ಮಳೆಗಾಗಿ ಕುಂತಮ್ಮನ ಬೆಟ್ಟ ಹತ್ತಿದ ಭಕ್ತರು...
ಮೈಸೂರು, ಜುಲೈ 11: ಆಷಾಢ ಬಂದರೂ ಬಹಳಷ್ಟು ಕಡೆಗಳಲ್ಲಿ ಮಳೆ ಬಾರದಿರುವುದು ರೈತಾಪಿ ಜನರನ್ನು ಆತಂಕಕ್ಕೆ ತಳ್ಳಿದೆ. ಮುಂಗಾರು ಮಳೆಯನ್ನು ನಂಬಿ ಕೃಷಿ ಮಾಡುವ ಕೃಷಿಕರು ಒಂದೆಡೆಯಾದರೆ, ಮತ್ತೊಂದೆಡೆ ಮಳೆ ಬಾರದೆ ಕೆರೆಕಟ್ಟೆಗಳು ತುಂಬದಿದ್ದರೆ ಜನ ಜಾನುವಾರುಗಳ ಗತಿಯೇನು ಎಂಬ ಭಯವೂ ಕಾಡುತ್ತಿದೆ.
ಇದಕ್ಕಾಗಿ ಹಲವು ಗ್ರಾಮಗಳಲ್ಲಿ ಇವತ್ತಿಗೂ ಮಳೆಗಾಗಿ ಪೂಜೆ, ಪುನಸ್ಕಾರ ಮಾಡುವುದನ್ನು ನೋಡಬಹುದು. ಅದರಂತೆ ಹುಣಸೂರು ತಾಲ್ಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದ ಮಹಿಳೆಯರು ಹಾಗೂ ಪುರುಷರು ಮಳೆಗಾಗಿ ಕುಂತಮ್ಮ ದೇವರನ್ನು ಪ್ರಾರ್ಥಿಸುತ್ತಾ ಬರಿಗಾಲಿನಲ್ಲಿ ಕುಂತಿಬೆಟ್ಟವನ್ನೇರಿ ಮಳೆಗಾಗಿ ಪೂಜೆ ಸಲ್ಲಿಸಿ, ನೈವೇದ್ಯ ಮಾಡಿ ದೇವರಿಗೆ ಅರ್ಪಿಸಿದ್ದಾರೆ.
ಕುಂತಿಬೆಟ್ಟವು ಹಿರೀಕ್ಯಾತನಹಳ್ಳಿ ಗ್ರಾಮದಿಂದ ಸುಮಾರು 2 ಕಿಲೋ ಮೀಟರ್ ದೂರದಲ್ಲಿದೆ. ಇಲ್ಲಿ ನೆಲೆನಿಂತಿರುವ ಕುಂತಮ್ಮ ದೇವಿ ಆರಾಧ್ಯ ದೈವವಾಗಿದ್ದು, ಮಳೆಗಾಗಿ ವರ್ಷಕ್ಕೊಮ್ಮೆ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ಜನರು ನಡೆಸಿಕೊಂಡು ಬಂದಿದ್ದಾರೆ.

ಇಲ್ಲಿ ಕುಂತಮ್ಮ ದೇವಿಯನ್ನು ಪ್ರಾರ್ಥಿಸಿ ಪೂಜೆ ಸಲ್ಲಿಸಿದರೆ ಮಳೆಯಾಗುತ್ತದೆ ಎಂಬ ಪ್ರತೀತಿಯಿದೆ. ಹೀಗಾಗಿ ಪ್ರತಿವರ್ಷವೂ ಸುತ್ತಮುತ್ತಲಿನ ಗ್ರಾಮಗಳ ಜನ ಇಲ್ಲಿಗೆ ಬಂದು ಮಳೆ ಬೆಳೆಯಾಗಿ ಬೇಡಿ ನಾಡು ಸಮೃದ್ಧಿಯಾಗುವಂತೆ ದೇವರಲ್ಲಿ ಪ್ರಾರ್ಥಿಸಿಕೊಂಡು ಹೋಗುತ್ತಾರೆ.
ಈ ಬಾರಿ ಮುಂಗಾರು ಪೂರ್ವ ಮಳೆಯೂ ಸರಿಯಾಗಿ ಸುರಿದಿಲ್ಲ. ಮುಂಗಾರು ಕೂಡ ದುರ್ಬಲವಾಗಿದೆ. ಇದರಿಂದ ಕೃಷಿಯನ್ನು ನಂಬಿ ಬದುಕುವ ರೈತರ ಸ್ಥಿತಿ ಡೋಲಾಯಮಾನವಾಗಿದೆ. ಕೆರೆಕಟ್ಟೆಗಳಲ್ಲಿ ನೀರಿಲ್ಲ. ಜನಜಾನುವಾರು, ಪ್ರಾಣಿಪಕ್ಷಿಗಳು ನೀರಿಲ್ಲದೆ ಪರದಾಡುವಂತಾಗಿದೆ. ಆದ್ದರಿಂದ ಮಳೆ ಸುರಿಸುವಂತೆ ಪ್ರಾರ್ಥಿಸಿ ಕುಂತಮ್ಮ ದೇವಿಗೆ ಬೆಟ್ಟದಲ್ಲೇ ನೈವೇದ್ಯ ತಯಾರಿಸಿ ಸಲ್ಲಿಸಿದರು. ಹಲಸಿನಹಣ್ಣು ಬಾಳೆಹಣ್ಣು ತುಪ್ಪ ನೈವೇದ್ಯ, ಬೆಲ್ಲದ ಅನ್ನ, ಪಾಯಸದ ಸಿಹಿ ಊಟದ ಅಡುಗೆ ಮಾಡಿ ದೇವರಿಗೆ ಅರ್ಪಿಸಿ ಎಲ್ಲರೂ ಒಂದೆಡೆ ಕುಳಿತು ಬಾಳೆಎಲೆಯಲ್ಲಿ ಊಟ ಮಾಡಿದರು.
ಪೂಜೆ ನಡೆಯುವ ವೇಳೆ ಕೊಂಬು ಕಹಳೆ, ಮಂಗಳವಾದ್ಯ, ತಮಟೆ ವಾದ್ಯಗಳೊಂದಿಗೆ ಯುವಕರು ಕುಣಿದು ಕುಪ್ಪಳಿಸಿ ದೇವರ ದರ್ಶನ ಪಡೆಯುತ್ತಾರೆ. ಪೂಜೆ ಮಾಡಿದ ದಿನವೇ ಮಳೆ ಸುರಿಯುತ್ತದೆ ಎಂಬ ಪ್ರತೀತಿಯಿದೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications