ಸಾಹಿತ್ಯ ಪರಿಷತ್ತಿಗೆ ದೇವನೂರ ಮಹಾದೇವ ಸಲಹೆ ಏನು?
ಮೈಸೂರು, ಡಿ. 19 : ಮಾತೃಭಾಷೆಯೇ ಶಿಕ್ಷಣ ಮಾಧ್ಯಮವಾಗಬೇಕು ಎಂಬ ಹಕ್ಕೊತ್ತಾಯ ಮುಂದಿಟ್ಟುಕೊಂಡು 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಲು ನಿರಾಕರಿಸಿರುವ ಸಾಹಿತಿ ದೇವನೂರ ಮಹಾದೇವ ಅವರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರಿಗೆ ಪತ್ರ ಬರೆದಿದ್ದಾರೆ.
ಭಾಷಾಮಾಧ್ಯಮದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನಲೆಯಲ್ಲಿ ಮಾತೃಭಾಷೆಯ ಕತ್ತು ಹಿಸುಕಿದಂತಾಗಿರುವ ಸನ್ನಿವೇಶದಲ್ಲಿ ಯಾಂತ್ರಿಕ ಸಾಹಿತ್ಯ ಸಮ್ಮೇಳನದಲ್ಲಿ ತಾವು ಭಾಗವಹಿಸುವುದಿಲ್ಲ ಎಂದು ಪತ್ರದಲ್ಲಿ ದೇವನೂರು ಮಹಾದೇವ ಅವರು ಸ್ಪಷ್ಟಪಡಿಸಿದ್ದಾರೆ. [ಕನ್ನಡ ಮಾಧ್ಯಮ ಕಡ್ಡಾಯವಲ್ಲ ಎಂದ ಸುಪ್ರೀಂಕೋರ್ಟ್]

ಪುಂಡಲೀಕ ಹಾಲಂಬಿ ಅವರಿಗೆ ಬರೆದಿರುವ ಪತ್ರದಲ್ಲಿ ಮಹಾದೇವ ಅವರು, ಇಂದಿನ ಭಾಷಾ ಸನ್ನಿವೇಶದಲ್ಲಿ ಸಾಹಿತ್ಯ ಪರಿಷತ್ತು ಪೊರೆ ಕಳಚಿಕೊಂಡು ಎಲ್ಲರನ್ನೂ ಒಡಗೂಡಿ ಹೋರಾಡುವ ಅಗತ್ಯವಿದೆ. ಪರಿಷತ್ ಪೊರೆ ಕಳಚಿ ನಿಂತರೆ ನಾನು ಜೊತೆಗೂಡುತ್ತೇನೆ ಎಂದೂ ಹೇಳಿದ್ದಾರೆ. [ಏನಿದು ಮಾತೃಭಾಷೆ ವಿವಾದ]
ಪತ್ರದ ಸಾರಾಂಶ : ಭಾಷಾಮಾಧ್ಯಮದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನಲೆಯಲ್ಲಿ ಮಾತೃಭಾಷೆಯ ಕತ್ತು ಹಿಸುಕಿದಂತಾಗಿರುವ ಸನ್ನಿವೇಶದಲ್ಲಿ ಯಾಂತ್ರಿಕ ಸಾಹಿತ್ಯ ಸಮ್ಮೇಳನದಲ್ಲಿ ತಾವು ಭಾಗವಹಿಸುವುದಿಲ್ಲ. [ಶ್ರವಣಬೆಳಗೊಳದಲ್ಲಿ 81ನೇ ಕನ್ನಡ ಸಾಹಿತ್ಯ ಸಮ್ಮೇಳನ]
ಭಾರತದ ಸಂವಿಧಾನವು ಅಂಗೀಕರಿಸಲ್ಪಟ್ಟ 22 ದೇಶೀ ಭಾಷೆಗಳು ಹಾಗೂ ದೇಶದಾದ್ಯಂತ ಇರುವ ಅನೇಕಾನೇಕ ಅಲ್ಪಸಂಖ್ಯಾತ ಭಾಷೆಗಳು ಇತ್ತೀಚಿನ ಸುಪ್ರಿಂಕೋರ್ಟ್ ತೀರ್ಪಿನಿಂದಾಗಿ ಕಾಲು ಕತ್ತರಿಸಿಕೊಂಡು ಚಲನೆ ಇಲ್ಲದ ಸ್ಥಿತಿಗೆ ತಲುಪಿರುವ ಈ ಸಂದರ್ಭದಲ್ಲಿ ಏನು ಹೇಳುವುದು?.
ಈಗ ಪಾರ್ಲಿಮೆಂಟ್ಗೇ ಚಾಟಿ ಬೀಸಬೇಕಾಗಿದೆ. ಜನಾಂದೋಲನ, ರಾಜಕೀಯದ ಮೇಲೆ ಒತ್ತಡ ವ್ಯಾಪಕವಾಗಬೇಕಾಗಿದೆ. ಸಾಹಿತ್ಯ ಪರಿಷತ್ತಿನಿಂದಲೂ ಈ ನಡೆಯನ್ನೇ ನಿರೀಕ್ಷಿಸುತ್ತೇನೆ. ಪರಿಷತ್ತಿಗೆ ನೂರು ವರ್ಷಗಳ ಹಿರಿಮೆ ಜತೆ ನೂರು ವರ್ಷದ ಜಡ್ಡೂ ಇರಬಹುದು. ಆದರೆ ಜೀವವಿದೆ. ಪೊರೆ ಕಳಚಬೇಕಾಗಿದೆ ಅಷ್ಟೇ.
ಸಾಹಿತ್ಯ ಪರಿಷತ್ ಹೊಸ ಹುಟ್ಟು ಪಡೆದರೆ ಅದಕ್ಕೆ ಪೂರಕ ವಾತಾವರಣ ಈಗ ಕರ್ನಾಟಕ ರಾಜ್ಯದಲ್ಲಿ ಇದೆ. ಯಾಕೆಂದರೆ ನನ್ನಷ್ಟೇ ಅಥವಾ ನಿಮ್ಮಷ್ಟೆ, ಮಾತೃಭಾಷೆ ಪ್ರಾಥಮಿಕ ನೆರೆಹೊರೆ ಸಮಾನಶಿಕ್ಷಣದ ಕಳಕಳಿ ಇರುವ ಮುಖ್ಯಮಂತ್ರಿಗಳನ್ನು ಈ ರಾಜ್ಯ ಈಗ ಪಡೆದಿದೆ. ಬಹುಶಃ ಹಿಂದೆ ಇಂಥ ಸಂದರ್ಭ ಇರಲಿಲ್ಲ ಎನ್ನಬಹುದು.
ಶ್ರೀ ಸಿದ್ದರಾಮಯ್ಯ, ಶ್ರೀ ನಿತೀಶ್ಕುಮಾರ್ರಂಥ ಮುಖ್ಯಮಂತ್ರಿಗಳು ಮುಖವಾಡ ಇಲ್ಲದವರು, ಹೃತ್ಪೂರ್ವಕತೆ ಇರುವವರು ಜೊತೆಗೆ ಧೈರ್ಯವಂತರೂ ಕೂಡ. ಹಾಗಾಗಿ ಈ ರಾಜಕಾರಣದೊಳಗೂ ಇಂಥವರಿಂದ ಒಂದಿಷ್ಟು ನಿರೀಕ್ಷಿಸಬಹುದು.
ತಳಸಮುದಾಯದ ಮಕ್ಕಳು ಶಿಕ್ಷಣದಿಂದಲೇ ಉದುರಿಹೋಗುತ್ತಿರುವುದೂ ಗೊತ್ತು. ಈ ಸಂದರ್ಭದಲ್ಲಿ ಈಗ ಸಾಹಿತ್ಯಪರಿಷತ್ ಧೈರ್ಯ ಮಾಡಿ ಹೊಸ ಹುಟ್ಟು ಪಡೆದು ಸರ್ಕಾರಕ್ಕೆ ಸವಾಲೆಸೆದರೆ ಒಂದಿಷ್ಟು ಬದಲಾವಣೆ ಆಗಲೂಬಹುದು. ಹೊಸ ಸಾಧ್ಯತೆಗಳು ಗೋಚರಿಸಲೂಬಹುದು.
-
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications