ಕಪ್ಪ ಕಾಣಿಕೆ ಆರೋಪ ನೂರಕ್ಕೆ ನೂರು ಸತ್ಯ: ಯಡಿಯೂರಪ್ಪ

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಗೋವಿಂದರಾಜು ಮನೆಯಲ್ಲಿ ಸಿಕ್ಕಿರುವ ಡೈರಿ ನಕಲಿ ಎಂದು ವಿಧಿವಿಜ್ಞಾನ ಪ್ರಯೋಗಾಲಯ ವರದಿ ನೀಡಿದೆ ಎನ್ನುವುದು ಮೂರ್ಖತನದ ಪರಮಾವಧಿ.

ಮೈಸೂರು, ಮಾರ್ಚ್ 21: ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯದ ಸಚಿವರು ನೂರಾರು ಕೋಟಿ ರೂಪಾಯಿ ಕಪ್ಪ ಕಾಣಿಕೆ ನೀಡಿರುವುದಾಗಿ ನಾನು ಮಾಡಿರುವ ಆರೋಪ ನೂರಕ್ಕೆ ನೂರರಷ್ಟು ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ನುಡಿದಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಗೋವಿಂದರಾಜು ಮನೆಯಲ್ಲಿ ಸಿಕ್ಕಿರುವ ಡೈರಿ ನಕಲಿ ಎಂದು ವಿಧಿವಿಜ್ಞಾನ ಪ್ರಯೋಗಾಲಯ ವರದಿ ನೀಡಿದೆ ಎನ್ನುವುದು ಮೂರ್ಖತನದ ಪರಮಾವಧಿ. ಈ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಲೆಬುಡವಿಲ್ಲದ ರೀತಿ ಮಾತನಾಡುತ್ತಿದ್ದಾರೆ ಎಂದಿದ್ದಾರೆ.[ಸಿದ್ದರಾಮಯ್ಯನವರಿಂದ ಅಧಿಕಾರ ದುರುಪಯೋಗ: ಶೋಭಾ ಕರಂದ್ಲಾಜೆ]

Diary gate case is 100% true: BSY

ಸ್ಟೀಲ್ ಬ್ರಿಡ್ಜ್ ಗುತ್ತಿಗೆ ನೀಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಸದಸ್ಯರಿಗೆ 65 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿರುವುದು ಗೋವಿಂದರಾಜು ಡೈರಿಯಲ್ಲಿ ಉಲ್ಲೇಖವಾಗಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದಿದ್ದಾರೆ.[ನಾಮಪತ್ರ ಸಲ್ಲಿಕೆ: ಚಿತ್ರಗಳಲ್ಲಿ ಉಪಚುನಾವಣೆ ರಂಗು]

ನಿನ್ನೆ ತಾನೇ ಬೆಂಗಳೂರಿನಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಕರ್ನಾಟಕ ತೆರಿಗೆ ಇಲಾಖೆ ಡೈರಿಗೇಟ್ ವಿಚಾರಣೆಯ ಸಂದರ್ಭದಲ್ಲಿ ಸಿಕ್ಕ ಪುರಾವೆಗಳ್ಯಾವವೂ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+