ಮಹಾರಾಜರ ಅಂತಿಮ ಸಂಸ್ಕಾರಕ್ಕೆ 250 ಕೆಜಿ ಶ್ರೀಗಂಧ
ಮೈಸೂರು, ಡಿ. 11 :ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಅಂತ್ಯಕ್ರಿಯೆಯ ಪ್ರಕ್ರಿಯೆಗಳು ಆರಂಭವಾಗಿದೆ.ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಮಧುವನದಲ್ಲಿ ಅಂತಿಮ ಸಂಸ್ಕಾರಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸುಮಾರು 250 ಕೆಜಿ ಶ್ರೀಗಂಧವನ್ನು ಅಂತಿಮ ಸಂಸ್ಕಾರಕ್ಕೆ ಬಳಕೆ ಮಾಡಲಾಗುತ್ತಿದೆ. ಸ್ಥಳಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಅಂಭಾವಿಲಾಸ ಅರಮನೆಯಲ್ಲಿ ಒಡೆಯರ್ ಅವರ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ಆರಂಭವಾಗಿವೆ. ಮಧ್ಯಾಹ್ನ 1.30ರ ಸುಮಾರಿಗೆ ಅರಮನೆಯಿಂದ ಒಡೆಯರ್ ಪಾರ್ಥಿವ ಶರೀರದ ಮೆರವಣಿಗೆ ಹೊರಡುತ್ತದೆ. ಚಿನ್ನದ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಿಸುವ ಮೂಲಕ ಪಾರ್ಥಿವ ಶರೀರವನ್ನು ಅಂತ್ಯ ಸಂಸ್ಕಾರ ನಡೆಯುವ ಮಧುವನಕ್ಕೆ ತರಲಾಗುತ್ತದೆ. (ಒಡೆಯರ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ)

ಮಧುವನದಲ್ಲಿ ನಡೆಯುವ ಅಂತಿಮ ಸಂಸ್ಕಾರದಲ್ಲಿ ರಾಜಮನೆತನದವರು, ಗಣ್ಯರು ಮತ್ತು ಮಾಧ್ಯಮಗಳು ಮಾತ್ರ ಭಾಗವಹಿಸಬಹುದಾಗಿದೆ. ಅರಮನೆಯಿಂದ ಹೊರಡುವ ಪಾರ್ಥಿವ ಶರೀರಿದ ಮೆರವಣಿಗೆ 4 ಗಂಟೆ ಸುಮಾರಿಗೆ ಮಧುವನಕ್ಕೆ ಆಗಮಿಸಬಹು ಎಂದು ಅಂದಾಜಿಸಲಾಗಿದೆ. ಸುಮಾರು 45 ನಿಮಿಷಗಳ ವಿಧಿವಿಧಾನಗಳ ನಂತರ ಸುಮಾರು 5 ಗಂಟೆಗೆ ಚಿತೆಗೆ ಅಗ್ನಿ ಸ್ಪರ್ಶ ಮಾಡಬಹುದು ಎಂದು ತಿಳಿದು ಬಂದಿದೆ. (ಅಳಿವಿನ ಅಂಚಿನಲ್ಲಿ ಆಳರಸರ ಮಧುವನ)
ವಿಧಿವಿಧಾನಗಳು : ಮೃತದೇಹ ಮಧುವನಕ್ಕೆ ಆಗಮಿಸುತ್ತಿದ್ದಂತೆ ಮೊದಲು ಪಂಚದ್ರವ್ಯದ ಅಭಿಷೇಕ ನಡೆಯಲಿದೆ. ನಂತರ ಶ್ರೀಗಂಧ ಮತ್ತು ಚಂದನದ ಅಲಂಕಾರ ನಡೆಯಲಿದೆ. ಭಾನುಪ್ರಕಾಶ್ ಅಂತಿಮ ವಿಧಿವಿಧಾನಗಳ ನೇತೃತ್ವ ವಹಿಸಿದ್ದಾರೆ. ಅರಮನೆ ಆವರಣದಲ್ಲಿ ಗೋದಾನ, ಎರಡು ಬಗೆಯ ಹೋಮಗಳನ್ನು ಮಾಡಲಾಗುತ್ತಿದೆ.
ಪೊಲೀಸ್ ಸರ್ಪಗಾವಲು : ಒಡೆಯರ್ ಅಂತ್ಯ ಸಂಸ್ಕಾರ ನಡೆಯುವ ಮಧುವನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಗಣ್ಯರು ಆಗಮಿಸುತ್ತಿರುವುದರಿಂದ ಮಂಡ್ಯ ಮತ್ತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ವತಃ ಬಂದೋಬಸ್ತ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications