ಒಕ್ಕೂಟ ವ್ಯವಸ್ಥೆಯ ಸೂತ್ರ ಕಿತ್ತಿದ್ದಾರೆ; ದೇವನೂರು ಮಹಾದೇವ
ಮೈಸೂರು, ಡಿಸೆಂಬರ್ 08: ಕೃಷಿ ವಲಯವು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಆದರೆ ರಾಜ್ಯಗಳನ್ನು ಕೇಂದ್ರ ಸರ್ಕಾರ (ಒಕ್ಕೂಟ ಸರ್ಕಾರ) ಗಣನೆಗೇ ತೆಗೆದುಕೊಳ್ಳದೆ ಕಾಲು ಕಸ ಮಾಡಿಕೊಂಡಿದೆ. ಇದು ಕೆಟ್ಟ ಬೆಳವಣಿಗೆ ಎಂದು ಸಾಹಿತಿ ದೇವನೂರ ಮಹಾದೇವ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಹಮ್ಮಿಕೊಂಡಿದ್ದ ಭಾರತ್ ಬಂದ್ ಗೆ ಬೆಂಬಲ ನೀಡಲು ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಡಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರವು ಜಿಎಸ್ ಟಿ ತಂದು ರಾಜ್ಯಗಳ ಜುಟ್ಟನ್ನು ತನ್ನ ಹಿಡಿತದೊಳಗೆ ಇರಿಸಿಕೊಂಡಿದೆ. ಇದಲ್ಲದೆ ಕೃಷಿ ರಾಜ್ಯ ವ್ಯಾಪ್ತಿಯಲ್ಲಿ ಇದ್ದರೂ ಏಕೆ ಕಾನೂನು ತರುತ್ತಿದ್ದೀರ ಎಂದು ಯಾವುದೇ ರಾಜ್ಯಗಳು ಕೇಂದ್ರವನ್ನು ಪ್ರಶ್ನಿಸುತ್ತಿಲ್ಲ. ರಾಜ್ಯಗಳು ನರ ಸತ್ತಂತಿವೆ, ಭಯದಲ್ಲಿವೆ. ಭಯದ ವಾತಾವರಣ ಇಡೀ ದೇಶದಲ್ಲಿ ಸೃಷ್ಟಿಯಾಗಿದೆ ಎಂದು ಟೀಕಿಸಿದರು.
ಸಂವಿಧಾನದ ಪ್ರಕಾರ ಕೃಷಿ ರಾಜ್ಯ ವ್ಯಾಪ್ತಿಗೆ ಬರುತ್ತದೆ. ಹಾಗಾದರೆ, ಸಂವಿಧಾನವನ್ನೇ ಕಾಲು ಕಸ ಮಾಡಿಕೊಂಡಂತಾಯಿತು. ಸಂವಿಧಾನ, ಒಕ್ಕೂಟ ಸ್ವರೂಪ, ರಾಜ್ಯ ಎಲ್ಲದರ ಸೂತ್ರ ಕಿತ್ತುಹಾಕಲಾಗಿದೆ. ಇದು ಅತ್ಯಂತ ಕೆಟ್ಟ ಬೆಳವಣಿಗೆ ಬೇಸರಿಸಿದರು.

ಪ್ರತಿಭಟನೆಗೆ ಬರುವವರನ್ನು ದೇಶದ್ರೋಹಿಗಳು, ಖಲಿಸ್ತಾನಿಗಳು ಎನ್ನುತ್ತಿದ್ದಾರೆ. ಈ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ, ದಯವಿಟ್ಟು ಮನುಷ್ಯರಾಗಿ ನಿಮ್ಮ ಗುಣಗಳನ್ನು ಬದಲಾಯಿಸಿಕೊಳ್ಳಿ ಎಂದು ಮನವಿ ಮಾಡಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications