ಕುಂಭಮೇಳದಲ್ಲಿ ಭಕ್ತರಿಂದ ಪುಣ್ಯಸ್ನಾನ: ಯಾಗಶಾಲೆ ಪ್ರಧಾನ ಆಕರ್ಷಣೆ
ಮೈಸೂರು, ಫೆಬ್ರವರಿ 19:11ನೇ ತಿರುಮಕೂಡಲು ನರಸೀಪುರ ಕುಂಭಮೇಳ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗ್ಗೆ ನದಿ ಪಾತ್ರದಲ್ಲಿ ಚಂಡಿಕಾಹೋಮ ಪೂರ್ಣಾಹುತಿ ನಡೆಯಿತು.
ಕುಂಭಮೇಳ 2019: ವೈಭವದ ಗಂಗಾರತಿಯ, ಆಕರ್ಷಕ ಚಿತ್ರಗಳು
ಕುಂಭಮೇಳದಲ್ಲಿ ಮಿಂದರೆ ಪಾಪಕರ್ಮಗಳು ಕಳೆಯುತ್ತವೆ ಎಂಬ ನಂಬಿಕೆ ಇದೆ. ಇದಕ್ಕಾಗಿಯೇ ಉತ್ತರ ಭಾರತದ ಪ್ರಯಾಗ ರಾಜ್ನಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿ ಗಂಗಾ ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಸ್ಥಳದಲ್ಲಿ ಪವಿತ್ರ ಸ್ನಾನ ಮಾಡುತ್ತಾರೆ.
ಇದೇ ಬಗೆಯಲ್ಲಿ ಪವಿತ್ರ ಸ್ನಾನ ಮಾಡಲೆಂದು ಜಿಲ್ಲಾಡಳಿತ ಇಲ್ಲಿ ವ್ಯವಸ್ಥೆ ಮಾಡಿತ್ತು. ಆದರೆ, ಮಿಂದೇಳುವವರ ಸಂಖ್ಯೆ ಕಡಿಮೆ ಇತ್ತು. ಬಂದಿದ್ದ ಜನರು ನೀರಿನಲ್ಲಿ ಇರಿಸಿದ್ದ ಮರಳಿನ ಮೂಟೆಯ ಸೇತುವೆ ಮೇಲೆ ಕುತೂಹಲದಿಂದ ನಡೆಯುತ್ತಾ ಕಾವೇರಿ, ಕಪಿಲಾ ಹಾಗೂ ಸ್ಫಟಿಕ ನದಿಗಳ ಸಂಗಮ ಕ್ಷೇತ್ರದಲ್ಲಿನ ನಡುಗಡ್ಡೆ ತಲುಪಿ ರೋಮಾಂಚನಗೊಂಡದ್ದು ಬಿಟ್ಟರೆ, ಹೆಚ್ಚಿನವರು ಪವಿತ್ರ ಸ್ನಾನದಲ್ಲಿ ಭಾಗಿಯಾಗಲಿಲ್ಲ.

ಬಹಳಷ್ಟು ಮಂದಿಗೆ ನೀರಿನೊಳಗೆ ನಿರ್ಮಿಸಲಾಗಿದ್ದ ಯಾಗಶಾಲೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಗಳೇ ಪ್ರಧಾನ ಆಕರ್ಷಣೆಯಾಗಿತ್ತು. ನೀರಿನಲ್ಲಿ ಮೀಯುವವರಲ್ಲಿ ಭಕ್ತರಿಗಿಂತ ಹೆಚ್ಚಾಗಿ ಯುವಕರೇ ಇದ್ದರು. ಬಿಸಿಲಿನ ತಾಪಕ್ಕೆ ಕೆಲವರು ಮುಳುಗೆದ್ದರು. ಬಹುಪಾಲು ಸ್ಥಳೀಯರಲ್ಲಿ ಕುಂಭಮೇಳದ ಮಹತ್ವದ ಅರಿವಿನ ಕೊರತೆ ಇತ್ತು.
ಸಂಗಮ ಕ್ಷೇತ್ರಕ್ಕೆ ಹೋಗುವ ರಸ್ತೆ ತೀರಾ ಚಿಕ್ಕದಾಗಿದ್ದು, ಸಂಜೆಯ ನಂತರ ಸಂಚಾರ ದಟ್ಟಣೆ ಉಂಟಾಯಿತು. ಹೀಗಾಗಿ, ಇಡೀ ಪ್ರದೇಶದಲ್ಲಿ ಅಕ್ಷರಶಃ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಪಟಾಕಿ ಸಿಡಿತದ ನಂತರ ಭಾರೀ ಪ್ರಮಾಣದಲ್ಲಿ ಪಟ್ಟಣದಲ್ಲಿ ಜನರು ಸಂಗಮ ಕ್ಷೇತ್ರದತ್ತ ಬಂದಿದ್ದು, ದಟ್ಟಣೆಗೆ ಕಾರಣವಾಯಿತು.

ಅಗ್ನಿ ಶಾಮಕದಳದಿಂದ ನದಿಯಲ್ಲಿ ಭಕ್ತರ ರಕ್ಷಣೆಗೆ ವಿಶೇಷ ತಂಡಗಳನ್ನು ನೇಮಿಸಲಾಗಿದೆ. ಮಂಡ್ಯ ,ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಗ್ನಿ ಶಾಮಕ ಸಿಬ್ಬಂದಿ ನೇಮಕ ಮಾಡಲಾಗಿದೆ. ಸಾರ್ವಜನಿಕರ ರಕ್ಷಣೆಗಾಗಿ ಸುಮಾರು 125 ಸಿಬ್ಬಂದಿ, ಏಳು-ನಾಲ್ಕು ಮೋಟಾರ್ ಬೋಟ್, ಒಟ್ಟು ಏಳು ವಾಹನ, ಒಂದು ಟೋಹಿಂಗ್ ವೇಹಿಕಲ್, 12 ಅಡ್ವನ್ಸ್ ಫೋಮ್ ಸಿಲಿಂಡರ್, 100 ಲೈಫ್ ಜಾಕೆಟ್ ಅನ್ನು ಭದ್ರತೆಗಾಗಿ ಒದಗಿಸಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications