ತಿ.ನರಸಿಪುರದಲ್ಲಿ ಮಹದೇವಪ್ಪ ಪುತ್ರ ಸ್ಪರ್ಧಿಸುವುದು ನಿಜವೇ..?
ಮೈಸೂರು, ಏಪ್ರಿಲ್ 14: "ನಾನು ಕಾಂಗ್ರೆಸ್ ಟಿಕೇಟ್ ವಿಚಾರವಾಗಿ ಹೈಕಮಾಂಡ್ ಆದೇಶಕ್ಕೆ ಬದ್ಧನಾಗಿರುತ್ತೇನೆ. ಪಕ್ಷ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಸೂಚನೇ ನೀಡುತ್ತೋ ಅಲ್ಲಿ ನಿಲ್ಲುತ್ತೇನೆ. ಒಂದು ವೇಳೆ ಟಿಕೇಟ್ ಕೊಡದಿದ್ದರೆ ಪಕ್ಷಕ್ಕಾಗಿ ದುಡಿಯಲು ಸಿದ್ಧನಿದ್ದೇನೆ ಎಂದು ಶಾಸಕ ಮತ್ತು ಲೋಕೋಪಯೋಗಿ ಸಚಿವ ಡಾ.ಹೆಚ್ .ಸಿ ಮಹದೇಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಇಂದು(ಏ.14) ಪತ್ರಕರ್ತರೊಂದಿಗೆ ಮಾತನಾಡಿದ ಅವರು, "ನಾನು ಇಂತಹದ್ದೇ ಕ್ಷೇತ್ರಕ್ಕೆ ಟಿಕೇಟ್ ಕೊಡಿ ಅಂತ ಯಾವುದೇ ಅರ್ಜಿ ಹಾಕಿಲ್ಲ. ತಮ್ಮ ಮಗ ಸುನೀಲ್ ಬೋಸ್ ಜೆಡಿಎಸ್ ಸೇರುವ ಬಗ್ಗೆ ಚರ್ಚೆ ನಡೆದಿದೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ. ಆತ ಎಂದಿಗೂ ಆ ರೀತಿ ನಿರ್ಧಾರ ಮಾಡಿಲ್ಲ" ಎಂದು ತಮ್ಮ ಹಾಗೂ ಮಗನ ಸ್ಪರ್ಧೆ ವಿಚಾರದ ಗುಟ್ಟನ್ನು ಬಿಟ್ಟುಕೊಡದೆ ಜಾಣ ಪ್ರತಿಕ್ರಿಯೆ ನೀಡಿದರು ಮಹದೇವಪ್ಪ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
"ದೇಶದಲ್ಲಿ ಅಪಾಯದಲ್ಲಿರುವ ಸಂವಿಧಾನವನ್ನು ರಕ್ಷಣೆ ಮಾಡಬೇಕು. ಪ್ರಜಾಪ್ರಭುತ್ವವನ್ನು ಉಳಿಸಿ ಕೋಮು ಶಕ್ತಿಯನ್ನು ಮಟ್ಟಹಾಕಬೇಕಿದೆ. ಹಾಗಾಗಿ ಜಾತ್ಯತೀತ ಶಕ್ತಿಗಳು ಸಂಘಟನಾತ್ಮಕ ಹೋರಾಟಗಳ ಮೂಲಕ ಹೋರಾಡಬೇಕೆಂಬ ಸಿದ್ಧಾಂತವೇ ಅಂಬೇಡ್ಕರ್ ಸಿದ್ಧಾಂತ" ಎಂದು ಅಂಬೇಡ್ಕರ್ ಜಯಂತಿಯನ್ನು ನೆನಪಿಸಿಕೊಂಡರು.

ಮಹದೇವಪ್ಪ ಅವರು ತಮ್ಮ ಮಗ ಸುನಿಲ್ ಬೋಸ್ ಅವರಿಗೆ ತಮ್ಮ ಟಿ ನರಸಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟು, ತಾವು ಬೆಂಗಳೂರಿನ ಸಿವಿ ರಾಮನ್ ನಗರದಿಂದ ಸ್ಪರ್ಧಿಸುತ್ತಾರೆ, ಈ ಸಂಬಂಧ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ವದಂತಿ ಹರಿದಾಡಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಹೈಕಮಾಂಡ್ ಶಾಸಕರ ಮಕ್ಕಳಿಗೆ ಟಿಕೇಟ್ ನೀಡಲು ಮನಸ್ಸು ಮಾಡದಿರುವುದರಿಂದ ಅವರ ನಡೆ ಬದಲಾಗಿದೆ ಎನ್ನಲಾಗಿದೆ. ಏ.14 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗುವ ಎಲ್ಲಾ ಸಾಧ್ಯತೆಗಳಿರುವುದರಿಂದ ಯಾರ್ಯಾರಿಗೆ ಯಾವ್ಯಾವ ಕ್ಷೇತ್ರ ಎಂಬ ಕುರಿತು ಸ್ಪಷ್ಟ ಚಿತ್ರಣ ದೊರಕಲಿದೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications