ಮೈಸೂರು ದಸರಾ-2020ರ ವೆಚ್ಚದ ಲೆಕ್ಕ ಕೊಟ್ಟ ಸಚಿವ ಎಸ್.ಟಿ ಸೋಮಶೇಖರ್
ಮೈಸೂರು, ನವೆಂಬರ್ 1: ವಿಶ್ವವಿಖ್ಯಾತ ಮೈಸೂರು ಸರಳ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರದಿಂದ ಬಂದಿರುವ ಹಣ ಮತ್ತು ಆಗಿರುವ ವೆಚ್ಚದ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ನೀಡಿದರು.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸರಳ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ ನಂತರ 10 ಕೋಟಿ ರೂ. ಬಿಡುಗಡೆ ಮಾಡಿತ್ತು. ಮೈಸೂರು ಸರಳ ದಸರಾಗೆ 2,05,83,167 ರೂ. ಖರ್ಚಾಗಿದೆ ಎಂದು ಸಚಿವರು ಲೆಕ್ಕ ಕೊಟ್ಟರು.
ಇದರಲ್ಲಿ ಹೆಚ್ಚು ಎಂದರೆ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಣೆ ಹಾಗೂ ಕಲಾವಿದರಿಗೆ 44 ಲಕ್ಷ ರೂ. ಹಣ ವೆಚ್ಚವಾಗಿದೆ. ದಸರಾ ಆನೆಗಳ ನಿರ್ವಹಣೆಗೆ 35 ಲಕ್ಷ ರೂ., ಇದ್ದ ಎರಡೇ ಎರಡು ವೇದಿಕೆಗೆ 41 ಲಕ್ಷ ರೂ., ರಾಜವಂಶಸ್ಥರಿಗೆ ಗೌರವ ಧನವಾಗಿ 40 ಲಕ್ಷ ರೂ. ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಇದರ ಜತೆಗೆ ಶ್ರೀರಂಗಪಟ್ಟಣ ದಸರಾಗೆ 50 ಲಕ್ಷ ರೂ. ಮತ್ತು ಚಾಮರಾಜನಗರ ದಸರಾಗೆ 36 ಲಕ್ಷ ರುಪಾಯಿ ವೆಚ್ಚವಾಗಿದ್ದು, ಒಟ್ಟು 2,91,83,167 ರೂ. ಹಣ ಖರ್ಚಾಗಿದೆ ಎಂದು ಮಾಹಿತಿ ನೀಡಿದ ಅವರು, ಯಾವುದೇ ಹೊಸ ವೆಚ್ಚ ಮಾಡಿಲ್ಲ, ಈ ಹಿಂದೆ ಮಾಡಿರುವ ವೆಚ್ಚವನ್ನಷ್ಟೆ ಮಾಡಿದ್ದೇವೆ ಎಂದರು.
ಮೈಸೂರು ಜಿಲ್ಲಾಡಳಿತ 23 ವಿಭಾಗಕ್ಕೆ ಹಣ ಖರ್ಚು ಮಾಡಿದೆ. ರಾಜವಂಶಸ್ಥರಿಗೆ ಗೌರವ ಧನ ನೀಡುವುದು ಸಹ ನಾನು ಹೊಸದಾಗಿ ಆರಂಭಿಸಿಲ್ಲ. ಎಲ್ಲವನ್ನು ಹಳೆ ಸಂಪ್ರದಾಯದಂತೆ ನಡೆಸಿದ್ದೇವೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ರಾಜ್ಯ ಸರ್ಕಾರದಿಂದ ದಸರಾಗೆ 10 ಕೋಟಿ ರೂ. ಬಿಡುಗಡೆ ಆಗಿತ್ತು. ಮುಡಾ ಸಹ 5 ಕೋಟಿ ರೂ. ಹಣ ನೀಡಲಿದೆ. ಬಾಕಿ ಹಣವನ್ನು ಏನು ಮಾಡಬೇಕು ಅಂತ ಸಿಎಂ ಯಡಿಯೂರಪ್ಪ ಅವರ ಗಮನಕ್ಕೆ ತಂದು ಕೆಲಸ ಮಾಡುತ್ತೇವೆ ಎಂದು ಸಚಿವರು ಮಾಹಿತಿ ನೀಡಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications