ಕುಕ್ಕರಹಳ್ಳಿ ಕೆರೆ ಹೂಳೆತ್ತುವ ವಿಚಾರ: ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ
ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಕುಕ್ಕರಹಳ್ಳಿ ಕೆರೆಗೆ ಭೇಟಿ ನೀಡಿದ ಸಂದರ್ಭ ಅಲ್ಲಿಗೆ ಬಂದಂತಹ ವಾಯುವಿಹಾರಿಗಳನ್ನು, ಪರಿಸರ ಪ್ರೇಮಿಗಳನ್ನು ಮಾತನಾಡಿಸಿ ಅಭಿಪ್ರಾಯ ಸಂಗ್ರಹಿಸಿದರು.
ಮೈಸೂರು, ಮಾರ್ಚ್ 2: ಕುಕ್ಕರಹಳ್ಳಿ ಕೆರೆಯಲ್ಲಿ ಹೂಳೆತ್ತುವ ಮತ್ತು ಇತರೆ ಕಾಮಗಾರಿಗಳ ಕುರಿತು ಕೆಲವರು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಬುಧವಾರ ಬೆಳಿಗ್ಗೆ ಕುಕ್ಕರಹಳ್ಳಿ ಕೆರೆಗೆ ತೆರಳಿ ಅಲ್ಲಿನ ಪರಿಸರವನ್ನು ಪರಿಶೀಲನೆ ನಡೆಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಕುಕ್ಕರಹಳ್ಳಿ ಕೆರೆ ಉಳಿಸಿ ಸಮಿತಿ ವತಿಯಿಂದ ಪ್ರತಿಭಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಕುಕ್ಕರಹಳ್ಳಿ ಕೆರೆಗೆ ಭೇಟಿ ನೀಡಿದ ಸಂದರ್ಭ ಅಲ್ಲಿಗೆ ಬಂದಂತಹ ವಾಯುವಿಹಾರಿಗಳನ್ನು, ಪರಿಸರ ಪ್ರೇಮಿಗಳನ್ನು ಮಾತನಾಡಿಸಿ ಅಭಿಪ್ರಾಯ ಸಂಗ್ರಹಿಸಿದರು. ಕೆಲವರು ಅಭಿವೃದ್ಧಿ ಪಡಿಸಿ ಎಂದರೆ ಇನ್ನೂ ಕೆಲವರು ಅಭಿವೃದ್ಧಿ ಬೇಡ ಇರೋ ಹಾಗೆ ಇರಲಿ ಬಿಡಿ. ಅಭಿವೃದ್ಧಿ ಹೆಸರಲ್ಲಿ ಕೆರೆಯನ್ನು ಹಾಳುಮಾಡಬೇಡಿ ಎಂದು ಕೇಳಿಕೊಂಡರು.

ಜಿಲ್ಲಾಧಿಕಾರಿಗಳೊಂದಿಗೆ ಪರಿಸರವಾದಿಗಳು ಮಾತನಾಡಿ ಕೆರೆಯಲ್ಲಿ ಹಲವಾರು ವಿಧದ ಪಕ್ಷಿಸಂಕುಲಗಳಿವೆ. ಕೆರೆಯನ್ನು ಹೂಳೆತ್ತಿ ಜೆಟ್ ಪಂಪ್ ಅಳವಡಿಸುವುದರಿಂದ ಅವುಗಳ ಅಭಿವೃದ್ಧಿಗೆ ಮಾರಕವಾಗಲಿದೆ. ಆದರೆ ಬೇರೆ ತೆರನಾದ ತಾಂತ್ರಿಕತೆಯಿಂದ ಕೆರೆಯ ನೀರಿನ ಒಳಗಡೆ ಮೈಕ್ರೋ ಬಬ್ಲ್ ಮೂಲಕ ಡಿಸಾಲ್ವ್ಡ್ ಆಕ್ಸಿಜನ್ ಪ್ರಮಾಣ ಹೆಚ್ಚಿಸಲು ಅವಶ್ಯಕ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದರು.
ಕೆಲವು ವಾಯುವಿಹಾರಿಗಳು ಇಲ್ಲಿ ಕಾಂಕ್ರೀಟ್ ಮಯ ಮಾಡುವುದು ಬೇಡ. ಹಾಗೆ ಮಾಡಿದರೆ ಇಲ್ಲಿ ಪಕ್ಷಿಗಳು ಬರುವುದಿಲ್ಲ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಡಿ.ರಂದೀಪ್ ಪರಿಸರಕ್ಕೆ ಮಾರಕವಾಗುವಂತಹ ಯಾವ ಕಾರ್ಯಗಳನ್ನೂ ಕೈಗೆತ್ತಿಕೊಳ್ಳುವುದಿಲ್ಲ. ಸದ್ಯಕ್ಕೆ ಇಲ್ಲಿಗೆ ಕೈಬಿಡಲಾಗುವುದು. ಎಲ್ಲರ ಅಭಿಪ್ರಾಯವನ್ನೂ ಸಂಗ್ರಹಿಸಿ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ಶಾಸಕ ವಾಸು, ಕುಕ್ಕರಹಳ್ಳಿಕೆರೆ ಅಭಿವೃದ್ಧಿ ಸಲಹಾ ಸಮಿತಿ ಸದಸ್ಯ ಯು.ಎನ್.ರವಿಕುಮಾರ್ ಸೇರಿದಂತೆ ಪರಿಸರ ಪ್ರೇಮಿಗಳು ಜಿಲ್ಲಾಧಿಕಾರಿಗಳ ಜೊತೆಗಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications