ಕಪಿಲೆ ಅಬ್ಬರ ಇಳಿಮುಖ, ಮೈಸೂರು –ಊಟಿ ರಸ್ತೆ ಸಂಚಾರಮುಕ್ತ
ಮೈಸೂರು, ಆಗಸ್ಟ್ 14 : ಕಪಿಲೆಯ ಪ್ರವಾಹದಲ್ಲಿಇಳಿಮುಖವಾಗಿದ್ದು, ನಂಜನಗೂಡು ಪಟ್ಟಣ ಜನಜೀವನ ಸಹಜ ಸ್ಥಿತಿಗೆ ಬಂದಿದೆ. ಕಬಿನಿ ಅಣೆಕಟ್ಟೆಯ ಹೊರಹರಿವು 45 ಸಾವಿರ ಕ್ಯೂಸೆಕ್ ಗೆ ತಗ್ಗಿದ್ದರಿಂದ ನಂಜನಗೂಡಿನಲ್ಲಿ ಪ್ರವಾಹ ಇಳಿಮುಖವಾಗಿದೆ.
ರಾಷ್ಟ್ರೀಯಹೆದ್ದಾರಿ-766ರಲ್ಲಿ ಮಲ್ಲನಮೂಲೆ ಸಮೀಪ ಕಪಿಲೆಯ ಪ್ರವಾಹದ ನೀರು ಆರೇಳು ಅಡಿಗಳಷ್ಟು ಎತ್ತರದವರೆಗೂ ಹರಿಯುತ್ತಿದ್ದುದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ನೀರು ಖಾಲಿಯಾಗಿದ್ದರಿಂದ ಸೋಮವಾರ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು, ವಾಹನ ಸಂಚಾರ ಆರಂಭವಾಗಿದೆ.
ಕಪಿಲೆಯ ಪ್ರವಾಹದಲ್ಲಿ ಇಳಿಮುಖವಾಗಿದ್ದರೂ ತಾಲೂಕಿನ ಸಾವಿರಾರು ಎಕರೆ ಕೃಷಿಭೂಮಿಯಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ರೈತರು ಭಾರೀ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಪಟ್ಟಣ ಸೇರಿದಂತೆ ಸಮೀಪದ ಹಳ್ಳಿಗಳಲ್ಲಿನ ತಗ್ಗುಪ್ರದೇಶದ ಅನೇಕ ಮನೆಗಳು ಪ್ರವಾಹದ ಹೊಡೆತದಿಂದಾಗಿ ಹಾನಿಗೀಡಾಗಿವೆ.

ಊಟಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕೂಡ ಜಲಾವೃತವಾಗಿ, ಬಂದ್ ಆಗಿತ್ತು. ಕಬಿನಿ ಜಲಾಶಯದಿಂದ 80 ಸಾವಿರ ಕ್ಯೂಸೆಕ್ ನೀರು ಬಿಟ್ಟಿದ್ದರಿಂದ ಈ ಭಾರೀ ಪ್ರವಾಹ ಉಂಟಾಗಿತ್ತು. ಇದೀಗ ಹೊರಹರಿವು ಇಳಿಕೆಯಾಗಿ ಕಪಿಲಾ ನದಿ ನೀರಿನ ಮಟ್ಟ ಕಡಿಮೆಯಾಗಿದ್ದರಿಂದ ಪ್ರವಾಹದ ನೀರು ಸಹ ಇಳಿಮುಖವಾಗಿದೆ.
ಪ್ರವಾಹ ಇಳಿಮುಖವಾಗಿ ನದಿಪಾತ್ರ ಸಹಜ ಸ್ಥಿತಿಗೆ ಮರಳುತ್ತಿದ್ದರೂ ಸಂತ್ರಸ್ತರ ಬದುಕು ಎಂದಿನಂತಾಗಲು ಒಂದು ವರ್ಷವೇ ಬೇಕಾಗಬಹುದು ಎಂಬ ಪರಿಸ್ಥಿತಿ ಇದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications