ಡಿಕೆ ಶಿವಕುಮಾರ್ ಜಮೀನು ಹೇಗೆ ಬರೆಸಿಕೊಂಡಿದ್ದಾರೆ ಗೊತ್ತಾ?- ಕನಕಪುರ ಬಂಡೆಗೆ ಹೊಡೆದ ದಳಪತಿ
ಬೆಂಗಳೂರು ಆಗಸ್ಟ್ 4: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಮೈಸೂರು ಚಲೋ ಪಾದಯಾತ್ರೆಯನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ಜಮೀನು ಹೇಗೆ ಬರೆಸಿಕೊಂಡಿದ್ದಾರೆ ಎನ್ನುವುದನ್ನು ವಿವರಿಸಿದ್ದಾರೆ.
ನಿವೃತ್ತ ಯೋಧನ ಪುತ್ರಿಯನ್ನು ಕಿಡ್ನ್ಯಾಪ್ ಮಾಡಿ ಆಸ್ತಿ ಕೊಡದಿದ್ದರೆ ಮಗಳನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಆಸ್ತಿ ಬರೆಸಿಕೊಂಡಿದ್ದಾರೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಅಜ್ಜಯ್ಯ ದೇವಸ್ಥಾನದ ಪಕ್ಕದಲ್ಲಿನ ಜಾಗವನ್ನು ನಿವೃತ್ತ ಯೋಧನ ಪುತ್ರಿಯನ್ನು ಅಪಹರಿಸುವ ಮೂಲಕ ಡಿಕೆ ಶಿವಕುಮಾರ್ ಅವರು ಬರೆಸಿಕೊಂಡಿದ್ದಾರೆಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ದೂರಿದ್ದಾರೆ. ಅಲ್ಲದೆ ಸದಾಶಿವ ನಗರದಲ್ಲಿ ವಿಧವೆಯರಿಗೆ ಬೆದರಿಸಿ ಆಸ್ತಿಯನ್ನು ಲಪಟಾಯಿಸಿದ್ದಾರೆ ಎಂದು ಅವರು ವಾಗ್ದಾಳಿ ಮಾಡಿದರು.
ಇಷ್ಟಲ್ಲದೇ ಬಿಡದಿ ಕಾಲೇಜು ಜಾಗ ಬಡ ಬ್ರಾಹ್ಮಣನದ್ದು, ದಲಿತರಿಗೆಂದು ಶಾಂತಿನಗರ ಹೌಸಿಂಗ್ ಸೊಸೈಟಿಗೆ ಕೊಟ್ಟ ಭೂಮಿಯೂ ಗುಳುಂ ಎನಿಸಿದ್ದಾರೆ. ನಾನು ಚಲನಚಿತ್ರ ಪ್ರದರ್ಶಕನಾಗಿ ಕೆಲಸ ಮಾಡ್ತಿದ್ದಾಗ 15 ವರ್ಷದ ಹಿಂದೆ 45 ಎಕರೆ ಭೂಮಿ ಖರೀದಿ ಮಾಡಿದ್ದೇನೆ. ನನ್ನಲ್ಲಿ ಅದೇ ಆಸ್ತಿ ಇದೆ. ಆ ಆಸ್ತಿ ಇನ್ನೂ ಕೂಡ ಹೆಚ್ಚಾಗಿಲ್ಲ. ನಿಮ್ಮ ಆಸ್ತಿ ಬ್ಲ್ಯಾಕ್ ಆಂಡ್ ವೈಟ್ ಟಿವಿ ಯಿಂದ ವಿಸಿಆರ್ ಆಗಿದೆ. ಇದರಿಂದ ಪ್ರಾರಂಭವಾಗಿ ಯಾವ್ಯಾವ ರೀತಿ ನಡೆದುಕೊಂಡಿದ್ದೀರಿ ಎಂದು ಕಿಡಿಕಾರಿದರು.
ಶಾಂತಿನಗರ ಹೌಸಿಂಗ್ ಸೊಸೈಟಿಗೆ ದಲಿತರಿಗೆ ಕೊಟ್ಟ ಭೂಮಿಯನ್ನು ಯಾವ ರೀತಿ ಬರೆಸಿಕೊಂಡಿದ್ದಾರೆ ಎನ್ನುವ ಬಗ್ಗೆ ಸಿದ್ದರಾಮಯ್ಯ ಅವರಿಗೆ ಗೊತ್ತೇ ಇಲ್ವಾ? ಆಗ ರಾಮಕೃಷ್ಣ ಹೆಗಡೆ ಸಿಎಂ ಆಗಿದ್ದರು. ಎಚ್ಡಿಕೆ ಆಸ್ತಿ ಬಗ್ಗೆ ಮಾತನಾಡುವ ನೈತಿಕತೆ ಡಿಕೆ ಶಿವಕುಮಾರ್ ಅವರಿಗೆ ಇದ್ಯಾ? ನಾನು ಜಮೀನು ಖರೀದಿ ಮಾಡಿದಾಗ ಯಾರಿಗೂ ಮೋಸ ಮಾಡಿಲ್ಲ. ದೌರ್ಜನ್ಯದಿಂದ ಆಸ್ತಿ ಖರೀದಿ ಮಾಡಿಲ್ಲ. ಅಷ್ಟೇ ಅಲ್ಲ ನನ್ನ ಅಧಿಕಾರವನ್ನು ನಾನು ದುರುಪಯೋಗ ಮಾಡಿಕೊಂಡಿಲ್ಲ. ಹೀಗಂತ ಯಾರಾದರೂ ಹೇಳಿದರೆ ನಾನು ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ.

ವ್ಯವಹಾರ ನಡೆಸುತ್ತಿದ್ದ ಕೃಷ್ಣ ಮೂರ್ತಿ ಕೆಎಸ್ಸಿನಲ್ಲಿ ಸಾಲ ಪಡೆದುಕೊಂಡಿದ್ದರು. ಕೃಷ್ಣ ಮೂರ್ತಿ ಒಬ್ಬ ಬಡ ಬ್ರಾಹ್ಮಣ. ಅವರಿಗೆ ಸಾಲ ತೀರಿಸಲಾಗದೇ ಇದ್ದಾಗ ಅಧಿಕಾರ ದುರುಪಯೋಗ ಪಡೆಸಿಕೊಂಡು ಐಕಾಸ್ ನರ್ಸಿಂಗ್ ಕಾಲೇಜು ಭೂಮಿಯನ್ನು ಬರೆಸಿಕೊಂಡರು.
ಇನ್ನೂ ನಿವೃತ್ತ ಯೋಧನ ಮಗಳನ್ನು ಕಿಡ್ನ್ಯಾಪ್ ಮಾಡಿ ಹೆದರಿಸಿ ಭೂಮಿಯನ್ನು ಬರೆಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಸದಾಶಿವ ನಗರದಲ್ಲಿ ಮೂರು ಜನ ವಿಧವಾ ತಾಯಂದಿರಾಮೇಲೆ ಒತ್ತಡ ಹೇರಿ ಭೂಮಿ ಕಬಳಿಸಿದ್ದಾರೆ. ಹೀಗೆ ಹೇಳ್ತಾ ಹೋದರೆ ಪುಟಗಟ್ಟಲೆ ಇದೆ. ಇದರ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಹೆಚ್ಡಿ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ವಿರುದ್ಧ ದೂರಿದ್ದಾರೆ.
ಏನು ಬಿಚ್ಚಪ್ಪ ಬಿಚ್ಚೋಕೆ ಏನಿದೆ? ನಾನು ಕಂಡೋರ ಜಮೀನು ಹೊಡೆಯೋಕೆ ಹೋಗಿಲ್ಲ. ಬಿಚ್ಚೋಕೆ ಹೋದರೆ ಪುಟಗಟ್ಟಲೆ ಇದೆ ನಿಮ್ಮದು. ತನಿಖೆಗೆ ಹತ್ತತ್ತು ಸಿಬಿಐ ತಂಡ ಬೇಕು ಕಡಿಮೆ ಸಾಕಾಗಲ್ಲ. ನಾನು ಅಗೌರವಯುತ ಕೆಲಸ ಮಾಡಿದರೆ ನನಗೆ ಕೇಂದ್ರ ಸಚಿವ ಸ್ಥಾನ ಕೊಡುತ್ತಿರಲಿಲ್ಲ ಎಂದು ಹೇಳಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications