ಮೈಸೂರಿನಲ್ಲಿ ಮಳೆಗೆ ಮೊದಲ ಬಲಿ : ಜಿಲ್ಲಾಡಳಿತದಿಂದ ಎಲ್ಲೋ ಅಲರ್ಟ್ ಘೋಷಣೆ

ಮೈಸೂರು, ಆಗಸ್ಟ್ 9 : ಮೈಸೂರಿನಲ್ಲಿ ಮಹಾಮಳೆಗೆ ಮನೆಯ ಗೋಡೆ ಕುಸಿದು ವ್ಯಕ್ತಿ ಮೃತಪಟ್ಟಿರುವ ಘಟನೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ನಡೆದಿದೆ.

ಈ ಭಾಗದಲ್ಲಿ ಕಳೆದ ಒಂದು ವಾರಗಳಿಂದಲೂ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಸರ್ಕಾರ ಮೃತ ಕುಟುಂಬಕ್ಕೆ ಜಿಲ್ಲಾಡಳಿತದಿಂದ 5 ಲಕ್ಷ ಪರಿಹಾರ ಘೋಷಿಸಿದೆ.

ಮಹಾಮಳೆಗೆ ಧುಮ್ಮಿಕ್ಕುತ್ತಿವೆ ಕಾವೇರಿ ಕೊಳ್ಳದ ಅಣೆಕಟ್ಟೆಗಳು
ಹುಣಸೂರು ಪಟ್ಟಣದ ಬ್ರಾಹ್ಮಣರ ಬಡಾವಣೆಯ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನ ಜಲಾವೃತಗೊಂಡಿದ್ದು, ದೇವಸ್ಥಾನದ ಮೆಟ್ಟಿಲಿನವರೆಗೂ ಲಕ್ಷ್ಮಣ ತೀರ್ಥನದಿಯ ಪ್ರವಾಹದ ನೀರು ಹರಿದುಬರುತ್ತಿದೆ. ಸಂಜೆ ವೇಳೆಗೆ ದೇವಸ್ಥಾನ ಮುಳುಗುವ ಆತಂಕ ಎದುರಾಗಿದೆ. ಮತ್ತೊಂದು ಪ್ರಕರಣದಲ್ಲಿ ಅಬ್ಬೂರು ಗ್ರಾಮದಲ್ಲಿ ಮನೆಗೆ ನೀರಿ ನುಗ್ಗಿದ ಪರಿಣಾಮ ಮೂವರು ಅಸ್ವಸ್ಥಗೊಂಡಿದ್ದು ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Death on collapse of house wall at Husnsur
ಭಾರಿ ಮಳೆಯಿಂದಾಗಿ ಎಚ್ ಡಿ ಕೋಟೆ ತಾಲ್ಲೂಕಿನ ಬಹುತೇಕ ಸೇತುವೆಗಳು ಮುಳುಗಡೆಯಾಗಿದ್ದು, ಇಡೀ ತಾಲ್ಲೂಕಿನಾದ್ಯಂತ ಮಹಾ ಮಳೆಗೆ ಜನತೆ ನಲುಗಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗು ನದಿ ಹಿನ್ನೀರಿನ ಪ್ರದೇಶ ಜಲಾವೃತವಾಗಿದ್ದು, ಮುತ್ತಿಗೆಹುಂಡಿ ಹಾಗೂ ಕುರ್ಣೇಗಾಲ ಸಂಪರ್ಕ ಸೇತುವೆ ಮೇಲೂ ನೀರು ಉಕ್ಕಿ ಹರಿಯುತ್ತಿದೆ. ಭೀಕರ ಮಳೆ ಕಂಡು ಗ್ರಾಮಸ್ಥರು ಕಂಗಾಲಾಗಿದ್ದು ನೀರಿನ ರಭಸಕ್ಕೆ ರೈತರ ಬೆಳೆಗಳು ಕೊಚ್ಚಿಹೋಗಿದೆ.

ಮುಳುಗಿದ ಕೇರಳದಲ್ಲಿ ಏರುತ್ತಿದೆ ಸಾವಿನ ಲೆಕ್ಕ; ಜನಜೀವನ ಅಸ್ತವ್ಯಸ್ತ
ಮೈಸೂರಿನ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಆಗಸ್ಟ್ 10 ರಿಂದ 16ವರ ಮಧ್ಯದಿಂದ ಭಾರೀ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದಿಂದ ಮುನ್ಸೂಚನೆ ನೀಡಿದ ಕಾರಣ ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್ ಈ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+