ಮೈಸೂರು ದೊಡ್ಡಕೆರೆ ಮೈದಾನ ಒಡೆಯರ್ ವಶಕ್ಕೆ
ಮೈಸೂರು, ಸೆಪ್ಟೆಂಬರ್ 2: ಕೋರ್ಟ್ ಆದೇಶದಂತೆ ಮೈಸೂರು ಹೃದಯಭಾಗದಲ್ಲಿ, ವಸ್ತುಪ್ರದರ್ಶನ ಪ್ರಾಧಿಕಾರದ ಬಳಿಯಿದ್ದ ದೊಡ್ಡಕೆರೆ ಮೈದಾನವನ್ನು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ.
ಸುಮಾರು 10 ಎಕರೆ 35 ಗುಂಟೆ ಪ್ರದೇಶ ಒಡೆಯರ್ ಗೆ ಸೇರಬೇಕಾಗಿದ್ದು, ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಅಲ್ಲದೆ ಈ ಪ್ರದೇಶ ಒಡೆಯರ್ ಕುಟುಂಬಕ್ಕೆ ಸೇರಬೇಕೆಂದು ಹೈಕೋರ್ಟ್ ತೀರ್ಪು ನೀಡಿ 8 ವಾರದೊಳಗೆ ಪ್ರಮೋದಾದೇವಿ ಅವರ ಹೆಸರಿಗೆ ಖಾತೆ ಮಾಡಿಸಿಕೊಡುವಂತೆ ಮೇ ತಿಂಗಳಿನಲ್ಲಿ ಕಂದಾಯ ಇಲಾಖೆಗೆ ಸೂಚಿಸಿತ್ತು.[ಏನು ತಿಂತೀರಿ, ಎಷ್ಟು ತಿಂತೀರಿ, ದಸರಾ ಆಹಾರ ಮೇಳಕ್ಕೆ ಬನ್ರೀ..]

ಈ ನಡುವೆ 8 ವಾರದೊಳಗಾಗಿ ಕಂದಾಯ ಇಲಾಖೆ ನಿಮ್ಮ ಹೆಸರಿಗೆ ಖಾತೆ ಮಾಡಿಕೊಡದಿದ್ದರೆ ನೀವೇ ಆ ಜಾಗವನ್ನು ಸುಪರ್ದಿಗೆ ಪಡೆಯಬಹುದು ಎಂಬ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪ್ರಮೋದಾ ದೇವಿಯವರು ಮೈದಾನವನ್ನು ವಶಕ್ಕೆ ಪಡೆದಿದ್ದಾರೆ. ಜೆಸಿಬಿ ಯಂತ್ರಗಳಿಂದ ಸ್ವಚ್ಛಗೊಳಿಸಿ, ತಂತಿ ಬೇಲಿ ಹಾಕಿಸಲಾಗುತ್ತಿದೆ.

ದೊಡ್ಡಕೆರೆ ಮೈದಾನದಲ್ಲಿನ 10 ಎಕರೆ 35 ಗುಂಟೆ ಪ್ರದೇಶವನ್ನು ಆದೇಶ ಹೊರಡಿಸಿದ 8 ವಾರಗಳೊಳಗಾಗಿ ರಾಣಿ ಪ್ರಮೋದಾ ದೇವಿಯವರ ಹೆಸರಿಗೆ ಖಾತೆ ಮಾಡಿಸಿಕೊಡುವಂತೆ ಮೇ 3ರಂದು ಹೈಕೋರ್ಟ್ ಕಂದಾಯ ಇಲಾಖೆಗೆ ಸೂಚಿಸಿತ್ತು. ಆದರೆ ಕಂದಾಯ ಅಧಿಕಾರಿಗಳು ಖಾತೆ ಮಾಡಿರಲಿಲ್ಲ.[ಮೈಸೂರು ದಸರಾ ಸಮಿತಿಗಳಿಗೆ ಅಧಿಕಾರಿಗಳ ನೇಮಕ]

ಸಾಮಾನ್ಯವಾಗಿ ದಸರಾ ಸಂದರ್ಭದಲ್ಲಿ ಇದೇ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಲಾಗುತ್ತಿತ್ತು. ಈ ಬಾರಿಯೂ ಅದಕ್ಕೆ ತಡೆಯೊಡ್ಡುವುದಿಲ್ಲ ಎಂದು ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದೇನಾಗುತ್ತದೋ ಕಾದು ನೋಡಬೇಕಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications