Muda Case: ನಾಲ್ಕು ತಿಂಗಳ ಬಳಿಕ ಮುಡಾ ಕಚೇರಿಗೆ ನ್ಯಾ. ದೇಸಾಯಿ ಭೇಟಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸರ್ಕಾರ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಆಯೋಗದ ಏಕ ಸದಸ್ಯ ನಿವೃತ್ತ ನ್ಯಾಯಮೂರ್ತಿ ದೇಸಾಯಿ ನಾಲ್ಕು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಮುಡಾ ಕಚೇರಿಗೆ ಭೇಟಿ ನೀಡಿದ್ದಾರೆ. ನಾಲ್ಕು ತಿಂಗಳ ಬಳಿಕ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಭೇಟಿ ನೀಡಿರುವುದು ಪ್ರಕರಣದ ಬಗ್ಗೆ ಇದ್ದ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಮುಡಾ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸರ್ಕಾರ ಆಯೋಗ ರಚಿಸಿದ ಬಳಿಕ, ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬಳಿಕ, ಹೈಕೋರ್ಟ್ ನಿರ್ದೇಶನದಂತೆ ಇದೀಗ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸುತ್ತಿದೆ. ಈಗಾಗಲೇ ಪ್ರಕರಣೆ ಎ1 ಆರೋಪಿ ಸಿಎಂ ಸಿದ್ದರಾಮಯ್ಯ ಎ2 ಪಾರ್ವತಿ ಸೇರಿದಂತೆ ಎಲ್ಲರನ್ನೂ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಈ ನಡುವೆ ಆರ್ ಟಿಐ ಕಾರ್ಯಕರ್ತರ ದೂರಿನ ಅನ್ವಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೂಡ ಪ್ರಕರಣವನ್ನು ತನಿಖೆ ಮಾಡುತ್ತಿದ್ದಾರೆ. ಆದರೆ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಆಯೋಗ ರಚನೆಗೊಂಡ ನಾಲ್ಕು ತಿಂಗಳುಗಳ ಬಳಿಕ ಆಯೋಗದ ಮುಖ್ಯಸ್ಥರು ಮುಡಾ ಕಚೇರಿಗೆ ಆಗಮಿಸಿ ಪರಿಶೀಲನೆ ನಡೆಸಿರುವುದು ಪ್ರಕರಣದ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.
ಅಧಿಕಾರಿಗಳ ಜೊತೆ ಮಾತುಕತೆ
ಮುಡಾ ಕಚೇರಿಗೆ ಆಗಮಿಸಿದ ನಿವೃತ್ತ ನ್ಯಾಯಮೂರ್ತಿ ದೇಸಾಯಿ, ನಡೆದಿರುವ ಅಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಲ್ಲದೆ, ಕಡತಗಳ ಪರಿಶೀಲನೆ ನಡೆಸಿದರು. ಸರ್ಕಾರದಿಂದ ನೇಮಕವಾದ ಬಳಿಕ ಪಿ.ಎನ್.ದೇಸಾಯಿ ಆಯೋಗ ಬೆಂಗಳೂರಿನಲ್ಲಿ ಕಚೇರಿ ತೆರೆದು, ಕೆಲವು ಮುಡಾ ದಾಖಲಾತಿಗಳ ನಕಲು ಪ್ರತಿಯನ್ನು ಬೆಂಗಳೂರಿಗೆ ತರಿಸಿಕೊಂಡು ಪರಿಶೀಲನೆ ನಡೆಸಿದ್ದರು. ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ತನಿಖೆ ನಡೆಸುತ್ತಿತ್ತು.
ರಾಜ್ಯ ಸರ್ಕಾರ ಮುಡಾ ಅಕ್ರಮದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಆದೇಶ ಹೊರಡಿಸಿದ್ದು, 6 ತಿಂಗಳ ಒಳಗಾಗಿ ವರದಿ ನೀಡುವಂತೆ ಆಯೋಗಕ್ಕೆ ಸೂಚನೆ ನೀಡಲಾಗಿದೆ.
ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ ಆಯೋಗ ವಿಚಾರಣೆ ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸುವಂತೆ ರಾಜ್ಯ ಸರಕಾರ ಸೂಚನೆ ನೀಡಿತ್ತು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications