ಕೊನೆಗೂ ಕೃಪೆ ತೋರಿದ ವರುಣ: ಮೈಸೂರಿನಲ್ಲಿ ದೀಪಾವಳಿ ಖರೀದಿ ಭರಾಟೆ ಜೋರು
ಮೈಸೂರು, ನವೆಂಬರ್ 01: ಬೆಲೆ ಏರಿಕೆ ನಡುವೆಯೂ ಜನ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸುವ ಸಲುವಾಗಿ ಮೈಸೂರು ನಗರದ ವಿವಿಧ ಮಾರುಕಟ್ಟೆ ಪ್ರದೇಶಗಳಲ್ಲಿ ಹೂವು, ಹಣ್ಣು ತರಕಾರಿ, ಪಟಾಕಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿರುವ ದೃಶ್ಯ ಕಂಡು ಬಂದಿದೆ. ಮಹಿಳೆಯರು ಪುರುಷರಾದಿಯಾಗಿ ವಸ್ತುಗಳನ್ನು ಖರೀದಿಸಿ ಹಬ್ಬಾಚರಣೆಗೆ ಮುಂದಾಗಿರುವುದು ಕಂಡು ಬಂದಿದೆ.
ಈ ನಡುವೆ ಬೆಳಕಿನ ಹಬ್ಬದ ಸಂಭ್ರಮದಲ್ಲಿರುವ ಮೈಸೂರಿಗರು ಗುರುವಾರ ನರಕ ಚತುರ್ದಶಿಯನ್ನು ಸಂಭ್ರಮದಿಂದ ಆಚರಿಸಿದ್ದು, ಶನಿವಾರದ ಬಲಿಪಾಡ್ಯಮಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನಗರದ ಪ್ರಮುಖ ಮಾರುಕಟ್ಟೆಗಳಾದ ದೇವರಾಜ ಮಾರುಕಟ್ಟೆ, ಮಂಡಿ ಮಾರ್ಕೆಟ್, ವಾಣಿವಿಲಾಸ ಮಾರುಕಟ್ಟೆ, ಧ್ವನಂತ್ರಿ ರಸ್ತೆ, ಅಗ್ರಹಾರ ವೃತ್ತ, ನಂಜುಮಳಿಗೆ, ಜೆಕೆ ಮೈದಾನದ ರಸ್ತೆ ಸೇರಿದಂತೆ ನಗರದ ನಾನಾ ರಸ್ತೆ ಹಾಗೂ ರಸ್ತೆ ಬದಿಗಳಲ್ಲಿ ಬೆಳಗ್ಗೆಯಿಂದಲೇ ಸಾರ್ವಜನಿಕರು ಹಬ್ಬದ ಉತ್ಸಾಹದಲ್ಲಿ ಹಬ್ಬಕ್ಕೆ ಬೇಕಾದ ಹಣ್ಣು, ಹೂವು, ತರಕಾರಿ, ಪೂಜಾ ಸಾಮಗ್ರಿ ಖರೀದಿಸಿದರು.

ಹಬ್ಬದ ವೇಳೆ ಮನೆಯನ್ನು ಬೆಳಗುವ ಹಣತೆಗಳಿಗೆ ಎಳ್ಳೆಣ್ಣೆ ಹಾಕಿ ಸಾಲು ಸಾಲಾಗಿ ಜೋಡಿಸಿ ದೀಪ ಬೆಳಗುವುದು ಸಂಪ್ರದಾಯ. ಸದ್ಯ ಮಾರುಕಟ್ಟೆಯಲ್ಲಿರುವ ಪರಿಸರ ಸ್ನೇಹಿ ಮಣ್ಣಿನ ಹಣತೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಹೆಚ್ಚಿನ ವ್ಯಾಪಾರ ವಹಿವಾಟು ನಡೆಯಿತು. ಹಬ್ಬಕ್ಕೆ ನಾಲ್ಕೈದು ದಿನ ಇರುವಾಗಲೇ ವಿವಿಧ ಬಗೆಯ ಆಕೃತಿಯ ಹಣತೆಗಳು ಮಾರುಕಟ್ಟೆಗೆ ಬಂದಿವೆ.
ಪ್ರಮುಖವಾಗಿ ಶಂಖುವಿನಾಕಾರ, ಆನೆ ಮೇಲಿರುವ ಹಣತೆ, ಒಂಟೆ ಹಣತೆ, ಕುದುರೆ ಮೇಲಿರುವ ಹಣತೆ, ಗಿಳಿ ಮೇಲೆ, ನಕ್ಷತ್ರಾಕಾರ, ಬುಟ್ಟಿಯಾಕಾರ, ಕಮಲ ಹೂವಿನಾಕಾರ, ಗುಲಾಬಿಯಾಕಾರ, ಸ್ತ್ರೀಯರು ಸ್ವಾಗತಿಸುತ್ತಿರುವ ಹಣತೆ, ಪಿಂಗಾಣಿ ಹಣತೆ, ಗ್ಲಾಸ್ನಿಂದ ತಯಾರಿಸಿರುವ ಹಣತೆ, ಮಣ್ಣಿನ ಹಣತೆ ಹೀಗೆ ವಿವಿಧ ಬಗೆಯ ಹಣತೆಗಳು ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾದವು.

ಸಾಮಾನ್ಯವಾಗಿ ಹಬ್ಬಗಳು ಬಂತೆಂದರೆ ಹೂವಿನ ದರ ಗಗನಕ್ಕೇರುತ್ತದೆ. ಆದರೆ, ದೀಪಾವಳಿಗೆ ಹೆಚ್ಚಾಗಿ ಹೂವನ್ನು ಬಳಸದಿರುವುದರಿಂದ ದರ ಹೆಚ್ಚು ಏರಿಕೆಯಾಗಿಲ್ಲ. ಸೇವಂತಿಗೆ ಒಂದು ಮಾರಿಗೆ 100 ರೂ, ಚಂಡು ಹೂ ಕೆಜಿಗೆ 50, ಕನಕಾಂಬರ ಮಾರಿಗೆ 150, ಕಾಕಡ 50 ರೂ, ಮಲ್ಲಿಗೆ 150 ರೂ, ಗುಲಾಬಿ ಕೆಜಿಗೆ 200 ರೂ, ತಾವರೆ 2ಕ್ಕೆ 50 ರೂಗೆ ಮಾರಾಟವಾಯಿತು. ತರಕಾರಿ ದರವೂ ಏರಿಕೆಯಾಗಿರಲಿಲ್ಲ. ತೆಂಗಿನಕಾಯಿ 50 ರೂಗೆ ಎರಡು, ಬೀನ್ಸ್ 60-80, ಕ್ಯಾರೆಟ್ 60, ಬೀಟ್ರೋಟ್ 40, ಬದನೆಕಾಯಿ 40, ಕೋಸು 20, ಕ್ಯಾಪ್ಸಿಕಂ 60, ನುಗ್ಗೆ 100 ರಿಂದ 120, ಹುಳಿ ಟೊಮೆಟೊ 40 ರೂಗೆ ಮಾರಾಟವಾಯಿತು.
ಪಟಾಕಿ ಖರೀದಿ ಜೋರು
ಬೆಲೆ ಏರಿಕೆ ನಡುವೆಯೂ ಪಟಾಕಿ ಖರೀದಿ ಜೋರಾಗಿ ನಡೆಯುತ್ತಿದೆ. ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶ, ಜೆಕೆ ಮೈದಾನ, ಇಟ್ಟಿಗೆಗೂಡು, ಸರಸ್ವತಿಪುರಂ, ಪಡುವಾರಹಳ್ಳಿ, ಚಾಮುಂಡಿಪುರ, ನಂಜುಮಳಿಗೆ, ರಾಮಕೃಷ್ಣನಗರ, ಕುವೆಂಪುನಗರ, ಅಕ್ಷಯಭಂಡಾರ, ಕುಂಬಾರಕೊಪ್ಪಲು ಸೇರಿದಂತೆ ನಗರದ ವಿವಿಧೆಡೆ ತೆರೆದಿರುವ ಮಳಿಗೆಗಳಲ್ಲಿ ಪಟಾಕಿಯ ವ್ಯಾಪಾರ ಭರ್ಜರಿಯಾಗಿ ನಡೆಯಿತು. ಕಳೆದ ಎರಡು ದಿನಗಳಿಂದ ಮಳೆರಾಯ ಬಿಡುವು ನೀಡಿರುವುದರಿಂದ ಪಟಾಕಿ ಮಾರಾಟಗಾರರು ಕೊಂಚ ನೆಮ್ಮದಿಯುಸಿರು ಬಿಟ್ಟಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications