ವರಮಹಾಲಕ್ಷ್ಮೀ ಹಬ್ಬಕ್ಕೆ ರಿಯಾಯತಿ ದರದ ಸೀರೆ ಸಿಗುವುದು ಡೌಟು?
ವರಮಹಾಲಕ್ಷ್ಮಿ ಹಬ್ಬಕ್ಕೆ ರೇಷ್ಮೆ ಸೀರೆ, ಅದರಲ್ಲೂ ಮೈಸೂರು ಸಿಲ್ಕ್ ರಿಯಾಯಿತಿ ದರದ ಮಾರಾಟ ಕೊಡುಗೆ ನೀಡುವುದಾಗಿ ರಾಜ್ಯ ಸರಕಾರ ಘೋಷಣೆ ಮಾಡಿದೆ. ಅದಕ್ಕೂ ಮುಂಚೆ ಅಂದರೆ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 15ರಿಂದ 24ರ ವರೆಗೆ ಶೇಕಡಾ ಐವತ್ತರಷ್ಟು ರಿಯಾಯಿತಿ ದರದಲ್ಲಿ ರೇಷ್ಮೆ ಸೀರೆಗಳನ್ನು ಮಾರಾಟ ಮಾಡುವುದಾಗಿ ಘೋಷಣೆ ಮಾಡಲಾಗಿತ್ತು.
ಆದರೆ, ಖರೀದಿಗೆ ತೆರಳಿದ್ದ ಸಾರ್ವಜನಿಕರು ಬರಿಗೈನಲ್ಲಿ ಹಿಂತಿರುಗಿದರು. ಇದೇ ಪರಿಸ್ಥಿತಿ ವರಮಹಾಲಕ್ಷ್ಮಿ ದಿನದಂದು ಆಗಬಹುದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವುದರಿಂದ ರಿಯಾಯಿತಿ ಮಾರಾಟವನ್ನು ಆಗಸ್ಟ್ 15ರಂದು ಮುಂದೂಡಲಾಯಿತು.
ಆದರೆ, ಎಲ್ಲರ ಮುಂದಿರುವ ಪ್ರಶ್ನೆ ಏನೆಂದರೆ ಚುನಾವಣೆಗೆ 15 ದಿನ ಮುಂಚೆಯೇ ಈ ಹಣೆಬರಹವಾದರೆ, ಚುನಾವಣೆಗೆ ಇನ್ನೊಂದು ವಾರವಿದ್ದಾಗ ಏನು ಕಥೆ? ಮೊದಲಿನಿಂದಲೂ ಸ್ವಾತಂತ್ರ್ಯೋತ್ಸವಕ್ಕೆ ರೇಷ್ಮೆ ಸೀರೆ ಮಾರಾಟ ಮಾಡುವುದಾಗಿ ಪ್ರಚಾರ ಮಾಡಿ, ಅಂತಿಮ ಹಂತದಲ್ಲಿ ನೀತಿ ಸಂಹಿತೆ ಕಾರಣಕ್ಕೆ ರಿಯಾಯಿತಿ ಮಾರಾಟ ರದ್ದುಪಡಿಸಿರುವುದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡದೆ ಇರುವುದೇ ಈ ಗೊಂದಲಕ್ಕೆ ಕಾರಣವಾಗಿದೆ.

ಆಗಸ್ಟ್ 21ರಂದು ಕುಮಾರಸ್ವಾಮಿಯಿಂದ ಚಾಲನೆ
ಆಗಸ್ಟ್ 21ರಂದು ರಿಯಾಯಿತಿ ದರದಲ್ಲಿ ಸೀರೆ ಮಾರಾಟ ಮಾಡುವುದಕ್ಕೆ ಚನ್ನಪಟ್ಟಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಈಗಾಗಲೇ ಸಚಿವ ಸಾರಾ ಮಹೇಶ್ ಘೋಷಿಸಿದ್ದಾರೆ. ಆದರೆ ಈ ಮಧ್ಯೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿರುವ ಕಡೆ ಈ ಕಾರ್ಯಕ್ರಮದ ಜಾರಿ ಅನುಮಾನ ಮೂಡುತ್ತಿದೆ.

ಚುನಾವಣೆ ಆಯೋಗ ಏನು ಹೇಳುತ್ತದೆ?
ಏಕೆಂದರೆ, ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆಯೇ ಎಂಬ ಪ್ರಶ್ನೆ ಸರಕಾರವನ್ನು ಕಾಡಿದೆ. ಹೀಗಾಗಿ, ಚುನಾವಣಾ ಆಯೋಗದಿಂದ ಸ್ಪಷ್ಟೀಕರಣ ಕೂಡ ಬಯಸಿದೆ. ಹಬ್ಬದ ವೇಳೆ ಮೈಸೂರು ರೇಷ್ಮೆ ಸೀರೆಯನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ರೇಷ್ಮೆ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಈ ಹಿಂದೆ ಪ್ರಕಟಿಸಿದ್ದರು.

ಅನುಮತಿ ಪಡೆಯಲು ಜಿಲ್ಲಾಧಿಕಾರಿಗೆ ಸೂಚನೆ
ವರಮಹಾಲಕ್ಷ್ಮಿ ಹಬ್ಬ ಹತ್ತಿರ ಆಗುತ್ತಿರುವುದರಿಂದ ಸೀರೆ ಮಾರಾಟಕ್ಕೆ ಅನುಮತಿ ನೀಡುವ ಕುರಿತು ಚುನಾವಣಾ ಆಯೋಗದಿಂದ ಅನುಮತಿ ಪಡೆದುಕೊಳ್ಳುವಂತೆ ಆಯಾ ಜಿಲ್ಲಾಧಿಕಾರಿಗೆ ಸಚಿವ ಸಾ.ರಾ.ಮಹೇಶ್ ಈಗಾಗಲೇ ನಿರ್ದೇಶನ ನೀಡಿದ್ದಾರೆ. ಹಬ್ಬ ಇರುವ ಕಾರಣ ಜನರು ಸೀರೆ ಖರೀದಿಸುವುದರಿಂದ ಅದಕ್ಕೆ ಅನುಮತಿ ನೀಡಬೇಕು ಎಂದು ಚುನಾವಣಾ ಆಯೋಗಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಕೂಡ ತಿಳಿಸಿದ್ದಾರೆ.

ಚುನಾವಣೆ ಇರುವ ಕಡೆ ಮಾರಾಟ ಅನುಮಾನ
ರೇಷ್ಮೆ ಸೀರೆಯ ರಿಯಾಯಿತಿ ಮಾರಾಟವು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆಯೇ ಎಂಬ ಬಗ್ಗೆ ರಾಜ್ಯ ಚುನಾವಣಾ ಆಯೋಗದಿಂದ ಸ್ಪಷ್ಟೀಕರಣ ಕೇಳಲಾಗಿದೆ. ಒಂದು ವೇಳೆ ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದು ಆಯೋಗ ಸೂಚಿಸಿದರೆ ಆಗ ಚುನಾವಣೆ ಘೋಷಣೆಯಾಗಿರುವ ಕಡೆ ಮಾರಾಟ ನಡೆಯುವುದು ಅನುಮಾನವೇ ಸರಿ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications