ಮೈಸೂರಿನಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷವೇ ದೀಪಾವಳಿ ಮಾಲಿನ್ಯ ಹೆಚ್ಚು
ಮೈಸೂರು, ನವೆಂಬರ್ 22: ಮೈಸೂರಿನಲ್ಲಿ ದೀಪಾವಳಿ ಸಮಯದಲ್ಲಿ ಉಂಟಾಗುವ ಮಾಲಿನ್ಯ ಪ್ರಮಾಣವು ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್ಪಿಸಿಬಿ) ಮಾಹಿತಿಯು ಮೂರು ದಿನಗಳ ಆಚರಣೆಯ ಸಮಯದಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಬಿಡುಗಡೆ ಮಾಡಿದ್ದು, ಈ ಪ್ರಕಾರ ಮೈಸೂರಿನಲ್ಲಿ ದೀಪಾವಳಿಯ ಹಬ್ಬದ ಸಂದರ್ಭದಲ್ಲಿ ಮಾಲಿನ್ಯದ ಮಟ್ಟ ಕಳೆದ ವರ್ಷಕ್ಕಿಂತ ಹೆಚ್ಚು ಎಂದು ವರದಿ ತಿಳಿಸಿದೆ.

ಸುಪ್ರೀಂಕೋರ್ಟ್ ತೀರ್ಪಿನ ಅನುಸಾರ ಈ ವರ್ಷ ಹಸಿರು ಪಟಾಕಿಗೆ ನಗರದಲ್ಲಿ ಹೆಚ್ಚು ಒತ್ತು ನೀಡಲಾಗಿತ್ತು. ಆದರೆ,ಹಸಿರು ಪಟಾಕಿ ಸಿಡಿಸಿದರೂ ಮೈಸೂರಿನಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚಾದ ಪರಿಸರ ಮಾಲಿನ್ಯ ಹೆಚ್ಚಾಗಿದೆ. ದೀಪಾವಳಿಯ 3 ದಿನ ನವೆಂಬರ್ 14ರವರೆಗೆ ಸತತ ಮೂರು ದಿನ 3 ಕಡೆ ವಾಯು ಗುಣಮಟ್ಟದ ಮಾಪನ ಕೆಆರ್ ವೃತ್ತ, ಕುವೆಂಪು ನಗರ, ಹೆಬ್ಬಾಳು ರಿಂಗ್ ರಸ್ತೆಯಲ್ಲಿ ಅಧಿಕ ಮಟ್ಟದಲ್ಲಿ ಕಂಡು ಬಂದಿದೆ.
ಎಷ್ಟಿದೆ:
ಈ ವರ್ಷ ಮೊದಲನೇ ದಿನ 66.1 ಡೆಸಿಬಲ್ ಇದ್ದರೆ ಎರಡನೇ ದಿನ 70.7ರಷ್ಟು ಹೆಚ್ಚಾಗಿದೆ. ಮೂರನೇ ದಿನ 70.3 ಡೆಸಿಬಲ್ನಷ್ಟು ದಾಖಲಾಗಿದೆ. ಕಳೆದ ವರ್ಷ ದೀಪಾವಳಿಯ ಮೊದಲ ಮತ್ತು ಎರಡನೇ ದಿನ ಪಟಾಕಿ ಸಿಡಿತದಿಂದ ನಗರದಲ್ಲಿ ಶಬ್ದ ಪ್ರಮಾಣ 65.0 ಡೆಸಿಬಲ್ ಇದ್ದರೆ, ಮೂರನೇ ದಿನ 74 ಡೆಸಿಬಲ್ಗೆ ಏರಿಕೆಯಾಗಿತ್ತು.
ಯಾವ ಬಡಾವಣೆಯಲ್ಲಿ ಎಷ್ಟು:
ನಗರದ ಕೆ.ಆರ್.ವೃತ್ತದಲ್ಲಿ ಹಬ್ಬದ ಎರಡನೇ ದಿನ 102ರಷ್ಟಿದ್ದರೆ ಮೂರನೇ ದಿನ 140 ಇದೆ. ಮತ್ತೆ ಹೆಬ್ಬಾಳು ರಿಂಗ್ ರಸ್ತೆಯಲ್ಲಿನ ಕೇಂದ್ರದಲ್ಲಿ ಎರಡನೇ ದಿನ 100 ಇದ್ದರೆ, ಮೂರನೇ ದಿನ 118ಕ್ಕೆ ಏರಿದೆ. ಕುವೆಂಪು ನಗರದ ಕೇಂದ್ರದಲ್ಲಿ ಮೊದಲ ದಿನ 43, ಎರಡನೇ ದಿನ 53 ಮತ್ತು ಮೂರನೇ ದಿನ 57 ಏರಿಕೆಯಾಗಿದ್ದು, ವಾಯುವಿನ ಗುಣಮಟ್ಟ ಹಾಳಾಗಿರುವುದು ಕಂಡು ಬಂದಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
ಮಾಲಿನ್ಯವನ್ನು ಮತ್ತಷ್ಟು ಕಡಿಮೆ ಮಾಡಲು ಪಟಾಕಿಗಳ ಬಗ್ಗೆ ಹೆಚ್ಚಿನ ಜಾಗೃತಿ ಅಗತ್ಯ. 2022 ರಲ್ಲಿ ದೀಪಾವಳಿ ದಿನಗಳಿಗೆ ಹೋಲಿಸಿದರೆ ಹಸಿರು ಪಟಾಕಿಗಳ ಪರಿಚಯವು ಮಾಲಿನ್ಯವನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಿದೆ. ಬೆಂಗಳೂರು, ಮೈಸೂರಿನಂತಹ ನಗರದಲ್ಲಿ ನೈಜ ಮಾಲಿನ್ಯದ ಮಟ್ಟಗಳ ಮೇಲೆ ಬೆಳಕು ಚೆಲ್ಲಲು ಹೆಚ್ಚಿನ ಪ್ರದೇಶಗಳಲ್ಲಿ ಮಾನಿಟರಿಂಗ್ ಅಗತ್ಯವಿದೆ ಎಂದು ಕೆಎಸ್ಪಿಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications