಖಲೆಯನ್ನು ವ್ಯಕ್ತಿ ನೀಡಲೇಬೇಕು ಎಂಬ ನಿಯಮವನ್ನು ಜಿಲ್ಲಾಡಳಿತ ರೂಪಿಸಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications