ರಮೇಶ್ ಜಾರಕಿಹೊಳಿಯಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಮೈಸೂರು, ನವೆಂಬರ್ 8: ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಬೆಳ್ಳಂಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ನಲ್ಲಿ ಅನರ್ಹ ಶಾಸಕರ ವಿಚಾರಣೆ ನಡೆದಿದ್ದು ತೀರ್ಪು ಮಾತ್ರ ಪ್ರಕಟವಾಗಬೇಕಿಗಿದೆ ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ದೇವಿಯ ದರ್ಶನ ಪಡೆದ ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ವಿಶೇಷ ಪೂಜೆ ಸಲ್ಲಿಸಿದರು.
ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ದೇವರ ಮೊರೆ ಹೋಗಿದ್ದಾರೆ. ಚಾಮುಂಡಿ ದರ್ಶನ ಪಡೆದು ತೀರ್ಪು ಬೇಗ ಪ್ರಕಟವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ತೀರ್ಪು ಬರುವ ಸಾಧ್ಯತೆ ಇತ್ತು. ಆದರೆ ಸೋಮವಾರ ತೀರ್ಪು ಬರಬಹುದು ಎಂದು ಅಂದಾಜಿಸಲಾಗಿದೆ.

ಅನರ್ಹರಿಗೆ ಭಾರಿ ನಿರಾಸೆ
ಇಂದೇ ತೀರ್ಪು ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಅನರ್ಹರ ಶಾಸಕರಿಗೆ ಇದರಿಂದ ಭಾರೀ ನಿರಾಸೆಯಾಗಿದೆ. ಸೋಮವಾರದಿಂದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗುವ ಹಿನ್ನೆಲೆಯಲ್ಲಿ ಅನರ್ಹರು ಆತಂಕಕ್ಕೆ ಒಳಗಾಗಿದ್ದಾರೆ.

ನ್ಯಾಯಾಲಯದಿಂದ ಸುದೀರ್ಘ ವಿಚಾರಣೆ
ಪ್ರಕರಣದ ವಿಚಾರಣೆ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ನಡೆಯುತ್ತಿದೆ. ಈಗಾಗಲೇ ಸುದೀರ್ಘ ವಿಚಾರಣೆ ನಡೆಸಿರುವ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. ನ್ಯಾ. ಎನ್.ವಿ. ರಮಣ ನೇತೃತ್ವದ ಪೀಠದ ಕಲಾಪ ಪಟ್ಟಿಯಲ್ಲಿ ಅನರ್ಹ ಶಾಸಕರ ತೀರ್ಪು ಪ್ರಕಟಿಸುವ ಮಾಹಿತಿ ಇಲ್ಲ. ಹೀಗಾಗಿ ಇಂದು ತೀರ್ಪು ಪ್ರಕಟವಾಗುವುದಿಲ್ಲ.
ಇನ್ನು ಶನಿವಾರ ಮತ್ತು ಭಾನುವಾರ ನ್ಯಾಯಾಲಯಕ್ಕೆ ರಜೆ ಇರುವುದರಿಂದ ಸೋಮವಾರದವರೆಗೂ ಅನರ್ಹ ಶಾಸಕರು ಕಾಯಬೇಕಾಗಿದೆ. ಸೋಮವಾರದಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುವುದರಿಂದ ಉಪಚುನಾವಣೆಯನ್ನು ಮುಂದೂಡಿಕೆ ಮಾಡುವಂತೆ ಅನರ್ಹ ಶಾಸಕರು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಅನರ್ಹರಿಗೆ ಟಿಕೆಟ್ ನೀಡಲ್ಲ ಎಂದು ಎಲ್ಲೂ ಹೇಳಿಲ್ಲ
ಅನರ್ಹ ಶಾಸಕರು ಪಕ್ಷಕ್ಕೆ ಬಂದ ಸಂದರ್ಭದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಮತ್ತು ಅವಕಾಶಗಳನ್ನು ವರಿಷ್ಠರು ನೀಡುತ್ತಾರೆ. ಎಂದು ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡುವುದಿಲ್ಲವೆಂದು ನಾನು ಎಲ್ಲಿಯೂ ಹೇಳಿಲ್ಲ. ಅವರು ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ . ಉಪಚುನಾವಣೆಯಲ್ಲಿ ಅಥಣಿ ಕ್ಷೇತ್ರದ ಟಿಕೆಟ್ ಗಾಗಿ ನಾನು ಪಟ್ಟು ಹಿಡಿದಿಲ್ಲ, ಪಕ್ಷದ ಶಿಸ್ತಿನ ಸಿಪಾಯಿ ಆಗಿರುವ ನಾನು ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಚಾಮುಂಡೇಶ್ವರಿಗೆ ಡಿಕೆ ಶಿವಕುಮಾರ್ ಅವರಿಂದ ವಿಶೇಷ ಪೂಜೆ
ಎರಡು ದಿನಗಳ ಕಾಲ ದೇವಸ್ಥಾನಗಳ ಪ್ರವಾಸದಲ್ಲಿರುವ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications