Get Updates
Get notified of breaking news, exclusive insights, and must-see stories!

ಮಹಾರಾಜರ ಅಂತಿಮ ಸಂಸ್ಕಾರಕ್ಕೆ 250 ಕೆಜಿ ಶ್ರೀಗಂಧ

ಮೈಸೂರು, ಡಿ. 11 :ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಅಂತ್ಯಕ್ರಿಯೆಯ ಪ್ರಕ್ರಿಯೆಗಳು ಆರಂಭವಾಗಿದೆ.ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಮಧುವನದಲ್ಲಿ ಅಂತಿಮ ಸಂಸ್ಕಾರಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸುಮಾರು 250 ಕೆಜಿ ಶ್ರೀಗಂಧವನ್ನು ಅಂತಿಮ ಸಂಸ್ಕಾರಕ್ಕೆ ಬಳಕೆ ಮಾಡಲಾಗುತ್ತಿದೆ. ಸ್ಥಳಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಅಂಭಾವಿಲಾಸ ಅರಮನೆಯಲ್ಲಿ ಒಡೆಯರ್ ಅವರ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ಆರಂಭವಾಗಿವೆ. ಮಧ್ಯಾಹ್ನ 1.30ರ ಸುಮಾರಿಗೆ ಅರಮನೆಯಿಂದ ಒಡೆಯರ್ ಪಾರ್ಥಿವ ಶರೀರದ ಮೆರವಣಿಗೆ ಹೊರಡುತ್ತದೆ. ಚಿನ್ನದ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಿಸುವ ಮೂಲಕ ಪಾರ್ಥಿವ ಶರೀರವನ್ನು ಅಂತ್ಯ ಸಂಸ್ಕಾರ ನಡೆಯುವ ಮಧುವನಕ್ಕೆ ತರಲಾಗುತ್ತದೆ. (ಒಡೆಯರ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ)

cremation

ಮಧುವನದಲ್ಲಿ ನಡೆಯುವ ಅಂತಿಮ ಸಂಸ್ಕಾರದಲ್ಲಿ ರಾಜಮನೆತನದವರು, ಗಣ್ಯರು ಮತ್ತು ಮಾಧ್ಯಮಗಳು ಮಾತ್ರ ಭಾಗವಹಿಸಬಹುದಾಗಿದೆ. ಅರಮನೆಯಿಂದ ಹೊರಡುವ ಪಾರ್ಥಿವ ಶರೀರಿದ ಮೆರವಣಿಗೆ 4 ಗಂಟೆ ಸುಮಾರಿಗೆ ಮಧುವನಕ್ಕೆ ಆಗಮಿಸಬಹು ಎಂದು ಅಂದಾಜಿಸಲಾಗಿದೆ. ಸುಮಾರು 45 ನಿಮಿಷಗಳ ವಿಧಿವಿಧಾನಗಳ ನಂತರ ಸುಮಾರು 5 ಗಂಟೆಗೆ ಚಿತೆಗೆ ಅಗ್ನಿ ಸ್ಪರ್ಶ ಮಾಡಬಹುದು ಎಂದು ತಿಳಿದು ಬಂದಿದೆ. (ಅಳಿವಿನ ಅಂಚಿನಲ್ಲಿ ಆಳರಸರ ಮಧುವನ)

ವಿಧಿವಿಧಾನಗಳು : ಮೃತದೇಹ ಮಧುವನಕ್ಕೆ ಆಗಮಿಸುತ್ತಿದ್ದಂತೆ ಮೊದಲು ಪಂಚದ್ರವ್ಯದ ಅಭಿಷೇಕ ನಡೆಯಲಿದೆ. ನಂತರ ಶ್ರೀಗಂಧ ಮತ್ತು ಚಂದನದ ಅಲಂಕಾರ ನಡೆಯಲಿದೆ. ಭಾನುಪ್ರಕಾಶ್ ಅಂತಿಮ ವಿಧಿವಿಧಾನಗಳ ನೇತೃತ್ವ ವಹಿಸಿದ್ದಾರೆ. ಅರಮನೆ ಆವರಣದಲ್ಲಿ ಗೋದಾನ, ಎರಡು ಬಗೆಯ ಹೋಮಗಳನ್ನು ಮಾಡಲಾಗುತ್ತಿದೆ.

ಪೊಲೀಸ್ ಸರ್ಪಗಾವಲು : ಒಡೆಯರ್ ಅಂತ್ಯ ಸಂಸ್ಕಾರ ನಡೆಯುವ ಮಧುವನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಗಣ್ಯರು ಆಗಮಿಸುತ್ತಿರುವುದರಿಂದ ಮಂಡ್ಯ ಮತ್ತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ವತಃ ಬಂದೋಬಸ್ತ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+