ಶಾಸಕ ರಾಮದಾಸ್ ಗೆ ಹೃದಯಾಘಾತ; ಮಾಹಿತಿ ನೀಡಿದ ವೈದ್ಯರು
ಮೈಸೂರು, ಫೆಬ್ರವರಿ 11: "ಶಾಸಕ ಎಸ್.ಎ.ರಾಮದಾಸ್ ಆರೋಗ್ಯವಾಗಿದ್ದಾರೆ. ಇನ್ನು 2-3 ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ ಅಪೋಲೋ ಆಸ್ಪತ್ರೆಯ ವೈದ್ಯ ಡಾ.ಶ್ರೀಕಾಂತ್ ಉಡುಪ.
ನಿನ್ನೆ ಮಧ್ಯರಾತ್ರಿ ರಾಮದಾಸ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸ್ಟಂಟ್ ಅಳವಡಿಸಿದ್ದರು.
ಈ ಕುರಿತು ಮಾಹಿತಿ ನೀಡಿದ ವೈದ್ಯ ಶ್ರೀಕಾಂತ್ ಉಡುಪ, "ರಾತ್ರಿ 2.15 ಸುಮಾರಿನಲ್ಲಿ ಅವರಿಗೆ ಹೃದಯಾಘಾತ ಆಗಿತ್ತು. ಆಸ್ಪತ್ರೆಗೆ ಬಂದ ಕೂಡಲೇ ಶಸ್ತ್ರಚಿಕಿತ್ಸೆ ಮಾಡಿ ಸ್ಟಂಟ್ ಅಳವಡಿಸಲಾಗಿದೆ. ರಾಮದಾಸ್ ಅವರಿಗೆ ಸುಮಾರು ಆರು ತಿಂಗಳಿಂದ ತಲೆ ನೋವು ಇತ್ತು. ಜತೆಗೆ ಮಧುಮೇಹ ಕೂಡ ಇದೆ. ಎರಡಕ್ಕೂ ಅವರು ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು" ಎಂದು ಹೇಳಿದ್ದಾರೆ.

"ನಮ್ಮ ವೈದ್ಯಕೀಯ ನಿಯಮಗಳ ಪ್ರಕಾರ, ಸ್ಟಂಟ್ ಅಳವಡಿಸಿದ ಬಳಿಕ ಒಂದು ವರ್ಷದವರೆಗೆ ಮಾತ್ರೆ ಸೇವನೆ ಮಾಡಬೇಕಾಗುತ್ತೆ. ಅದರ ಹೊರತಾಗಿ ಬೇರೆ ಯಾವುದೇ ತೊಂದರೆ ಇಲ್ಲ. ಅವರ ಆಪ್ತರು, ಬೆಂಬಲಿಗರು ಆತಂಕಪಡುವ ಅಗತ್ಯವಿಲ್ಲ" ಎಂದಿದ್ದಾರೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications