ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ; ಮಾಧ್ಯಮದವರಿಗೆ ಪ್ರವೇಶ ನಿರಾಕರಣೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 13: ಚಾಮುಂಡಿ ಬೆಟ್ಟದಲ್ಲಿ ಇಂದು ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಿತ್ರೀಕರಿಸಲು ಹೋದ ಮಾಧ್ಯಮದವರಿಗೆ ಪ್ರವೇಶ ನಿರಾಕರಿಸಿದ ಘಟನೆ ನಡೆದಿದೆ.

Recommended Video

Steve Jobs , ಹೆತ್ತವರಿಗೆ ಬೇಡವಾಗಿದ್ದ ಕೂಸು , ಜಗತ್ತನ್ನೇ ಗೆದ್ದ ಕಥೆ | Oneindia Kannada

ಬೆಟ್ಟದಲ್ಲಿ ಕಳೆದ ಮೂರು ಆಷಾಢ ಶುಕ್ರವಾರದ ಪೂಜೆ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು. ಕಳೆದ ಬಾರಿ ಸಚಿವ ಈಶ್ವರಪ್ಪ ಹಾಗೂ ಸಂಸದ ಪ್ರತಾಪಸಿಂಹ ಆಗಮಿಸಿದ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಂಡಿರಲಿಲ್ಲ. ಈ ಬಗ್ಗೆ ಅಂದು ಮಾಧ್ಯಮಗಳು ವರದಿ ಮಾಡಿದ ಹಿನ್ನೆಲೆಯಲ್ಲಿ ಈ ಬಾರಿ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ ಎನ್ನಲಾಗುತ್ತಿದೆ. ಮುಂಜಾನೆ ಆರು ಗಂಟೆಯಿಂದಲೂ ಮಾಧ್ಯಮದವರನ್ನು ತಾವರಕಟ್ಟೆ ಬಳಿಯೇ ತಡೆದಿದ್ದಾರೆ.

Denied Entry For Media Persons In Chamundi Hills At Mysuru

 ಆಷಾಢ ಶುಕ್ರವಾರದಲ್ಲಿ ಭಕ್ತರಿಲ್ಲದೆ ಬಣಗುಡುತ್ತಿದೆ ಚಾಮುಂಡಿ ಬೆಟ್ಟ ಆಷಾಢ ಶುಕ್ರವಾರದಲ್ಲಿ ಭಕ್ತರಿಲ್ಲದೆ ಬಣಗುಡುತ್ತಿದೆ ಚಾಮುಂಡಿ ಬೆಟ್ಟ

ಈ ವೇಳೆ ಸ್ಥಳಕ್ಕೆ ಆಗಮಿಸಿದ ಸಂಸದ ಪ್ರತಾಪಸಿಂಹ ಪತ್ರಕರ್ತರೊಂದಿಗೆ, ಕಳೆದ ಬಾರಿ ಮಾಧ್ಯಮದವರು ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ತೋರಿಸಿದ್ದೀರಿ. ಅಲ್ಲದೆ ಮಾಧ್ಯಮದವರಿಗೆ ಪ್ರವೇಶ ನೀಡುವ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡುವುದಾಗಿ ಹೇಳಿ ಅಲ್ಲಿಂದ ತೆರಳಿದ್ದಾರೆ. ಮಾಧ್ಯಮಗಳಲ್ಲಿ ವರದಿ ಬಿತ್ತರವಾದ ಹಿನ್ನೆಲೆಯಲ್ಲಿ ಇಂದು ಮಾಧ್ಯಮದವರಿಗೆ ಪ್ರವೇಶ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

English summary
Media persons who went to shoot Chamundeshwari Vardhanti Mahotsav in chamundi hills were denied entry
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X