ಚುನಾವಣಾ ನೀತಿ ಸಂಹಿತೆ:ಚೆಕ್ ಪೋಸ್ಟ್ ಗಳಲ್ಲಿ ಜರ್ಮನ್ ಮಾದರಿಯ ಟೆಂಟ್ ಅಳವಡಿಕೆ
ಮೈಸೂರು, ಮಾರ್ಚ್ 13:ಲೋಕಸಭಾ ಚುನಾವಣೆ ನೀತಿ ಸಂಹಿತೆಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಸರ್ಕಾರಿ ವಾಹನಗಳನ್ನು ವಶಕ್ಕೆ ಪಡೆದು ಪತ್ರಗಳನ್ನು ತೆರವುಗೊಳಿಸಲಾಗಿದೆ.
ಜಿಲ್ಲೆಯನ್ನು ಪ್ರವೇಶಿಸುವ ಮತ್ತು ನಿರ್ಗಮಿಸುವ ಸ್ಥಳಗಳು ಸೇರಿದಂತೆ 12 ರಾಜ್ಯ ಹೆದ್ದಾರಿಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಇಲ್ಲಿನ ಸಿಬ್ಬಂದಿ ಒಳ ಬರುವ ಮತ್ತು ಹೊರ ಹೋಗುವ ಎಲ್ಲಾ ವಾಹನಗಳನ್ನು ಪರೀಕ್ಷಿಸಲಿದ್ದಾರೆ.
ಚೆಕ್ ಪೋಸ್ಟ್ ಗಳಲ್ಲಿ ಜರ್ಮನ್ ಮಾದರಿಯ ಟೆಂಟ್ ಗಳನ್ನು ನಿರ್ಮಿಸಿ, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮೈಸೂರು - ಬೆಂಗಳೂರು ರಸ್ತೆಯ ಕೆಆರ್ ಮಿಲ್ ಬಳಿ ಚೆಕ್ ಪೋಸ್ಟ್ ತೆರೆಯಲಾಗಿದೆ.

ಮದುವೆ ಮತ್ತು ಧಾರ್ಮಿಕ ಸಮಾರಂಭಗಳಿಗೆ 50 ಸಾವಿರ ರೂ.ವರೆಗೆ ಕೊಂಡೊಯ್ಯಲು ಯಾವುದೇ ಅನುಮತಿ ಬೇಕಿಲ್ಲ. ಇಂತಹ ಕಾರ್ಯಕ್ರಮಗಳು ರಾಜಕೀಯ ಚಟುವಟಿಕೆಗಳಿಗೆ ದುರುಪಯೋಗವಾಗದಂತೆ ಸಂಘಟಕರು ಎಚ್ಚರಿಕೆ ವಹಿಸಬೇಕು. ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ನಗರ ಪಾಲಿಕೆ ಮತ್ತು ಮುಡಾ ಜಿಲ್ಲಾಡಳಿತ ಈಗಾಗಲೇ ಪೋಸ್ಟರ್ಸ್, ಬ್ಯಾನರ್ , ಬಾವುಟ ರಾಜಕೀಯಕ್ಕೆ ಸಂಬಂಧಿಸಿದ ಪ್ರಕಟಣೆಗಳನ್ನು ತೆರವು ಮಾಡಿದೆ. ನಗರ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಸರ್ಕಾರಿ ಜಾಹೀರಾತುಗಳನ್ನು ಸಹ ತೆಗೆಯಲಾಗಿದೆ.

ಸಂಸದ ಪ್ರತಾಪ್ ಸಿಂಹ ಸೇರಿದಂತೆ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರಿಗೆ ನೀಡಲಾಗಿದ್ದ 12 ಕಾರುಗಳನ್ನು ವಾಪಸ್ ಪಡೆಯಲಾಗಿದೆ. ಅಂತೆಯೇ ಜಿಲ್ಲಾಧಿಕಾರಿಗಳ ಕಚೇರಿಯ ಮೊದಲನೇ ಮಹಡಿಯಲ್ಲಿ ಮೀಡಿಯಾ ಸೆಂಟರ್ ಆರಂಭಿಸಿ, ರಾಜಕೀಯ ಭಾಷಣಗಳ ಮೇಲೆ ನಿಗಾ ವಹಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.












Click it and Unblock the Notifications