900 ಅಕ್ರಮ ಗರ್ಭಪಾತ ಮಾಡಿದ ವೈದ್ಯನ ಬಂಧನ
ಬೆಂಗಳೂರು, ನವೆಂಬರ್ 27: ಕಳೆದ ಮೂರು ವರ್ಷಗಳಲ್ಲಿ ಸುಮಾರು 900 ಅಕ್ರಮ ಗರ್ಭಪಾತಗಳನ್ನು ನಡೆಸಿದ ವೈದ್ಯ ಮತ್ತು ಅವರ ಲ್ಯಾಬ್ ತಂತ್ರಜ್ಞನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಡಾ. ಚಂದನ್ ಬಲ್ಲಾಳ್ ಮತ್ತು ಅವರ ಲ್ಯಾಬ್ ಟೆಕ್ನಿಷಿಯನ್ ನಿಸಾರ್ ಎಂಬುವವರು ಮೈಸೂರು ನಗರದ ಆಸ್ಪತ್ರೆಯಲ್ಲಿ ನಡೆಸಿದ ಪ್ರತಿ ಗರ್ಭಪಾತಕ್ಕೆ ಸುಮಾರು 30,000 ರೂಪಾಯಿ ಶುಲ್ಕ ವಿಧಿಸಿದ್ದಾರೆ. ಕಳೆದ ವಾರ ಇಬ್ಬರನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದರೊಂದಿಗೆ ಆಸ್ಪತ್ರೆಯ ಮ್ಯಾನೇಜರ್ ಮೀನಾ ಮತ್ತು ಸ್ವಾಗತಕಾರ ರಿಜ್ಮಾ ಖಾನ್ ಅವರನ್ನು ಈ ತಿಂಗಳ ಆರಂಭದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ತಿಂಗಳು ಮೈಸೂರು ಸಮೀಪದ ಮಂಡ್ಯದ ಜಿಲ್ಲಾ ಕೇಂದ್ರ ಪಟ್ಟಣದಲ್ಲಿ ಇಬ್ಬರು ಆರೋಪಿಗಳಾದ ಶಿವಲಿಂಗೇಗೌಡ ಮತ್ತು ನಯನಕುಮಾರ್ ಅವರನ್ನು ಗರ್ಭಿಣಿ ಮಹಿಳೆಯನ್ನು ಕಾರಿನಲ್ಲಿ ಗರ್ಭಪಾತಕ್ಕೆ ಕರೆದೊಯ್ಯುತ್ತಿದ್ದಾಗ ಬಂಧಿಸುವ ಮೂಲಕ ಪೊಲೀಸರು ಲಿಂಗ ನಿರ್ಣಯ ಮತ್ತು ಹೆಣ್ಣು ಭ್ರೂಣಹತ್ಯೆ ದಂಧೆಯನ್ನು ಭೇದಿಸಿದ್ದರು.
ವಿಚಾರಣೆ ವೇಳೆ, ಆರೋಪಿಗಳು ಮಂಡ್ಯದಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನ್ ಸೆಂಟರ್ ಆಗಿ ಬಳಸುತ್ತಿದ್ದ ಬೆಲ್ಲದ ಘಟಕವನ್ನು ಪತ್ತೆಹಚ್ಚಿದ್ದರು. ನಂತರ ಪೊಲೀಸ್ ತಂಡವು ಸ್ಕ್ಯಾನ್ ಯಂತ್ರವನ್ನು ವಶಪಡಿಸಿಕೊಂಡಿತು. ಅದಕ್ಕೆ ಪರವಾನಗಿ ಅಥವಾ ಇತರ ಅಧಿಕೃತ ದಾಖಲೆಗಳನ್ನು ಹೊಂದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಆರೋಪಿ ವೈದ್ಯ ತನ್ನ ಸಹಚರರೊಂದಿಗೆ ಸೇರಿ ಮೈಸೂರು ಆಸ್ಪತ್ರೆಯಲ್ಲಿ ಸುಮಾರು 900 ಅಕ್ರಮ ಗರ್ಭಪಾತ ಮಾಡಿಸಿದ್ದು, ಪ್ರತಿ ಗರ್ಭಪಾತಕ್ಕೆ ಸುಮಾರು ₹30 ಸಾವಿರ ವಸೂಲಿ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ದಂಧೆಯಲ್ಲಿ ಭಾಗಿಯಾಗಿರುವ ಇತರ ಶಂಕಿತರನ್ನು ಬಂಧಿಸಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications