ಮೀಸಲಾತಿ ಬೇಡಿಕೆ; ಈಶ್ವರಪ್ಪ ವಿರುದ್ಧ ಸ್ವ ಪಕ್ಷದವರ ಮುನಿಸು!
ಮೈಸೂರು, ಮಾರ್ಚ್ 02: ರಾಜ್ಯದಲ್ಲಿ ಶುರುವಾಗಿರುವ ಮೀಸಲಾತಿ ಹೋರಾಟಗಳ ಬಗ್ಗೆ ಬಿಜೆಪಿ ನಾಯಕ, ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮದೇ ಪಕ್ಷದ ನಾಯಕರ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರದಲ್ಲಿ ಕುರುಬರ ಎಸ್ಟಿ ಮೀಸಲಾತಿಗಾಗಿ ಆಗ್ರಹಿಸಿ ಬೃಹತ್ ಸಮಾವೇಶ ನಡೆಯಿತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ರೀನಿವಾಸ್ ಪ್ರಸಾದ್, "ಯಾರು ರೀ ಅದು ಈಶ್ವರಪ್ಪ, ವಿಶ್ವನಾಥ್? ಯಾವುದೋ ವೇದಿಕೆ ಮೇಲೆ ನಿಂತುಕೊಂಡು, ಜನ ಸೇರಿಸಿ ಮೀಸಲಾತಿ ಕೇಳುವುದಕ್ಕೆ ಆಗುತ್ತಾ?. ಬೀದಿಯಲ್ಲಿ ನಿಂತು ಮೀಸಲಾತಿ ಮಾತನಾಡುವುದಲ್ಲ" ಎಂದರು.
"ಮೀಸಲಾತಿ ಬಗ್ಗೆ ನಾನು ಮಾತನಾಡುವಾಗ ಸರಿಯಾಗಿ ಉತ್ತರ ಕೊಡಬೇಕು. ಸುಧೀರ್ಘವಾಗಿ ರಾಜಕಾರಣ ಮಾಡಿರುವವನು ನಾನು. ಮೀಸಲಾತಿ ಪ್ರಶ್ನೆ ಕೇಂದ್ರದ ಮುಂದೆ ಇರುತ್ತದೆ. ಎಸ್ಟಿಗೆ ಕೊಡಬೇಕೋ, ಬೇಡವೋ ಎನ್ನುವುದನ್ನು ಕೇಂದ್ರ ತೀರ್ಮಾನ ಮಾಡುತ್ತದೆ. ರಾಜ್ಯ ಸರ್ಕಾರ ಕೇವಲ ಶಿಫಾರಸ್ಸು ಮಾತ್ರ ಮಾಡಬೇಕು" ಎಂದು ಶ್ರೀನಿವಾಸ ಪ್ರಸಾದ್ ಹೇಳಿದರು.

"ರಾಜ್ಯ ಸರ್ಕಾರ ಶಿಫಾರಸು ಮಾಡಿದ ಬಳಿಕ ತಜ್ಞರ ಸಮಿತಿ ನೇಮಕ ಮಾಡಬೇಕು. ಇದನ್ನು ಮಾಡಿದವರು ಹಾವನೂರು ಒಬ್ಬರೇ. ನಾಯಕ ಸಮಾಜವನ್ನು ಎಸ್ಟಿಗೆ ಸೇರಿಸಲು ಕಾನೂನು ರೀತಿಯಲ್ಲಿ ಹೋರಾಟ ಮಾಡಿದರು. ಆದರೆ, ಇದೀಗ ಇವರು ಮಾಡುತ್ತಿರುವುದು ಸರಿಯಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದರು.
"ಮೈ ಮೇಲೆ ಬಟ್ಟೆ ಇಲ್ಲದವರು ಮೀಸಲಾತಿ ಕೇಳಲಿ. ಆನೆ ಮೇಯಿಸಿಕೊಂಡು ಕಾಡಲ್ಲಿ ಇರುವವರು ಕೇಳಿದರೆ ಅದನ್ನು ಒಪ್ಪೋಣ. ಆದರೆ, ದೊಡ್ಡ ದೊಡ್ಡ ಉದ್ಯಮಿಗಳು, ಉಪ ಮುಖ್ಯಮಂತ್ರಿಗಳಾಗಿದ್ದವರು. ರಿಯಲ್ ಎಸ್ಟೇಟ್ ಮಾಡುವವರಿಗೆ ಮೀಸಲಾಗಿ ಕೊಡಬೇಕಾ?" ಎಂದು ಶ್ರೀನಿವಾಸ ಪ್ರಸಾದ್ ಪ್ರಶ್ನಿಸಿದರು.
ಎಂಟಿಬಿ ನಾಗರಾಜ್ ವಿರುದ್ಧ ಗರಂ; ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶ್ರೀನಿವಾಸ ಪ್ರಸಾದ್, "ಆ ಎಂಟಿಬಿ 10 ಕೋಟಿ ಕೊಟ್ಟು ಹೆಲಿಕಾಪ್ಟರ್ ತಗೋಳೋಕೆ ಆಗುತ್ತೆ. ಇಂಥವರೆಲ್ಲ ಮಿಸಲಾತಿ ಕೇಳ್ತಾರೆ?. ಅದ್ಯಾರೋ 2A ಗೆ ಸೇರಿಸಿ ಅಂತಾರೆ, ಕುಳಿತಿರುವ ಜಾಗದಲ್ಲಿ 2Aಗೆ ಸೇರಿಸಲು ಆಗುತ್ತಾ? ಇವೆಲ್ಲದರ ಬಗ್ಗೆ ಸರ್ಕಾರ ಸ್ಪಷ್ಟವಾದ ಹೇಳಿಕೆ ಕೊಡಬೇಕು" ಎಂದು ಒತ್ತಾಯಿಸಿದರು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications