ಡಿಕೆ ಶಿವಕುಮಾರ್‌ಗಾಗಿ ಉರುಳು ಸೇವೆ ಮಾಡಿ ಅಭಿಮಾನಿ

ಮೈಸೂರು, ಜೂನ್ 15: ಡಿಕೆ ಶಿವಕುಮಾರ್‌ಗಾಗಿ ಅಭಿಮಾನಿಯೊಬ್ಬರು ನಂಜುಂಡೇಶ್ವನ ಮೊರೆ ಹೋಗಿದ್ದಾರೆ. ಪ್ರತಿಜ್ಞಾ ವಿಧಿ ಸುಸೂತ್ರವಾಗಿ ನೇರವೇರಲು ದೇವರಿಗೆ ಪ್ರಾರ್ಥನೆ ಮಾಡಿದ್ದಾರೆ.

ನಂಜುಂಡೇಶ್ವರನ ಸನ್ನಿಧಿಗೆ ಹೋಗಿ ಉರುಳು ಸೇವೆ ಮಾಡಿದ್ದಾರೆ. ಉರುಳು ಸೇವೆ ಮಾಡಿ ನಂಜುಂಡೇಶ್ವರನಿಗೆ ಹರಕೆ ಹೊತ್ತಿದ್ದಾರೆ. ಕಪಿಲಾ ನದಿಯಲ್ಲಿ ಮಿಂದು ವಿಷಕಂಠನ ಸನ್ನಿದಿಯಲ್ಲಿ ಉರುಳು ಸೇವೆ ಮಾಡಿದ್ದಾರೆ. ಯಾವುದೇ ಅಡಚಣೆ ಆಗದೇ ಅಧಿಕಾರ ಸ್ವೀಕಾರ ಕಾರ್ಯ ನೆರವೇರಲಿ ಅಂತ ನಂಜುಂಡನ ಬಳಿ ಕೇಳಿಕೊಂಡಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಮಾರ್ ಡಿಕೆ ಶಿವಕುಮಾರ್‌ ಅವರ ದೊಡ್ಡ ಅಭಿಮಾನಿಯಾಗಿದ್ದು, ಪೂಜೆ, ಉರುಳು ಸೇವೆ ಮಾಡುವ ಮೂಲಕ ತನ್ನ ಅಭಿಮಾನ ವ್ಯಕ್ತಪಡಿಸಿದ್ದಾರೆ.

DK Shivakumar Fan Did Pooja In Nanjundeshwara Temple For Prathijna Event

ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಪದಗ್ರಹಣ ಕಾರ್ಯಕ್ಕೆ ಕೊರೊನಾ ಅಡ್ಡಿಯಾಗಿತ್ತು. ಪ್ರತಿಜ್ಞಾ ವಿಧಿ ಕಾರ್ಯಕ್ರಮಕ್ಕೆ ಸರ್ಕಾರ ಬ್ರೇಕ್ ಹಾಕಿತ್ತು. ಒಂದಾಲ್ಲಾ ಒಂದು ತೊಡಕಿನಿಂದ ಅಧಿಕಾರ ಸ್ವೀಕಾರ ಕಾರ್ಯಕ್ರಮ ಮುಂದೆ ಹೋಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+