ಅರ್ಕಾವತಿ ಡಿನೋಟಿಫಿಕೇಷನ್ ಕೇಸ್ ಹೊರ ಬಂದರೆ ಬಂಡವಾಳ ಬಯಲು: ಎಚ್.ವಿಶ್ವನಾಥ್ ಟಾಂಗ್
ಮೈಸೂರು, ಡಿಸೆಂಬರ್ 25: ಅರ್ಕಾವತಿ ಡಿನೋಟಿಫಿಕೇಷನ್ ವಿಚಾರ ಹೊರಗೆ ಬಂದರೆ ವಿಪಕ್ಷ ನಾಯಕರು ಎಲ್ಲಿಗೆ ಹೋಗುತ್ತಾರೆ ಗೊತ್ತಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿರುಗೇಟು ನೀಡಿದರು.
ಗುರುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಡಿನೋಟಿಫಿಕೇಶನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿದ ವಿಪಕ್ಷಗಳ ನಾಯಕರಿಗೆ ಅರ್ಕಾವತಿ ಡಿನೋಟಿಫಿಕೇಷನ್ ವಿಚಾರ ತೆಗೆದು ಟಾಂಗ್ ಕೊಟ್ಟರು.
ರಾಜಕೀಯ ಎಂದ ಮೇಲೆ ಆರೋಪ ಪ್ರತ್ಯಾರೋಪಗಳು ಸಹಜ. ಆದರೆ ವಸ್ತುಸ್ಥಿತಿಯೇ ಬೇರೆ ಇರುತ್ತದೆ. ರಾಜಕೀಯ ರಾಡಿಯ ಹಿಂದೆ ಮಾತನಾಡಬಾರದು. ಇವರು ಜೈಲಿಗೆ ಹೋಗಿದ್ದರು, ಅವರು ಜೈಲಿಗೆ ಹೋಗಿದ್ದರು ಅನ್ನುವ ಮಾತುಗಳೆಲ್ಲಾ ದೊಡ್ಡವರ ಬಾಯಲ್ಲಿ ಬರಬಾರದು ಎಂದು ಎಚ್.ವಿಶ್ವನಾಥ್ ಹೇಳಿದರು.

ಜವಾಬ್ದಾರಿಯುತ ರಾಜಕೀಯ ನಾಯಕರು ಶಾಂತಿಯ ವಾತಾವರಣ ನಿರ್ಮಾಣ ಮಾಡಬೇಕು. ಮಾನಸಿಕ ನೆಮ್ಮದಿ ಕದಡುವ ಮಾತುಗಳು ಯಾರಿಂದಲೂ ಬರಬಾರದು ಎಂದು ಸಲಹೆ ನೀಡಿದರು.
ಡಿನೋಟಿಫಿಕೇಶನ್ ವಿಚಾರವಾಗಿ ಸಿಎಂ ಯಡಿಯೂರಪ್ಪನವರು ಜೈಲಿಗೆ ಹೋಗಬೇಕು ಎನ್ನುವುದಾದರೆ, ನೀವು ಮಾಡಿರುವುದನ್ನೂ ಬಹಿರಂಗಪಡಿಸಿ. ಅರ್ಕಾವತಿ ಡಿನೋಟಿಫಿಕೇಶನ್ ವಿಚಾರ ಹೊರಗೆ ಬಂದರೆ ನೀವೂ ಎಲ್ಲಿಗೆ ಹೋಗುತ್ತೀರಿ ಅಂತ ಗೊತ್ತಾಗುತ್ತದೆ ಎಂದು ಮಾಜಿ ಸಿಎಂ ಹಾಗೂ ವಿರೋಧ ಪಕ್ಷಗಳಿಗೆ ಎಚ್.ವಿಶ್ವನಾಥ್ ತಿರುಗೇಟು ನೀಡಿದರಲ್ಲದೆ, ರಾಜಕೀಯದಲ್ಲಿ ಕೆಸರು ಎರಚಬಾರದು ಎಂದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications