ಮೈಸೂರು ಜಿಲ್ಲಾಧಿಕಾರಿ ಅಭಿರಾಮ್. ಜಿ. ಶಂಕರ್ ದಿಢೀರ್ ವರ್ಗಾವಣೆ

ಮೈಸೂರು, ಆಗಸ್ಟ್ 28: ಈ ಬಾರಿಯ ಮೈಸೂರು ದಸರಾ ಮಹೋತ್ಸವಕ್ಕೆ ಕೇವಲ ಒಂದೂವರೆ ತಿಂಗಳು ಬಾಕಿ ಇರುವಾಗಲೇ ಜಿಲ್ಲಾಧಿಕಾರಿ ಅಭಿರಾಮ್. ಜಿ. ಶಂಕರ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಅಚ್ಚರಿ ಮೂಡಿಸಿದೆ.

Recommended Video

      Bannerghatta Park ಆನೆಗೆ ಪ್ರಸಿದ್ಧ ಹೆಸರು | Oneindia Kannada

      ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕರಾಗಿ ಅಭಿರಾಮ್.ಜಿ.ಶಂಕರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ. ಅದೇ ರೀತಿಯಾಗಿ ಮೈಸೂರು ಜಿಲ್ಲಾಧಿಕಾರಿಯನ್ನಾಗಿ ಬಿ.ಶರತ್ ಅವರನ್ನು ನೇಮಕ ಮಾಡಿದ್ದು, ಇವರು ಕಲಬುರಗಿ ಜಿಲ್ಲಾಧಿಕಾರಿಯಾಗಿದ್ದರು.

      ಅಭಿರಾಮ್.ಜಿ. ಶಂಕರ್ ಅವರು ಸದ್ಯದಲ್ಲೇ ಕೇಂದ್ರ ಸರ್ಕಾರದ ಸೇವೆಗೆ ಹೋಗುವವರಿದ್ದಾರೆ. ಅವರು ಕೇಂದ್ರ ಸರ್ಕಾರದ ಸೇವೆಗೆ ಖಾತರಿಯಾದ ಹಿನ್ನೆಲೆಯಲ್ಲಿ ಈ ವರ್ಗಾವಣೆಯಾಗಿದ್ದು, ತಾತ್ಕಾಲಿಕವಾಗಿ ಆಡಳಿತ ತರಬೇತಿ ಸಂಸ್ಥೆಗೆ ನಿಯೋಜಿಸಲಾಗಿದೆ.

      Mysuru District Collector Abhiram G Shankar Transfered

      ಅಭಿರಾಮ್ ಜಿ. ಶಂಕರ್ ಅವರು ಕೇಂದ್ರ ಸರ್ಕಾರದ ಸೇವೆ ಹೋಗುವ ಪ್ರಸ್ತಾವನೆ ಎರಡು-ಮೂರು ತಿಂಗಳ ಹಿಂದೆಯೇ ಆರಂಭವಾಗಿತ್ತು ಎಂದು ಹೇಳಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+