ತಿ.ನರಸೀಪುರ ಕುಂಭ ಮೇಳ: ಜನಮನ ಸೆಳೆದ ದೀಪಾಲಂಕಾರ
ಮೈಸೂರು, ಫೆಬ್ರವರಿ 18:ತಿ.ನರಸೀಪುರದ ತಿರುಮಕೂಡಲಿನಲ್ಲಿ ನಡೆಯುತ್ತಿರುವ ವಿಶ್ವಪ್ರಸಿದ್ಧ ಕುಂಭಮೇಳದಲ್ಲಿ 2ನೇ ದಿನವೂ ಪೂಜಾ ಕೈಂಕರ್ಯ ಮುಂದುವರೆದಿದೆ. ಇಂದು ಸಂಜೆ ಸಹ ಧಾರ್ಮಿಕ ಸಭೆ ನಡೆಯಲಿದ್ದು, ಸಿಎಂ ಕುಮಾರಸ್ವಾಮಿ ಸಹ ಭಾಗಿಯಾಗಲಿದ್ದಾರೆ.ಇದೇ ವೇಳೆ ತ್ರಿವೇಣಿ ಸಂಗಮದಲ್ಲಿ ನದಿ ನೀರಿನ ಮಟ್ಟ ದಿಢೀರ್ ಹೆಚ್ಚಾಗಿದೆ.
ಮರಳು ಸೇತುವೆಯ ಮೇಲೆ ನದಿಯ ನೀರು ಹರಿಯುತ್ತಿದೆ. ನಿನ್ನೆಗಿಂತ ಇಂದು ಹೆಚ್ಚಾಗಿ ನದಿಗೆ ನೀರು ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ನದಿ ದಡದಿಂದ ಯಾಗ ಮಂಟಪ ಹಾಗೂ ಧರ್ಮಸಭೆ ಮಂಟಪಕ್ಕೆ ಸಂಪರ್ಕ ಕಲ್ಪಿಸಲಾಗಿರುವ ಸೇತುವೆ ಮೇಲೆ ನೀರು ಹೆಚ್ಚಾಗಿ ಹರಿಯುತ್ತಿದೆ.
ಸ್ವಚ್ಛತೆ ದೃಷ್ಟಿಯಿಂದ ಹೆಚ್ಚಿನ ನೀರು ಬಿಡಲಾಗಿದ್ದು, ಸೇತುವೆ ಮೇಲೆ ಮರಳು ಮೂಟೆಗಳನ್ನಿಟ್ಟು ದಾಟಲು ವ್ಯವಸ್ಥೆ ಮಾಡಲಾಗಿದೆ. ಕುಂಭ ಮೇಳದಲ್ಲಿ ಪುಣ್ಯಸ್ನಾನವನ್ನು ಹೊರತುಪಡಿಸಿದಂತೆ ಪ್ರಮುಖವಾಗಿ ಗಮನ ಸೆಳೆಯುತ್ತಿರುವುದು ದೀಪಾಲಂಕಾರ. ಮೈಸೂರಿನಲ್ಲಿ ದಸರಾ ಸಂದರ್ಭದಲ್ಲಿ ಅಳವಡಿಸಲಾಗುವ ದೀಪಾಲಂಕಾರವನ್ನು ಇಲ್ಲಿನ ದೀಪಾಲಂಕಾರ ನೆನಪು ಮಾಡಿಕೊಡುತ್ತಿದೆ.
ಕುಂಭಮೇಳ 2019: ವೈಭವದ ಗಂಗಾರತಿಯ, ಆಕರ್ಷಕ ಚಿತ್ರಗಳು

ಶ್ರೀನಗರದಲ್ಲಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಮಣ್ಣು ಪ್ರತಿಕೃತಿಯ ಮೂಲಕ ಕಲಾವಿದನೊಬ್ಬ ನುಡಿ ನಮನ ಸಲ್ಲಿಸಿದ್ದು, ಭಕ್ತಗಣವನ್ನು ಆಕರ್ಷಿಸುತ್ತಿದೆ. ಕಳೆದ ಹದಿನೈದು ವರ್ಷದಿಂದ ಪ್ರತಿ ಕುಂಭಮೇಳದಲ್ಲಿ ತಿ. ನರಸೀಪುರದ ರಘುನಂದನ್ ಮರಳು ಕಲಾಕೃತಿ ರಚಿಸುತ್ತಿದ್ದಾರೆ. ಈ ಬಾರಿ ತ್ರೀಡಿ ಮರಳು ಕಲಾಕೃತಿ ರಚಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಈ ಮರಳು ಕಲಾಕೃತಿ ಮೂರು ಅಂಶಗಳನ್ನು ಪ್ರತಿನಿಧಿಸುತ್ತದೆ. ಉಗ್ರರ ದಾಳಿಗೆ ಮಡಿದ ಸೈನಿಕರು, ಇತ್ತೀಚೆಗೆ ಶಿವಕೈರಾದ ಶಿವಕುಮಾರ ಸ್ವಾಮೀಜಿ ಹಾಗೂ ಕುಂಭಮೇಳದ ಕಳಸ ಪ್ರತಿಷ್ಟಾಪನೆಯನ್ನು ಚಿತ್ರ ಒಳಗೊಂಡಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications