ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಿ.ನರಸೀಪುರದಲ್ಲಿ ಕುಂಭ ಮೇಳ:ಪ್ರಸಾದ ಪರೀಕ್ಷೆಗೆ ಮುಂದಾದ ಆರೋಗ್ಯ ಇಲಾಖೆ

|
Google Oneindia Kannada News

ಮೈಸೂರು, ಫೆಬ್ರವರಿ 13: ಜಿಲ್ಲೆಯ ತಿ.ನರಸೀಪುರದ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 17 ರಿಂದ ಮೂರು ದಿನಗಳು ನಡೆಯುವ ಕುಂಭಮೇಳಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಯುಷ್ ಇಲಾಖೆಯವರು, ಪ್ರಸಾದ ವಿನಿಮಯ ಮಾಡುವವರು ತಹಶೀಲ್ದಾರರ ಅನುಮತಿ ಪಡೆದು ಪ್ರಸಾದ ಹಂಚುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜು ಖಡಕ್ ಆದೇಶ ನೀಡಿದ್ದಾರೆ.

ಮೈಸೂರು : ತಿ.ನರಸೀಪುರ ಕುಂಭಮೇಳಕ್ಕೆ ಸಕಲ ಸಿದ್ಧತೆಮೈಸೂರು : ತಿ.ನರಸೀಪುರ ಕುಂಭಮೇಳಕ್ಕೆ ಸಕಲ ಸಿದ್ಧತೆ

ಈಗಾಗಲೇ ವಿಷ ಪ್ರಸಾದದ ಪ್ರಕರಣದ ಬಳಿಕ ಇಲ್ಲಿಯೂ ಕೂಡ ಆಹಾರ ಗುಣಮಟ್ಟ ಪರಿಶೀಲನೆಗೆ ಹಾಗೂ ಕಲಬೆರಕೆ ಆಹಾರ ಪತ್ತೆಹಚ್ಚಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಯಾವುದೇ ಸಣ್ಣ ತೊಂದರೆಗಳು ಆಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

 ಕುಂಭ ಮೇಳಕ್ಕೆ6 ದಿನ ಮಾತ್ರ ಬಾಕಿ, ತ್ರಿವೇಣಿ ಸಂಗಮದಲ್ಲಿ ಭರ್ಜರಿ ಸಿದ್ಧತೆ ಕುಂಭ ಮೇಳಕ್ಕೆ6 ದಿನ ಮಾತ್ರ ಬಾಕಿ, ತ್ರಿವೇಣಿ ಸಂಗಮದಲ್ಲಿ ಭರ್ಜರಿ ಸಿದ್ಧತೆ

ಇನ್ನು ಕುಂಭಮೇಳದಲ್ಲಿ ತಾತ್ಕಾಲಿಕ ಆಸ್ಪತ್ರೆಗಳನ್ನು ತೆರೆಯಲು ಸಿದ್ಧತೆ ನಡೆಸಲಾಗಿದೆ ಎಂದು ಡಾ. ಬಿ. ಬಸವರಾಜು ತಿಳಿಸಿದ್ದಾರೆ. ಅಗಸ್ತೇಶ್ವರ ದೇವಾಲಯದ ಸಮೀಪವಿರುವ ಕಲ್ಲಿನ ಮಂಟಪದಲ್ಲೇ ಒಂದು ಆಸ್ಪತ್ರೆ ಮತ್ತು ಮತ್ತೊಂದು ಗುಂಜಾ ನರಸಿಂಹ ಸ್ವಾಮಿ ದೇವಸ್ಥಾನದ ಹತ್ತಿರ, ಒಟ್ಟು ಎರಡು ತಾತ್ಕಾಲಿಕ ಆಸ್ಪತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

District Health Officer ordered prasada providers should obtain the permission of the Tahsildar

ಸುಮಾರು 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಅದಕ್ಕಾಗಿಯೇ ಬೇಕಾಗುವ ಔಷಧಿಗಳನ್ನು ಈಗಾಗಲೇ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅಲ್ಲದೇ ತಿ. ನರಸೀಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 20 ಹಾಸಿಗೆ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.

 ಕುಂಭ ಮೇಳಕ್ಕೆ6 ದಿನ ಮಾತ್ರ ಬಾಕಿ, ತ್ರಿವೇಣಿ ಸಂಗಮದಲ್ಲಿ ಭರ್ಜರಿ ಸಿದ್ಧತೆ ಕುಂಭ ಮೇಳಕ್ಕೆ6 ದಿನ ಮಾತ್ರ ಬಾಕಿ, ತ್ರಿವೇಣಿ ಸಂಗಮದಲ್ಲಿ ಭರ್ಜರಿ ಸಿದ್ಧತೆ

"ಮೈಸೂರಿನ ಕೆ.ಆರ್ ಆಸ್ಪತ್ರೆಯಿಂದ ಫಿಜಿಷಿಯನ್, ಸರ್ಜನ್, ಆರ್ಥೋಪಿಡಿಶಿಯನ್ ಮತ್ತು ಮಕ್ಕಳ ತಜ್ಞ ವೈದ್ಯರನ್ನು ನಿಯೋಜಿಸುವಂತೆ ಕೇಳಿಕೊಂಡಿದ್ದೇವೆ. ಕುಂಭ ಮೇಳ ನಡೆಯುವ ಮೂರು ದಿನಗಳ ಕಾಲ ಮೂರು ಪಾಳಿಯಲ್ಲಿ ಕೆಲಸ ನಿರ್ವಹಿಸಲು ವೈದ್ಯರು ಮತ್ತು ಶುಶ್ರೂಷಕರನ್ನು ನಿಯೋಜನೆ ಮಾಡಲಾಗಿದೆ. ಎರಡೂ ಆಸ್ಪತ್ರೆಗಳಿಗೆ ಒಟ್ಟು 4 ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ" ಎಂದು ಡಾ. ಬಸವರಾಜು ತಿಳಿಸಿದ್ದಾರೆ.

English summary
District Health Officer Dr. Basavaraju ordered prasada providers should obtain the permission of the Tahsildar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X