ಧರಂ ಸಿಂಗ್ ನಿಧನಕ್ಕೆ ಮೈಸೂರಿನ ಹಲವೆಡೆ ಶ್ರದ್ಧಾಂಜಲಿ
ಮೈಸೂರು, ಜುಲೈ 27: ಮಾಜಿ ಮುಖ್ಯಮಂತ್ರಿ ಧರಂಸಿಂಗ್ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಚಾಮುಂಡಿಪುರಂ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭ ಮಾಜಿ ನಗರಸಭೆ ಸದಸ್ಯರಾದ ಎಂ.ಕೆ.ಅಶೋಕ್ ಮಾತನಾಡಿ, "ಕಾಂಗ್ರೆಸ್ ನ ಹಿರಿಯ ನೇತಾರ ಧರಂಸಿಂಗ್ ಅವರು ನಮ್ಮನ್ನಗಲಿದ್ದು ಆಘಾತವನ್ನುಂಟು ಮಾಡಿದೆ. ಅವರ ಕುಟುಂಬದವರಿಗೆ ಈ ದುಖಃವನ್ನು ಭರಿಸುವ ಶಕ್ತಿಯನ್ನು ನೀಡಲಿ," ಎಂದು ಹೇಳಿದರು.

"ಸಜ್ಜನಿಕೆಗೆ ಹೆಸರಾಗಿದ್ದ ಎನ್.ಧರಂಸಿಂಗ್ ಅವರು ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾಗಿದ್ದರು. ಸುಮಾರು ಐದು ದಶಕದ ರಾಜಕೀಯ ಜೀವನದಲ್ಲಿ ಅಜಾತ ಶತ್ರುವಾಗಿದ್ದರು. ರಾಜಕೀಯ ಜೀವನದುದ್ದಕ್ಕೂ ಧರಂಸಿಂಗ್ ಅವರು ಪ್ರತಿನಿಧಿಸಿದ ಮೌಲ್ಯಗಳು ಅನುಕರಣೀಯ. ಅಪ್ಪಟ ಜನಾನುರಾಗಿಯಾಗಿದ್ದ ಅವರಲ್ಲಿ ಎಲ್ಲ ಧರ್ಮ, ಜಾತಿ, ಜನಾಂಗದವರೂ ಅಪ್ರತಿಮ ನಾಯಕನನ್ನು ಕಂಡಿದ್ದರು," ಎಂದು ಅಶೋಕ್ ಹೇಳಿದರು.
'ಅವರ ಅಗಲಿಕೆಯಿಂದ ನಾಡಿನ ಧೀಮಂತ ರಾಜಕಾರಣದ ಪರಂಪರೆ ಸೊರಗಿದೆ' ಎಂದರು. ಮೈಸೂರಿನ ಯಾವುದಾದರೂ ಪ್ರಮುಖ ವೃತ್ತಕ್ಕೆ ಧರಂಸಿಂಗ್ ರವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications