ತಿ.ನರಸೀಪುರದಲ್ಲಿ ಕುಂಭ ಮೇಳ:ಪ್ರಸಾದ ಪರೀಕ್ಷೆಗೆ ಮುಂದಾದ ಆರೋಗ್ಯ ಇಲಾಖೆ
ಮೈಸೂರು, ಫೆಬ್ರವರಿ 13: ಜಿಲ್ಲೆಯ ತಿ.ನರಸೀಪುರದ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 17 ರಿಂದ ಮೂರು ದಿನಗಳು ನಡೆಯುವ ಕುಂಭಮೇಳಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಯುಷ್ ಇಲಾಖೆಯವರು, ಪ್ರಸಾದ ವಿನಿಮಯ ಮಾಡುವವರು ತಹಶೀಲ್ದಾರರ ಅನುಮತಿ ಪಡೆದು ಪ್ರಸಾದ ಹಂಚುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜು ಖಡಕ್ ಆದೇಶ ನೀಡಿದ್ದಾರೆ.
ಈಗಾಗಲೇ ವಿಷ ಪ್ರಸಾದದ ಪ್ರಕರಣದ ಬಳಿಕ ಇಲ್ಲಿಯೂ ಕೂಡ ಆಹಾರ ಗುಣಮಟ್ಟ ಪರಿಶೀಲನೆಗೆ ಹಾಗೂ ಕಲಬೆರಕೆ ಆಹಾರ ಪತ್ತೆಹಚ್ಚಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಯಾವುದೇ ಸಣ್ಣ ತೊಂದರೆಗಳು ಆಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಇನ್ನು ಕುಂಭಮೇಳದಲ್ಲಿ ತಾತ್ಕಾಲಿಕ ಆಸ್ಪತ್ರೆಗಳನ್ನು ತೆರೆಯಲು ಸಿದ್ಧತೆ ನಡೆಸಲಾಗಿದೆ ಎಂದು ಡಾ. ಬಿ. ಬಸವರಾಜು ತಿಳಿಸಿದ್ದಾರೆ. ಅಗಸ್ತೇಶ್ವರ ದೇವಾಲಯದ ಸಮೀಪವಿರುವ ಕಲ್ಲಿನ ಮಂಟಪದಲ್ಲೇ ಒಂದು ಆಸ್ಪತ್ರೆ ಮತ್ತು ಮತ್ತೊಂದು ಗುಂಜಾ ನರಸಿಂಹ ಸ್ವಾಮಿ ದೇವಸ್ಥಾನದ ಹತ್ತಿರ, ಒಟ್ಟು ಎರಡು ತಾತ್ಕಾಲಿಕ ಆಸ್ಪತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸುಮಾರು 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಅದಕ್ಕಾಗಿಯೇ ಬೇಕಾಗುವ ಔಷಧಿಗಳನ್ನು ಈಗಾಗಲೇ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅಲ್ಲದೇ ತಿ. ನರಸೀಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 20 ಹಾಸಿಗೆ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.
"ಮೈಸೂರಿನ ಕೆ.ಆರ್ ಆಸ್ಪತ್ರೆಯಿಂದ ಫಿಜಿಷಿಯನ್, ಸರ್ಜನ್, ಆರ್ಥೋಪಿಡಿಶಿಯನ್ ಮತ್ತು ಮಕ್ಕಳ ತಜ್ಞ ವೈದ್ಯರನ್ನು ನಿಯೋಜಿಸುವಂತೆ ಕೇಳಿಕೊಂಡಿದ್ದೇವೆ. ಕುಂಭ ಮೇಳ ನಡೆಯುವ ಮೂರು ದಿನಗಳ ಕಾಲ ಮೂರು ಪಾಳಿಯಲ್ಲಿ ಕೆಲಸ ನಿರ್ವಹಿಸಲು ವೈದ್ಯರು ಮತ್ತು ಶುಶ್ರೂಷಕರನ್ನು ನಿಯೋಜನೆ ಮಾಡಲಾಗಿದೆ. ಎರಡೂ ಆಸ್ಪತ್ರೆಗಳಿಗೆ ಒಟ್ಟು 4 ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ" ಎಂದು ಡಾ. ಬಸವರಾಜು ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications