ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರತೀಯ ಸೇನೆಗೆ 1 ಕೋಟಿ ರೂ.ದೇಣಿಗೆ ನೀಡಿದ ಮೈಸೂರಿನ ಡಾ. ಚಂದ್ರಶೇಖರ್

|
Google Oneindia Kannada News

ಮೈಸೂರು, ಮಾರ್ಚ್ 7: ಮೈಸೂರಿನಲ್ಲಿ ವೈದ್ಯರೊಬ್ಬರು ಸದ್ದಿಲ್ಲದೆ ಭಾರತೀಯ ವಾಯುಸೇನೆಗೆ ತಮ್ಮದೇನಾದರೂ ಕೊಡುಗೆ ನೀಡಬೇಕೆಂದು ಮನಸ್ಸು ಮಾಡಿ ರಕ್ಷಣಾ ನಿಧಿಗೆ ಬರೋಬ್ಬರಿ ಒಂದು ಕೋಟಿ ರೂ. ಮೊತ್ತವನ್ನು ನೀಡಿದ್ದಾರೆ.

ಹೌದು, ಭಾರತೀಯ ಸೇನೆಯ ರಕ್ಷಣಾ ನಿಧಿಗೆ 1 ಕೋಟಿ ರೂ. ಹಣವನ್ನು ದೇಣಿಗೆ ನೀಡುವ ಮೂಲಕ ಯೋಧರ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ ವೈದ್ಯ ಚಂದ್ರಶೇಖರ್. ಬುಧವಾರ (ಮಾ.06) ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಪ್ರಬುದ್ಧರ ಗೋಷ್ಠಿ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೆ ಚಂದ್ರಶೇಖರ್, ದೇಣಿಗೆ ಹಣದ ಚೆಕ್ ನೀಡಿದ್ದಾರೆ.

Doctor Chandrashekhar has given Rs 1 crore to the Indian Army

ಪುಲ್ವಾಮಾ ದಾಳಿ ಹುತಾತ್ಮರಿಗೆ ಹಮೀದ್ ಕೊಟ್ಟ ಕೊಡುಗೆ ಮರೆಯುವಂತಿಲ್ಲಪುಲ್ವಾಮಾ ದಾಳಿ ಹುತಾತ್ಮರಿಗೆ ಹಮೀದ್ ಕೊಟ್ಟ ಕೊಡುಗೆ ಮರೆಯುವಂತಿಲ್ಲ

ನಗರದ ಗೋಕುಲಂ ಬಡಾವಣೆಯಲ್ಲಿರುವ ಆದಿತ್ಯಾ ಅಧಿಕಾರಿ ಆಸ್ಪತ್ರೆ ಮುಖ್ಯಸ್ಥರಾಗಿರುವ ಡಾ. ಚಂದ್ರಶೇಖರ್ ಅವರು ಯೋಧರಿಗಾಗಿ ಸಹಾಯಧನ ನೀಡಿದ್ದಾರೆ. ಇಷ್ಟು ಮೊತ್ತದ ಹಣವನ್ನು ಕೊಟ್ಟಿರುವ ಬಗ್ಗೆ ಯಾರೊಂದಿಗೂ ತಿಳಿಸದೆ, ತಮ್ಮ ಕೈಲಾದಷ್ಟು ಮಾಡಿರುವ ಸಹಾಯ ಅಭಿನಂದನಾರ್ಹವೇ ಸರಿ.

Doctor Chandrashekhar has given Rs 1 crore to the Indian Army

 ಕೊಡಗಿನ ಮಕ್ಕಳ ಶಿಕ್ಷಣಕ್ಕಾಗಿ ಮಿಡಿದ ಸಾವಿತ್ರಿ ಬಾ ಪುಲೆ ಚಿತ್ರ ತಂಡ ಕೊಡಗಿನ ಮಕ್ಕಳ ಶಿಕ್ಷಣಕ್ಕಾಗಿ ಮಿಡಿದ ಸಾವಿತ್ರಿ ಬಾ ಪುಲೆ ಚಿತ್ರ ತಂಡ

ಈಗಿನ ದಿನಮಾನಸದಲ್ಲಿ ಮಾಧ್ಯಮದ ಮುಂದೆ ಪ್ರಚುರಪಡಿಸಲು ಹಣ ನೀಡುವ ಜನರಿದ್ದಾರೆ. ಆದರೆ ಅವೆಲ್ಲವನ್ನು ಮೀರಿದಂತೆ ನಡೆದುಕೊಂಡ ಡಾ. ಚಂದ್ರಶೇಖರ್ ಅವರ ಕಾರ್ಯ ಮೆಚ್ಚುವಂತಹದ್ದು.

English summary
Mysore Doctor Chandrashekhar has given Rs 1 crore to the Indian Army. He is the Aadithya Adhikari Hospital head in the Gokulam area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X