ಮೈಸೂರು ದೊಡ್ಡಕೆರೆ ಮೈದಾನ ಒಡೆಯರ್ ವಶಕ್ಕೆ
ಮೈಸೂರು, ಸೆಪ್ಟೆಂಬರ್ 2: ಕೋರ್ಟ್ ಆದೇಶದಂತೆ ಮೈಸೂರು ಹೃದಯಭಾಗದಲ್ಲಿ, ವಸ್ತುಪ್ರದರ್ಶನ ಪ್ರಾಧಿಕಾರದ ಬಳಿಯಿದ್ದ ದೊಡ್ಡಕೆರೆ ಮೈದಾನವನ್ನು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ.
ಸುಮಾರು 10 ಎಕರೆ 35 ಗುಂಟೆ ಪ್ರದೇಶ ಒಡೆಯರ್ ಗೆ ಸೇರಬೇಕಾಗಿದ್ದು, ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಅಲ್ಲದೆ ಈ ಪ್ರದೇಶ ಒಡೆಯರ್ ಕುಟುಂಬಕ್ಕೆ ಸೇರಬೇಕೆಂದು ಹೈಕೋರ್ಟ್ ತೀರ್ಪು ನೀಡಿ 8 ವಾರದೊಳಗೆ ಪ್ರಮೋದಾದೇವಿ ಅವರ ಹೆಸರಿಗೆ ಖಾತೆ ಮಾಡಿಸಿಕೊಡುವಂತೆ ಮೇ ತಿಂಗಳಿನಲ್ಲಿ ಕಂದಾಯ ಇಲಾಖೆಗೆ ಸೂಚಿಸಿತ್ತು.[ಏನು ತಿಂತೀರಿ, ಎಷ್ಟು ತಿಂತೀರಿ, ದಸರಾ ಆಹಾರ ಮೇಳಕ್ಕೆ ಬನ್ರೀ..]

ಈ ನಡುವೆ 8 ವಾರದೊಳಗಾಗಿ ಕಂದಾಯ ಇಲಾಖೆ ನಿಮ್ಮ ಹೆಸರಿಗೆ ಖಾತೆ ಮಾಡಿಕೊಡದಿದ್ದರೆ ನೀವೇ ಆ ಜಾಗವನ್ನು ಸುಪರ್ದಿಗೆ ಪಡೆಯಬಹುದು ಎಂಬ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪ್ರಮೋದಾ ದೇವಿಯವರು ಮೈದಾನವನ್ನು ವಶಕ್ಕೆ ಪಡೆದಿದ್ದಾರೆ. ಜೆಸಿಬಿ ಯಂತ್ರಗಳಿಂದ ಸ್ವಚ್ಛಗೊಳಿಸಿ, ತಂತಿ ಬೇಲಿ ಹಾಕಿಸಲಾಗುತ್ತಿದೆ.

ದೊಡ್ಡಕೆರೆ ಮೈದಾನದಲ್ಲಿನ 10 ಎಕರೆ 35 ಗುಂಟೆ ಪ್ರದೇಶವನ್ನು ಆದೇಶ ಹೊರಡಿಸಿದ 8 ವಾರಗಳೊಳಗಾಗಿ ರಾಣಿ ಪ್ರಮೋದಾ ದೇವಿಯವರ ಹೆಸರಿಗೆ ಖಾತೆ ಮಾಡಿಸಿಕೊಡುವಂತೆ ಮೇ 3ರಂದು ಹೈಕೋರ್ಟ್ ಕಂದಾಯ ಇಲಾಖೆಗೆ ಸೂಚಿಸಿತ್ತು. ಆದರೆ ಕಂದಾಯ ಅಧಿಕಾರಿಗಳು ಖಾತೆ ಮಾಡಿರಲಿಲ್ಲ.[ಮೈಸೂರು ದಸರಾ ಸಮಿತಿಗಳಿಗೆ ಅಧಿಕಾರಿಗಳ ನೇಮಕ]

ಸಾಮಾನ್ಯವಾಗಿ ದಸರಾ ಸಂದರ್ಭದಲ್ಲಿ ಇದೇ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಲಾಗುತ್ತಿತ್ತು. ಈ ಬಾರಿಯೂ ಅದಕ್ಕೆ ತಡೆಯೊಡ್ಡುವುದಿಲ್ಲ ಎಂದು ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದೇನಾಗುತ್ತದೋ ಕಾದು ನೋಡಬೇಕಾಗಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications