ಸಾವಿನಲ್ಲೂ ಒಂದಾದ ಮೈಸೂರಿನ ತಂದೆ- ಮಗ
ಮೈಸೂರು, ಫೆಬ್ರವರಿ 4: ಯಾತ್ರೆಗೆಂದು ವೈಷ್ಣೋದೇವಿಗೆ ತೆರಳಿದ ನಂಜನಗೂಡಿನ ವ್ಯಕ್ತಿಯೋಬ್ಬರು ಮರಳಿ ಬರುವಾಗ ಅನಾರೋಗ್ಯದಿಂದ ಮೃತಪಟ್ಟಿದ್ದು, ತಂದೆಯ ಸಾವಿನ ಸುದ್ದಿ ತಿಳಿದು ಮಗನೂ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ನಂಜನಗೂಡು ಗಾಣಿಗರ ಸಂಘದ ಗೌರವಾಧ್ಯಕ್ಷ ಕೆ.ಮಾದಶೆಟ್ಟಿ(84) ಹಾಗೂ ಅವರ ಮಗ ಅರುಣ್ ಕುಮಾರ್ (43) ಎಂದು ಗುರುತಿಸಲಾಗಿದೆ. ಕೆ.ಮಾದಶೆಟ್ಟಿ ತೀರ್ಥಯಾತ್ರೆಗೆಂದು ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದರ್ಶನಕ್ಕೆ ತೆರಳಿದ್ದರು. ಗುರುವಾರ ಸಂಜೆ ದರ್ಶನ ಪಡೆದು ವಾಪಾಸ್ ಹಿಂತಿರುವಾಗ ಅನಾರೋಗ್ಯಕ್ಕೆ ತುತ್ತಾದ ಮಾದಶೆಟ್ಟಿ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಶುಕ್ರವಾರ ಮೃತಪಟ್ಟಿದ್ದಾರೆ.[ರು 5 ಸಾವಿರ ತೆಗೆಯಿತು, ವಿದೇಶಿ ವಿದ್ಯಾರ್ಥಿನಿಯ ಪ್ರಾಣ]

ಇತ್ತ ತಂದೆ ಸಾವಿನ ಸುದ್ದಿ ತಿಳಿದ ಮಗ ಅರುಣ್ಕುಮಾರ್ ಕೂಡ ಹೃದಯಾಘಾತಕ್ಕೆ ತುತ್ತಾಗಿ ಶುಕ್ರವಾರ ಬೆಳಗ್ಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಅವರೂ ಸಹ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮೈಸೂರಿನ ಎಂಟೆಕ್ ವಿದ್ಯಾರ್ಥಿನಿ ನೇಣಿಗೆ ಶರಣು
ಮೈಸೂರು: ಮನೆಯ ನಾಯಿಗೆ ಮಾಂಸ ತರಲು ಒತ್ತಾಯ ಮಾಡಿ ಅಕ್ಕ ಹಾಗೂ ತನ್ನ ತಾಯಿಯನ್ನು ಹೊರ ಕಳುಹಿಸಿದ ಎಂಟೆಕ್ ಪದವೀಧರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎನ್.ಆರ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.[ಪುತ್ರಿಗೆ ವಿಷವಿತ್ತು ಹತ್ಯೆಗೆ ಯತ್ನ: ತಂದೆ ನಿಧನ, ತಾಯಿ ಪಾರು]
ಕೆ.ರಮ್ಯಾ(25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೈಸೂರಿನ ಮಹಾನಗರ ಪಾಲಿಕೆಯ ಆಶ್ರಯ ಯೋಜನೆಯ ಯೋಜನಾಧಿಕಾರಿ ಕುಮಾರಸ್ವಾಮಿ ಎಂಬುವರ ಮಗಳಾಗಿರುವ ರಮ್ಯಾ, ಎಂಟೆಕ್ ಪದವೀಧರೆ. ಕೆಲಸ ಹುಡುಕುತ್ತಿದ್ದ ಈಕೆ ಮೊನ್ನೆ ಪಿಡಿಒ ಪರೀಕ್ಷೆ ಸಹ ಬರೆದಿದ್ದಳು. ಪರೀಕ್ಷೆ ಚೆನ್ನಾಗಿ ಮಾಡಿರುವುದಾಗಿ ತಂದೆಯ ಮುಂದೆ ಹೇಳಿಕೊಂಡಿದ್ದಳು. ಆದರೆ ಇದ್ದಕ್ಕಿದ್ದಂತೆ ಶುಕ್ರವಾರ ಮಧ್ಯಾಹ್ನ ಗಾಂಧಿ ನಗರದಲ್ಲಿರುವ ಮನೆಯಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇನ್ನು ಮಾರುಕಟ್ಟೆಯಿಂದ ಮನೆಗೆ ಬಂದ ಅಕ್ಕ ಹಾಗೂ ತಾಯಿ ರಮ್ಯಾಳ ರೂಮ್ಗೆ ಹೋಗಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ರಮ್ಯಾಳ ದೇಹ ಪತ್ತೆಯಾಗಿದೆ. ತಮ್ಮನ್ನು ಕಾಡಿಸಲು ಈ ರೀತಿ ಮಾಡುತ್ತಿದ್ದಾಳೆ ಎಂದು ತಿಳಿದ ಅಕ್ಕ ಈ ರೀತಿ ಚೆನ್ನಾಗಿ ಕಾಣುತ್ತಿಯಾ ಎಂದು ಮೊಬೈಲ್ನಲ್ಲಿ ಫೋಟೋ ತೆಗೆದಿದ್ದಾಳೆ. ಆದರೆ ಅದಕ್ಕೆ ಪ್ರತಿಕ್ರಿಯೆ ನೀಡದ ರಮ್ಯಾ ದೇಹವನ್ನ ಮುಟ್ಟು ನೋಡಿದಾಗ ಆಕೆ ನಿಜವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗೊತ್ತಾಗಿದೆ.
ತಕ್ಷಣ ಸುತ್ತಮುತ್ತಲ ಜನರ ಸಹಾಯದಿಂದ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications